AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಾನತುಗೊಂಡ ಬೆನ್ನಲ್ಲೇ ಬಿಆರ್​ಎಸ್ ಪಕ್ಷ ಮತ್ತು ಶಾಸಕ ಸ್ಥಾನ ತ್ಯಜಿಸಿದ ಕೆ ಕವಿತಾ; ಹುಷಾರಾಗಿರುವಂತೆ ಅಪ್ಪನಿಗೆ ಮಗಳ ಸಲಹೆ

K Kavitha resigns from BRS party primary membership: ಕೆ ಕವಿತಾ ಅವರು ಬಿಆರ್​ಎಸ್ ಪಕ್ಷ ಹಾಗೂ ಎಂಎಲ್​ಸಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿನ್ನೆಯಷ್ಟೇ ಬಿಆರ್​ಎಸ್ ಸಂಸ್ಥಾಪಕ ಕೆ ಚಂದ್ರಶೇಖರ್ ರಾವ್ ಅವರು ಕವಿತಾರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದರು. ಮಾಜಿ ಸಿಎಂ ಆದ ಕೆಸಿಆರ್ ಅವರ ಮಗಳಾದ ಕವಿತಾ ಅವರು ಮಾಜಿ ಸಚಿವ ಕೆಟಿಆರ್ ಅವರ ಸೋದರಿಯೂ ಹೌದು.

ಅಮಾನತುಗೊಂಡ ಬೆನ್ನಲ್ಲೇ ಬಿಆರ್​ಎಸ್ ಪಕ್ಷ ಮತ್ತು ಶಾಸಕ ಸ್ಥಾನ ತ್ಯಜಿಸಿದ ಕೆ ಕವಿತಾ; ಹುಷಾರಾಗಿರುವಂತೆ ಅಪ್ಪನಿಗೆ ಮಗಳ ಸಲಹೆ
ಕೆ ಕವಿತಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 03, 2025 | 2:13 PM

Share

ಹೈದರಾಬಾದ್, ಸೆಪ್ಟೆಂಬರ್ 3: ಭಾರತ್ ರಾಷ್ಟ್ರ ಸಮಿತಿ ಪಕ್ಷದಿಂದ (BRS- Bharat Rashtra Samithi) ಅಮಾನತುಗೊಂಡಿದ್ದ ಕೆ ಕವಿತಾ (K Kavitha) ಅವರು ಇಂದು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಹಾಗೆಯೇ, ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೂ (MLC) ಅವರು ರಾಜೀನಾಮೆ ಕೊಟ್ಟಿದ್ದಾರೆ. ಕವಿತಾ ಅವರು ಭಾರತ್ ರಾಷ್ಟ್ರ ಸಮಿತಿ ಸಂಸ್ಥಾಪಕ ಹಾಗೂ ಮಾಜಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಮಗಳು. ತಮ್ಮನ್ನು ಬಿಆರ್​ಎಸ್ ಪಕ್ಷದಿಂದ ದಿಢೀರನೇ ಉಚ್ಛಾಟನೆ ಮಾಡುವ ಕ್ರಮದಿಂದ ಬಹಳ ನೋವಾಯಿತು ಎಂದು ಕವಿತಾ ಅವರು ತಮ್ಮ ರಾಜೀನಾಮೆ ನಿರ್ಧಾರಕ್ಕೆ ಕಾರಣ ನೀಡಿದ್ದಾರೆ.

‘ಎಂಎಲ್​ಸಿ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ಕವಿತಾ ತಿಳಿಸಿದ್ದಾರೆ. ‘ನನ್ನ ರಾಜನಾಮೆ ಪತ್ರವನ್ನು ಸಭಾಧ್ಯಕ್ಷರು ಹಾಗೂ ಕೆ. ಚಂದ್ರಶೇಖರ್ ರಾವ್ ಅವರಿಗೆ ಕಳುಹಿಸುತ್ತಿದ್ದೇನೆ’ ಎಂದು ಹೇಳಿರುವ ಕವಿತಾ, ತಾನು ಯಾವುದೇ ಪಕ್ಷದೊಂದಿಗೆ ಹೋಗುತ್ತಿಲ್ಲ. ತೆಲಂಗಾಣ ಜಾಗೃತಿ ಸದಸ್ಯರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ರೆಸಿಸ್ಟೆನ್ಸ್ ಫ್ರಂಟ್​ಗೆ ಹಣದ ಹರಿವು; ಮಲೇಷ್ಯಾದ ನಂಟು; ಎನ್​ಐಎ ತನಿಖೆಯಲ್ಲಿ ಹೊಸ ಸಾಕ್ಷ್ಯ

ನಮ್ಮ ರಕ್ತ ಸಂಬಂಧ ಮುರಿಯುವ ಚಿತಾವಣಿ ನಡೆದಿದೆ: ಕವಿತಾ

‘ಕೆಸಿಆರ್ ಮತ್ತು ಕೆಟಿಆರ್ ಅವರು ನನ್ನ ಕುಟುಂಬ. ನಮ್ಮದು ರಕ್ತ ಸಂಬಂಧ. ಪಕ್ಷದಿಂದ ಅಮಾನತುಗೊಳ್ಳುವ ಕಾರಣಕ್ಕೆ ಈ ಬಾಂಧವ್ಯ ಮುರಿದುಬೀಳುವುದಿಲ್ಲ. ಆದರೆ, ಕೆಲ ವ್ಯಕ್ತಿಗಳು ತಮ್ಮ ವೈಯಕ್ತಿಕ ಮತ್ತು ರಾಜಕೀಯ ಹಿತಾಸಕ್ತಿಗೋಸ್ಕರ ನಮ್ಮ ಕುಟುಂಬದ ಅವನತಿ ಬಯಸುತ್ತಿದ್ದಾರೆ’ ಎಂದು ಕವಿತಾ ಆರೋಪಿಸಿದ್ದಾರೆ.

ಹರೀಶ್ ರಾವ್ ವಿರುದ್ಧ ಕವಿತಾ ಟೀಕೆ

ತಮ್ಮ ಕುಟುಂಬದ ವಿರುದ್ಧ ಮಸಲತ್ತು ನಡೆಸುತ್ತಿದ್ದಾರೆ ಎಂದು ತೆಲಂಗಾಣದ ಈಗಿನ ಸಿಎಂ ರೇವಂತ್ ರೆಡ್ಡಿ ಮತ್ತು ಬಿಆರ್​ಎಸ್ ನಾಯಕ ಹರೀಶ್ ರಾವ್ ಮೇಲೆ ಕವಿತಾ ಬೊಟ್ಟು ಮಾಡಿ ತೋರಿಸಿದ್ದಾರೆ.

ಇದನ್ನೂ ಓದಿ: ಅಪ್ಪನ ಪಕ್ಷದಿಂದಲೇ ಮಗಳ ಉಚ್ಛಾಟನೆ; ಬಿಆರ್​​ಎಸ್​​ನಿಂದ ಎಂಎಲ್‌ಸಿ ಕೆ. ಕವಿತಾ ಹೊರಕ್ಕೆ

‘ತಮ್ಮ ಸುತ್ತಲೂ ಇರುವ ಪಕ್ಷದ ಮುಖಂಡರ ಬಗ್ಗೆ ಹುಷಾರಾಗಿರುವಂತೆ ಅಪ್ಪನಿಗೆ ಮನವಿ ಮಾಡುತ್ತೇನೆ. ನೇರವಾಗಿಯೇ ಅವರಿಗೆ ಈ ವಿಚಾರ ಮಾತನಾಡಿದ್ದೇನೆ. ನಮ್ಮ ಕುಟುಂಬವನ್ನು ನಾಶ ಮಾಡಲು ರೇವಂತ್ ರೆಡ್ಡಿ ಮತ್ತು ಹರೀಶ್ ರಾವ್ ಒಂದು ಫ್ಲೈಟ್​ನಲ್ಲಿ ಕೂತು ಹುನ್ನಾರ ನಡೆಸಿದ್ದಾರೆ’ ಎಂದು ಕವಿತಾ ತಿಳಿಸಿದ್ದಾರೆ.

‘ಕಾಲೇಶ್ವರಂ ಪ್ರಾಜೆಕ್ಟ್ ಆರಂಭವಾದಾಗ ಹರೀಶ್ ರಾವ್ ನೀರಾವರಿ ಮಂತ್ರಿಯಾಗಿದ್ದರು. ಆದರೆ, ಪ್ರಕರಣಗಳಲ್ಲಿ ಅವರ ಹೆಸರು ಕೇಳಿಬರಲಿಲ್ಲ. ನನ್ನ ಕುಟುಂಬ ಸದಸ್ಯರ ಮೇಲೆ ಮಾತ್ರ ಯಾಕೆ ಪ್ರಕರಣ ದಾಖಲಾಯಿತು’ ಎಂದು ಕವಿತಾ ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?