AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ತಿಂಗಳಿಂದ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ; ಅರ್ಜಿಗಳನ್ನು ಈ ವೆಬ್‌ಸೈಟ್‌ನಲ್ಲಿ ಸಲ್ಲಿಸಿ

ಕೊವಿಡ್-19 ಬಳಿಕ ಐದು ವರ್ಷಗಳ ಅಂತರದ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಜೂನ್ ನಿಂದ ಪುನರಾರಂಭಗೊಳ್ಳಲಿದೆ. ಈ ಯಾತ್ರೆಗೆ ಅರ್ಜಿಗಳನ್ನು kmy.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಹಿ ಹಾಕಿದ ಒಪ್ಪಂದದಡಿಯಲ್ಲಿ ಡೆಮ್‌ಚೋಕ್ ಮತ್ತು ಡೆಪ್ಸಾಂಗ್‌ನ ಉಳಿದ ಎರಡು ಘರ್ಷಣೆ ಸ್ಥಳಗಳಲ್ಲಿ ಉಭಯ ದೇಶಗಳು ಸೈನ್ಯವನ್ನು ಬೇರ್ಪಡಿಸಿದ ನಂತರ ಸಂಬಂಧಗಳನ್ನು ಸುಧಾರಿಸಲು ಭಾರತ ಮತ್ತು ಚೀನಾ ಮಾಡಿದ ಪ್ರಯತ್ನಗಳ ಒಂದು ಭಾಗವಾಗಿ ಯಾತ್ರೆಯ ಪುನರಾರಂಭ ಮಾಡಲಾಗಿದೆ.

ಜೂನ್ ತಿಂಗಳಿಂದ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ; ಅರ್ಜಿಗಳನ್ನು ಈ ವೆಬ್‌ಸೈಟ್‌ನಲ್ಲಿ ಸಲ್ಲಿಸಿ
Kailash Mansarovar Yatra
ಸುಷ್ಮಾ ಚಕ್ರೆ
|

Updated on:Apr 26, 2025 | 7:37 PM

Share

ನವದೆಹಲಿ, ಏಪ್ರಿಲ್ 26: ಕೈಲಾಸ ಮಾನಸ ಸರೋವರ ಯಾತ್ರೆ ಜೂನ್ ತಿಂಗಳಿನಿಂದ ಪುನರಾರಂಭಗೊಳ್ಳಲಿದೆ ಎಂದು ಭಾರತ ಇಂದು ಘೋಷಿಸಿದೆ. 5 ವರ್ಷಗಳ ಅಂತರದ ನಂತರ ನಡೆಯುತ್ತಿರುವ ಈ ಯಾತ್ರೆಯ ಪುನರಾರಂಭ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸಹಿ ಹಾಕಿದ ಒಪ್ಪಂದದಡಿಯಲ್ಲಿ ಡೆಮ್‌ಚೋಕ್ ಮತ್ತು ಡೆಪ್ಸಾಂಗ್‌ನ ಉಳಿದ ಎರಡು ಘರ್ಷಣೆ ಸ್ಥಳಗಳಲ್ಲಿ ಉಭಯ ದೇಶಗಳು ಸೈನ್ಯವನ್ನು ರದ್ದುಗೊಳಿಸಿದ ನಂತರ ಸಂಬಂಧಗಳನ್ನು ಸುಧಾರಿಸಲು ಭಾರತ ಮತ್ತು ಚೀನಾ ಮಾಡಿದ ಪ್ರಯತ್ನಗಳ ಒಂದು ಭಾಗವೆಂದು ಪರಿಗಣಿಸಲಾಗುತ್ತಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಆಯೋಜಿಸಿರುವ ಕೈಲಾಸ ಮಾನಸ ಸರೋವರ ಯಾತ್ರೆ ಜೂನ್ ನಿಂದ ಆಗಸ್ಟ್ ತಿಂಗಳವರೆಗೆ ನಡೆಯಲಿದೆ.

2020ರಿಂದ ಕೈಲಾಸ ಮಾನಸ ಸರೋವರ ಯಾತ್ರೆ ನಡೆದಿರಲಿಲ್ಲ. “ಈ ವರ್ಷ 50 ಯಾತ್ರಿಗಳನ್ನು ಒಳಗೊಂಡ 5 ಬ್ಯಾಚ್‌ಗಳು ಮತ್ತು 50 ಯಾತ್ರಿಗಳನ್ನು ಒಳಗೊಂಡ 10 ಬ್ಯಾಚ್‌ಗಳು ಕ್ರಮವಾಗಿ ಉತ್ತರಾಖಂಡ ರಾಜ್ಯದ ಲಿಪುಲೇಖ್ ಪಾಸ್‌ನಲ್ಲಿ ಮತ್ತು ಸಿಕ್ಕಿಂ ರಾಜ್ಯದ ನಾಥು ಲಾ ಪಾಸ್‌ನಲ್ಲಿ ಕ್ರಾಸಿಂಗ್ ಮೂಲಕ ಪ್ರಯಾಣಿಸಲಿವೆ” ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಈ ಯಾತ್ರೆಗೆ ಅರ್ಜಿಗಳನ್ನು kmy.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದು.

ಇದನ್ನೂ ಓದಿ: Kailash Mansarovar Yatra 2025: ಐದು ವರ್ಷಗಳ ನಂತರ ಕೈಲಾಸ ಮಾನಸ ಸರೋವರ ಯಾತ್ರೆ ಪುನರಾರಂಭ

ಇದನ್ನೂ ಓದಿ
Image
ರಾಜ್ಯಸಭೆಯಲ್ಲಿ ಅಸಂಸದೀಯ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚನೆ
Image
ಬಸ್‌ ತಡೆದು ನಡು ರಸ್ತೆಯಲ್ಲಿ ಪಾನಮತ್ತ ಮಹಿಳೆಯ ಕಿರಿಕ್; ವಿಡಿಯೋ ವೈರಲ್‌
Image
ಛತ್ತೀಸ್​ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಸೇರಿ ಹಲವೆಡೆ ಇಡಿ ದಾಳಿ
Image
ಮೊಬೈಲ್​ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ಕೇಂದ್ರ ಸರ್ಕಾರವು ಪ್ರತಿ ವರ್ಷ ಜೂನ್ ಮತ್ತು ಸೆಪ್ಟೆಂಬರ್ ನಡುವೆ ಕೈಲಾಸ ಮಾನಸ ಸರೋವರ ಯಾತ್ರೆಯನ್ನು ಉತ್ತರಾಖಂಡದ ಲಿಪುಲೇಖ್ ಪಾಸ್ (1981ರಿಂದ) ಮತ್ತು ಸಿಕ್ಕಿಂನ ನಾಥು ಲಾ ಪಾಸ್ (2015ರಿಂದ) ಎರಡು ಅಧಿಕೃತ ಮಾರ್ಗಗಳ ಮೂಲಕ ಆಯೋಜಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:43 pm, Sat, 26 April 25

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್