AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ ‘ಶಿರಚ್ಛೇದ’ ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ

Kaali Row ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ?

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ 'ಶಿರಚ್ಛೇದ' ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ
ಲೀನಾ ಮಣಿಮೇಕಲೈ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 06, 2022 | 6:08 PM

Share

ಕಾಳಿ ಡಾಕ್ಯುಮೆಂಟರಿ ಪೋಸ್ಟರ್ (Kaali Poster Row) ವಿವಾದದ ನಡುವೆಯೇ ಅಯೋಧ್ಯೆ ಪುರೋಹಿತರೊಬ್ಬರು ನಿರ್ದೇಶಕಿ ಲೀನಾ ಮಣಿಮೇಕಲೈ(Leena Manimekalai) ಅವರಿಗೆ ಶಿರಚ್ಛೇದ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಲೀನಾ ಮತ್ತು ಅವರ ಡಾಕ್ಯುಮೆಂಟರಿ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಪರಿಣಾಮ ಎದುರಿಸಬೇಕಾದೀತು ಎಂದು ಅವರು ಬೆದರಿಕೆ ನೀಡಿದ್ದಾರೆ. ಜೂನ್ ತಿಂಗಳಲ್ಲಿ ಲೀನಾ ತಮ್ಮ ಡಾಕ್ಯುಮೆಂಟರಿ ‘ಕಾಳಿ’ಯ (Kaali) ಪೋಸ್ಟರ್ ಶೇರ್ ಮಾಡಿದ್ದರು. ಹಿಂದುತ್ವವಾದಿಗಳು ಆ ಪೋಸ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಗರೇಟ್ ಸೇದುವ ಕಾಳಿ ಕೈಯಲ್ಲಿ LGBTQ ಸಂಕೇತದ ಪ್ರೈಡ್ ಫ್ಲಾಗ್ ಹಿಡಿದಿರುವ ಪೋಸ್ಟರ್ ಇದಾಗಿದೆ. ಈ ಪೋಸ್ಟರ್ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಲಾಗಿದ್ದು ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಈಗಾಗಲೇ ಲೀನಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಹೊತ್ತಲ್ಲೇ ಅಯೋಧ್ಯೆಯಲ್ಲಿರುವ ಹನುಮಾನ್ ಗಾರ್ಹಿ ಮಂದಿರದ ಪುರೋಹಿತ ರಾಜು ದಾಸ್ ಲೀನಾ ಅವರಿಗೆ ಬೆದರಿಕೆಯೊಡ್ಡಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ಈ ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು ಮತ್ತು ಲೀನಾ ವಿಕರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜು ಒತ್ತಾಯಿಸಿದ್ದಾರೆ.

ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ? ಇದಾಗದಂತೆ ಮಾಡಲು ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು. ಡಾಕ್ಯುಮೆಂಟರಿ ಬಿಡುಗಡೆಯಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ರಾಜು ಹೇಳಿದ್ದಾರೆ. ಲೀನಾ ಅವರ ಕಾಳಿ ಡಾಕ್ಯುಮೆಂಟರಿ ಈಗಾಗಲ ಕೆನಡಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಪ್ರದರ್ಶನಗೊಂಡಿದೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು