AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaali Movie Row: ನನಗೆ ಕಾಳಿಯೆಂದರೆ ಮಾಂಸ ತಿನ್ನುವ, ಆಲ್ಕೋಹಾಲ್ ಸ್ವೀಕರಿಸುವ ದೇವತೆ; ಸಂಸದೆ ಮಹುವಾ ಮೊಯಿತ್ರಾ

ನಿಮ್ಮ ದೇವರನ್ನು ನಿಮಗೆ ಹೇಗೆ ಬೇಕೋ ಹಾಗೆ ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಇನ್ನೂ ಕೆಲವೆಡೆ ಅದನ್ನೇ ಧರ್ಮನಿಂದನೆ ಎಂದು ಪರಿಗಣಿಸುತ್ತಾರೆ ಎಂದು ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.

Kaali Movie Row: ನನಗೆ ಕಾಳಿಯೆಂದರೆ ಮಾಂಸ ತಿನ್ನುವ, ಆಲ್ಕೋಹಾಲ್ ಸ್ವೀಕರಿಸುವ ದೇವತೆ; ಸಂಸದೆ ಮಹುವಾ ಮೊಯಿತ್ರಾ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾImage Credit source: India Today
TV9 Web
| Updated By: ಸುಷ್ಮಾ ಚಕ್ರೆ|

Updated on:Jul 05, 2022 | 3:24 PM

Share

ಕಾಳಿ ಮಾತೆ ಸಿಗರೇಟ್ ಸೇದುತ್ತಿರುವ ಸಿನಿಮಾದ ಪೋಸ್ಟರ್​ (Kaali Film Poster) ಭಾರೀ ವಿವಾದ ಸೃಷ್ಟಿಸಿದೆ. ಈ ವಿವಾದಿತ ಪೋಸ್ಟರ್​ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra), ನನ್ನ ದೃಷ್ಟಿಯಲ್ಲಿ ಕಾಳಿಯೆಂದರೆ ಮಾಂಸ ತಿನ್ನುವ, ಆಲ್ಕೋಹಾಲ್ ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ನಿಮಗೆ ಹೇಗೆ ಬೇಕೋ ಹಾಗೆ ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಇನ್ನೂ ಕೆಲವು ಸ್ಥಳಗಳಲ್ಲಿ ಅದನ್ನೇ ಧರ್ಮನಿಂದನೆ ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.

ನೀವು ಸಿಕ್ಕಿಂಗೆ ಹೋದರೆ ಅಲ್ಲಿ ಭಕ್ತರು ಕಾಳಿ ದೇವಿಗೆ ವಿಸ್ಕಿಯನ್ನು ನೀಡುವುದನ್ನು ನೋಡಬಹುದು. ಆದರೆ, ನೀವು ಉತ್ತರ ಪ್ರದೇಶಕ್ಕೆ ಹೋಗಿ ಅಲ್ಲಿನ ಕಾಳಿ ದೇವಾಲಯದಲ್ಲಿ ದೇವಿಗೆ ವಿಸ್ಕಿಯನ್ನು ‘ನೈವೇದ್ಯ’ ಎಂದು ಹೇಳಿದರೆ ಅದನ್ನು ಧರ್ಮನಿಂದನೆ ಎಂದು ಕರೆಯುತ್ತಾರೆ ಎಂದು ಸಂಸದೆ ಮೊಯಿತ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕಾಳಿ ದೇವತೆ ಸಿಗರೇಟ್​ ಸೇದುತ್ತಿರುವ ಪೋಸ್ಟರ್​: ನಿರ್ದೇಶಕಿಯ ವಿರುದ್ಧ ದಾಖಲಾಯ್ತು ದೂರು

ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವ ಇತ್ತೀಚಿನ ಚಲನಚಿತ್ರದ ಪೋಸ್ಟರ್‌ನ ವಿವಾದದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಆ ಸಿನಿಮಾದ ಪೋಸ್ಟರ್ ಮೂಲಕ ಹಿಂದೂ ದೇವತೆಗೆ ಅವಮಾನ ಮಾಡಲಾಗಿದೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹಲವರು ಹೇಳಿದ್ದರು.

ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ವಿವಾದ ಭುಗಿಲೆದ್ದಿತ್ತು. ಕಾಳಿ ದೇವಿಯ ವೇಷಭೂಷಣವನ್ನು ಧರಿಸಿರುವ ಮಹಿಳೆಯನ್ನು ಪೋಸ್ಟರ್​​ನಲ್ಲಿ ನೋಡಬಹುದು. ಆ ಪೋಸ್ಟರ್​​ನಲ್ಲಿ ಕಾಳಿಯ ವೇಷ ಧರಿಸಿ ಆಕೆ ಸಿಗರೇಟ್ ಸೇದುತ್ತಿರುವುದನ್ನು ಕಾಣಬಹುದು. ಈ ಪೋಸ್ಟರ್ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಅನೇಕರು ಚಿತ್ರ ನಿರ್ಮಾಪಕರ ಬಂಧನಕ್ಕೆ ಒತ್ತಾಯಿಸಿದ್ದಾರೆ.

Published On - 3:22 pm, Tue, 5 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ