AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ ‘ಶಿರಚ್ಛೇದ’ ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ

Kaali Row ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ?

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ 'ಶಿರಚ್ಛೇದ' ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ
ಲೀನಾ ಮಣಿಮೇಕಲೈ
TV9 Web
| Edited By: |

Updated on: Jul 06, 2022 | 6:08 PM

Share

ಕಾಳಿ ಡಾಕ್ಯುಮೆಂಟರಿ ಪೋಸ್ಟರ್ (Kaali Poster Row) ವಿವಾದದ ನಡುವೆಯೇ ಅಯೋಧ್ಯೆ ಪುರೋಹಿತರೊಬ್ಬರು ನಿರ್ದೇಶಕಿ ಲೀನಾ ಮಣಿಮೇಕಲೈ(Leena Manimekalai) ಅವರಿಗೆ ಶಿರಚ್ಛೇದ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಲೀನಾ ಮತ್ತು ಅವರ ಡಾಕ್ಯುಮೆಂಟರಿ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಪರಿಣಾಮ ಎದುರಿಸಬೇಕಾದೀತು ಎಂದು ಅವರು ಬೆದರಿಕೆ ನೀಡಿದ್ದಾರೆ. ಜೂನ್ ತಿಂಗಳಲ್ಲಿ ಲೀನಾ ತಮ್ಮ ಡಾಕ್ಯುಮೆಂಟರಿ ‘ಕಾಳಿ’ಯ (Kaali) ಪೋಸ್ಟರ್ ಶೇರ್ ಮಾಡಿದ್ದರು. ಹಿಂದುತ್ವವಾದಿಗಳು ಆ ಪೋಸ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಗರೇಟ್ ಸೇದುವ ಕಾಳಿ ಕೈಯಲ್ಲಿ LGBTQ ಸಂಕೇತದ ಪ್ರೈಡ್ ಫ್ಲಾಗ್ ಹಿಡಿದಿರುವ ಪೋಸ್ಟರ್ ಇದಾಗಿದೆ. ಈ ಪೋಸ್ಟರ್ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಲಾಗಿದ್ದು ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಈಗಾಗಲೇ ಲೀನಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಹೊತ್ತಲ್ಲೇ ಅಯೋಧ್ಯೆಯಲ್ಲಿರುವ ಹನುಮಾನ್ ಗಾರ್ಹಿ ಮಂದಿರದ ಪುರೋಹಿತ ರಾಜು ದಾಸ್ ಲೀನಾ ಅವರಿಗೆ ಬೆದರಿಕೆಯೊಡ್ಡಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ಈ ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು ಮತ್ತು ಲೀನಾ ವಿಕರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜು ಒತ್ತಾಯಿಸಿದ್ದಾರೆ.

ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ? ಇದಾಗದಂತೆ ಮಾಡಲು ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು. ಡಾಕ್ಯುಮೆಂಟರಿ ಬಿಡುಗಡೆಯಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ರಾಜು ಹೇಳಿದ್ದಾರೆ. ಲೀನಾ ಅವರ ಕಾಳಿ ಡಾಕ್ಯುಮೆಂಟರಿ ಈಗಾಗಲ ಕೆನಡಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಪ್ರದರ್ಶನಗೊಂಡಿದೆ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ