AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ ‘ಶಿರಚ್ಛೇದ’ ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ

Kaali Row ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ?

ಕಾಳಿ ಪೋಸ್ಟರ್ ವಿವಾದ: ನಿರ್ದೇಶಕಿ ಲೀನಾ ಮಣಿಮೇಕಲೈಗೆ 'ಶಿರಚ್ಛೇದ' ಬೆದರಿಕೆಯೊಡ್ಡಿದ ಅಯೋಧ್ಯೆಯ ಪುರೋಹಿತ
ಲೀನಾ ಮಣಿಮೇಕಲೈ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 06, 2022 | 6:08 PM

Share

ಕಾಳಿ ಡಾಕ್ಯುಮೆಂಟರಿ ಪೋಸ್ಟರ್ (Kaali Poster Row) ವಿವಾದದ ನಡುವೆಯೇ ಅಯೋಧ್ಯೆ ಪುರೋಹಿತರೊಬ್ಬರು ನಿರ್ದೇಶಕಿ ಲೀನಾ ಮಣಿಮೇಕಲೈ(Leena Manimekalai) ಅವರಿಗೆ ಶಿರಚ್ಛೇದ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಲೀನಾ ಮತ್ತು ಅವರ ಡಾಕ್ಯುಮೆಂಟರಿ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ ಪರಿಣಾಮ ಎದುರಿಸಬೇಕಾದೀತು ಎಂದು ಅವರು ಬೆದರಿಕೆ ನೀಡಿದ್ದಾರೆ. ಜೂನ್ ತಿಂಗಳಲ್ಲಿ ಲೀನಾ ತಮ್ಮ ಡಾಕ್ಯುಮೆಂಟರಿ ‘ಕಾಳಿ’ಯ (Kaali) ಪೋಸ್ಟರ್ ಶೇರ್ ಮಾಡಿದ್ದರು. ಹಿಂದುತ್ವವಾದಿಗಳು ಆ ಪೋಸ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಗರೇಟ್ ಸೇದುವ ಕಾಳಿ ಕೈಯಲ್ಲಿ LGBTQ ಸಂಕೇತದ ಪ್ರೈಡ್ ಫ್ಲಾಗ್ ಹಿಡಿದಿರುವ ಪೋಸ್ಟರ್ ಇದಾಗಿದೆ. ಈ ಪೋಸ್ಟರ್ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪ ಮಾಡಲಾಗಿದ್ದು ದೆಹಲಿ ಮತ್ತು ಉತ್ತರ ಪ್ರದೇಶ ಪೊಲೀಸರು ಈಗಾಗಲೇ ಲೀನಾ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಈ ಹೊತ್ತಲ್ಲೇ ಅಯೋಧ್ಯೆಯಲ್ಲಿರುವ ಹನುಮಾನ್ ಗಾರ್ಹಿ ಮಂದಿರದ ಪುರೋಹಿತ ರಾಜು ದಾಸ್ ಲೀನಾ ಅವರಿಗೆ ಬೆದರಿಕೆಯೊಡ್ಡಿದ್ದಾರೆ. ಮಾಧ್ಯಮಗಳ ವರದಿ ಪ್ರಕಾರ ಈ ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು ಮತ್ತು ಲೀನಾ ವಿಕರುದ್ಧ ಕ್ರಮ ಕೈಗೊಳ್ಳಬೇಕು ಎಂದು ರಾಜು ಒತ್ತಾಯಿಸಿದ್ದಾರೆ.

ನೂಪುರ್ ಶರ್ಮಾ ಅವರ ಹೇಳಿಕೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿತ್ತು. ಇಡೀ ಪ್ರಪಂಚದಲ್ಲಿ ಭೂಮಿ ಕಂಪಿಸಿತ್ತು. ನೀವೀಗ ಹಿಂದೂ ಆಚಾರ, ಧರ್ಮ, ಸಂಸ್ಕೃತಿಯನ್ನು ಲೇವಡಿ ಮಾಡಲು ಹೊರಟಿದ್ದೀರಾ ? ನೀವೇನು ಬಯಸುತ್ತೀರಿ? ನಾವು ನಿಮ್ಮ ರುಂಡ ಮುಂಡವನ್ನು ಬೇರೆ ಬೇರೆ ಮಾಡಬಹುದು. ಅದನ್ನು ನೀವು ಬಯಸುತ್ತೀರಾ? ಇದಾಗದಂತೆ ಮಾಡಲು ಡಾಕ್ಯುಮೆಂಟರಿಯನ್ನು ನಿಷೇಧಿಸಬೇಕು. ಡಾಕ್ಯುಮೆಂಟರಿ ಬಿಡುಗಡೆಯಾದರೆ ಪರಿಣಾಮ ಗಂಭೀರವಾಗಿರುತ್ತದೆ ಎಂದು ರಾಜು ಹೇಳಿದ್ದಾರೆ. ಲೀನಾ ಅವರ ಕಾಳಿ ಡಾಕ್ಯುಮೆಂಟರಿ ಈಗಾಗಲ ಕೆನಡಾ ಫಿಲ್ಮ್ ಫೆಸ್ಟಿವಲ್ ನಲ್ಲಿ ಪ್ರದರ್ಶನಗೊಂಡಿದೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!