AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ ‘ಶಿರಚ್ಛೇದ’ ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ

Kaali Row ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ?

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ 'ಶಿರಚ್ಛೇದ' ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ
ಲೀನಾ ಮಣಿಮೇಕಲೈ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 06, 2022 | 6:08 PM

Share

ಕಾಳಿ ಡಾಕ್ಯುಮೆಂಟರಿ ಪೋಸ್ಟರ್ (Kaali Poster Row) ವಿವಾದದ ನಡುವೆಯೇ ಅಯೋಧ್ಯೆ ಪುರೋಹಿತರೊಬ್ಬರು ನಿರ್ದೇಶಕಿ ಲೀನಾ ಮಣಿಮೇಕಲೈ(Leena Manimekalai) ಅವರಿಗೆ ಶಿರಚ್ಛೇದ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಲೀನಾ ಮತ್ತು ಅವರ ಡಾಕ್ಯುಮೆಂಟರಿ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಪರಿಣಾಮ ಎದುರಿಸಬೇಕಾದೀತು ಎಂದು ಅವರು ಬೆದರಿಕೆ ನೀಡಿದ್ದಾರೆ. ಜೂನ್ ತಿಂಗಳಲ್ಲಿ ಲೀನಾ ತಮ್ಮ ಡಾಕ್ಯುಮೆಂಟರಿ ‘ಕಾಳಿ’ಯ (Kaali) ಪೋಸ್ಟರ್ ಶೇರ್ ಮಾಡಿದ್ದರು. ಹಿಂದುತ್ವವಾದಿಗಳು ಆ ಪೋಸ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಗರೇಟ್ ಸೇದುವ ಕಾಳಿ ಕೈಯಲ್ಲಿ LGBTQ ಸಂಕೇತದ ಪ್ರೈಡ್ ಫ್ಲಾಗ್ ಹಿಡಿದಿರುವ ಪೋಸ್ಟರ್ ಇದಾಗಿದೆ. ಈ ಪೋಸ್ಟರ್ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಲಾಗಿದ್ದು ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಈಗಾಗಲೇ ಲೀನಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಹೊತ್ತಲ್ಲೇ ಅಯೋಧ್ಯೆಯಲ್ಲಿರುವ ಹನುಮಾನ್ ಗಾರ್ಹಿ ಮಂದಿರದ ಪುರೋಹಿತ ರಾಜು ದಾಸ್ ಲೀನಾ ಅವರಿಗೆ ಬೆದರಿಕೆಯೊಡ್ಡಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ಈ ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು ಮತ್ತು ಲೀನಾ ವಿಕರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜು ಒತ್ತಾಯಿಸಿದ್ದಾರೆ.

ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ? ಇದಾಗದಂತೆ ಮಾಡಲು ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು. ಡಾಕ್ಯುಮೆಂಟರಿ ಬಿಡುಗಡೆಯಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ರಾಜು ಹೇಳಿದ್ದಾರೆ. ಲೀನಾ ಅವರ ಕಾಳಿ ಡಾಕ್ಯುಮೆಂಟರಿ ಈಗಾಗಲ ಕೆನಡಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಪ್ರದರ್ಶನಗೊಂಡಿದೆ.

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ