AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaali Movie Row: ನನಗೆ ಕಾಳಿಯೆಂದರೆ ಮಾಂಸ ತಿನ್ನುವ, ಆಲ್ಕೋಹಾಲ್ ಸ್ವೀಕರಿಸುವ ದೇವತೆ; ಸಂಸದೆ ಮಹುವಾ ಮೊಯಿತ್ರಾ

ನಿಮ್ಮ ದೇವರನ್ನು ನಿಮಗೆ ಹೇಗೆ ಬೇಕೋ ಹಾಗೆ ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಇನ್ನೂ ಕೆಲವೆಡೆ ಅದನ್ನೇ ಧರ್ಮನಿಂದನೆ ಎಂದು ಪರಿಗಣಿಸುತ್ತಾರೆ ಎಂದು ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.

Kaali Movie Row: ನನಗೆ ಕಾಳಿಯೆಂದರೆ ಮಾಂಸ ತಿನ್ನುವ, ಆಲ್ಕೋಹಾಲ್ ಸ್ವೀಕರಿಸುವ ದೇವತೆ; ಸಂಸದೆ ಮಹುವಾ ಮೊಯಿತ್ರಾ
ಟಿಎಂಸಿ ಸಂಸದೆ ಮಹುವಾ ಮೊಯಿತ್ರಾImage Credit source: India Today
TV9 Web
| Edited By: |

Updated on:Jul 05, 2022 | 3:24 PM

Share

ಕಾಳಿ ಮಾತೆ ಸಿಗರೇಟ್ ಸೇದುತ್ತಿರುವ ಸಿನಿಮಾದ ಪೋಸ್ಟರ್​ (Kaali Film Poster) ಭಾರೀ ವಿವಾದ ಸೃಷ್ಟಿಸಿದೆ. ಈ ವಿವಾದಿತ ಪೋಸ್ಟರ್​ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ (Mahua Moitra), ನನ್ನ ದೃಷ್ಟಿಯಲ್ಲಿ ಕಾಳಿಯೆಂದರೆ ಮಾಂಸ ತಿನ್ನುವ, ಆಲ್ಕೋಹಾಲ್ ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ನಿಮಗೆ ಹೇಗೆ ಬೇಕೋ ಹಾಗೆ ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ. ಕೆಲವು ಸ್ಥಳಗಳಲ್ಲಿ ವಿಸ್ಕಿಯನ್ನು ದೇವರಿಗೆ ಅರ್ಪಿಸಲಾಗುತ್ತದೆ. ಇನ್ನೂ ಕೆಲವು ಸ್ಥಳಗಳಲ್ಲಿ ಅದನ್ನೇ ಧರ್ಮನಿಂದನೆ ಎಂದು ಪರಿಗಣಿಸುತ್ತಾರೆ ಎಂದು ಹೇಳಿದ್ದಾರೆ.

ನೀವು ಸಿಕ್ಕಿಂಗೆ ಹೋದರೆ ಅಲ್ಲಿ ಭಕ್ತರು ಕಾಳಿ ದೇವಿಗೆ ವಿಸ್ಕಿಯನ್ನು ನೀಡುವುದನ್ನು ನೋಡಬಹುದು. ಆದರೆ, ನೀವು ಉತ್ತರ ಪ್ರದೇಶಕ್ಕೆ ಹೋಗಿ ಅಲ್ಲಿನ ಕಾಳಿ ದೇವಾಲಯದಲ್ಲಿ ದೇವಿಗೆ ವಿಸ್ಕಿಯನ್ನು ‘ನೈವೇದ್ಯ’ ಎಂದು ಹೇಳಿದರೆ ಅದನ್ನು ಧರ್ಮನಿಂದನೆ ಎಂದು ಕರೆಯುತ್ತಾರೆ ಎಂದು ಸಂಸದೆ ಮೊಯಿತ್ರಾ ಹೇಳಿದ್ದಾರೆ.

ಇದನ್ನೂ ಓದಿ: ಕಾಳಿ ದೇವತೆ ಸಿಗರೇಟ್​ ಸೇದುತ್ತಿರುವ ಪೋಸ್ಟರ್​: ನಿರ್ದೇಶಕಿಯ ವಿರುದ್ಧ ದಾಖಲಾಯ್ತು ದೂರು

ಕಾಳಿ ದೇವಿಯು ಸಿಗರೇಟ್ ಸೇದುತ್ತಿರುವ ಇತ್ತೀಚಿನ ಚಲನಚಿತ್ರದ ಪೋಸ್ಟರ್‌ನ ವಿವಾದದ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ಈ ಬಗ್ಗೆ ಮಾತನಾಡಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಆ ಸಿನಿಮಾದ ಪೋಸ್ಟರ್ ಮೂಲಕ ಹಿಂದೂ ದೇವತೆಗೆ ಅವಮಾನ ಮಾಡಲಾಗಿದೆ ಮತ್ತು ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಹಲವರು ಹೇಳಿದ್ದರು.

ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ನಂತರ ವಿವಾದ ಭುಗಿಲೆದ್ದಿತ್ತು. ಕಾಳಿ ದೇವಿಯ ವೇಷಭೂಷಣವನ್ನು ಧರಿಸಿರುವ ಮಹಿಳೆಯನ್ನು ಪೋಸ್ಟರ್​​ನಲ್ಲಿ ನೋಡಬಹುದು. ಆ ಪೋಸ್ಟರ್​​ನಲ್ಲಿ ಕಾಳಿಯ ವೇಷ ಧರಿಸಿ ಆಕೆ ಸಿಗರೇಟ್ ಸೇದುತ್ತಿರುವುದನ್ನು ಕಾಣಬಹುದು. ಈ ಪೋಸ್ಟರ್ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಅನೇಕರು ಚಿತ್ರ ನಿರ್ಮಾಪಕರ ಬಂಧನಕ್ಕೆ ಒತ್ತಾಯಿಸಿದ್ದಾರೆ.

Published On - 3:22 pm, Tue, 5 July 22

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ