AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ
ಕಾಳಿ ಚರಣ್ ಮಹಾರಾಜ್​
TV9 Web
| Edited By: |

Updated on: Apr 02, 2022 | 11:03 AM

Share

ರಾಯ್ಪುರದಲ್ಲಿ ನಡೆದಿದ್ದ ಧರ್ಮ ಸಂಸದ್​ನಲ್ಲಿ ಮಹಾತ್ಮಗಾಂಧಿಯನ್ನು ಅವಹೇಳನ ಮಾಡಿ, ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಧರ್ಮಗುರು ಕಾಳಿಚರಣ್ ಮಹಾರಾಜ್ (Kalicharan) ​​ರಿಗೆ ಬಿಲಾಸ್​ಪುರ ಹೈಕೋರ್ಟ್ ಜಾಮೀನು ನೀಡಿದೆ. ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೂಡ ದ್ವೇಷ ಭಾಷಣ ಮಾಡಿದ್ದ ಕಾಳಿ ಚರಣ್​​ರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಬಳಿಕ ಪುಣೆಯ ನ್ಯಾಯಾಲಯವೊಂದು ಈ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಆದರೆ ರಾಯ್ಪುರದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯವೊಂದು ಕಾಳಿ ಚರಣ್​​ರಿಗೆ ಬೇಲ್​ ನೀಡಲು ನಿರಾಕರಿಸಿತ್ತು. ಹಾಗಾಗಿ ಕಳೆದ 3 ತಿಂಗಳುಗಳಿಂದಲೂ ಅವರು ಜೈಲಿನಲ್ಲಿಯೇ ಇದ್ದರು.

ರಾಯ್ಪುರ ಧರ್ಮ ಸಂಸದ್​​ನಲ್ಲಿ ಇವರು ಮಹಾತ್ಮ ಗಾಂಧಿ ಬಗ್ಗೆ ಅವಹೇಳನ ಮಾಡಿ, ದ್ವೇಷ ಭಾಷಣ ಮಾಡಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿತ್ತು. ಅದಾದ ಬಳಿಕ ಮಧ್ಯಪ್ರದೇಶದ ಖುಜರಾಹೋದಿಂದ 2021ರ ಡಿಸೆಂಬರ್​ 30ರಂದು ರಾಯ್ಪುರ ಪೊಲೀಸರು ಬಂಧಿಸಿದ್ದರು.  ಅಲ್ಪಸಂಖ್ಯಾತರು  (ಇಸ್ಲಾಂ)  ರಾಜಕೀಯದ ಮೂಲಕ ಅಧಿಕಾರ  ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪರಮಗುರಿ ಇದೇ ಆಗಿದೆ. ದೇಶದಲ್ಲಿ ಇಂಥದ್ದೊಂದು ಸನ್ನಿವೇಶ ಸೃಷ್ಟಿಸಿ, ದುರಂತಕ್ಕೆ ಕಾರಣವಾಗಿದ್ದು ಎಲ್ಲರೂ ಮಹಾತ್ಮ ಎಂದು ಹೇಳುವ ಮೋಹನದಾಸ್​ ಕರಮಚಂದ್ ಗಾಂಧಿ. ಅವರನ್ನು ಕೊಂದ ನಾಥೂರಾಂ ಗೋಡ್ಸೆಗೆ ನಮನಗಳು ಎಂದು ಕಾಳಿಚರಣ್ ಹೇಳಿದ್ದು ವಿಡಿಯೊದಲ್ಲಿ ಕೇಳಿಸುತ್ತದೆ.

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಛತ್ತೀಸ್​ಗಢ್​ ಹೈಕೋರ್ಟ್​ ಕಾಳಿಚರಣ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂ.ಶ್ಯೂರಿಟಿ ಬಾಂಡ್ ಜತೆಗೆ 50 ಸಾವಿರ ರೂಪಾಯಿ ತುಂಬಬೇಕು ಎಂದು ಹೇಳಿದೆ. ವಿದೇಶಗಳಿಗೆ ಪ್ರಯಾಣ ಮಾಡುವಂತಿಲ್ಲ, ವಿಚಾರಣೆಗಾಗಿ ನ್ಯಾಯಾಲಯಕ್ಕೆ ತಪ್ಪದೆ ಹಾಜರಾಗಬೇಕು ಎಂದೂ ಸೂಚಿಸಿದೆ.

ಇದನ್ನೂ ಓದಿ: ಸಾಲದ ಸುಳಿಯಲ್ಲಿ ಸಿಲುಕಿ ರೈತ ಕಂಗಾಲು: ಕೃಷಿ ಜಮೀನು ಹರಾಜ್ ಹಾಕಲು ಬ್ಯಾಂಕ್ ಮುಂದು; ಸಿಧನೂರು ರೈತರ ಗೋಳು ಕೇಳೊರ್ಯಾರು?

Follow Us
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!