AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ
ಕಾಳಿ ಚರಣ್ ಮಹಾರಾಜ್​
TV9 Web
| Edited By: |

Updated on: Apr 02, 2022 | 11:03 AM

Share

ರಾಯ್ಪುರದಲ್ಲಿ ನಡೆದಿದ್ದ ಧರ್ಮ ಸಂಸದ್​ನಲ್ಲಿ ಮಹಾತ್ಮಗಾಂಧಿಯನ್ನು ಅವಹೇಳನ ಮಾಡಿ, ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಧರ್ಮಗುರು ಕಾಳಿಚರಣ್ ಮಹಾರಾಜ್ (Kalicharan) ​​ರಿಗೆ ಬಿಲಾಸ್​ಪುರ ಹೈಕೋರ್ಟ್ ಜಾಮೀನು ನೀಡಿದೆ. ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೂಡ ದ್ವೇಷ ಭಾಷಣ ಮಾಡಿದ್ದ ಕಾಳಿ ಚರಣ್​​ರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಬಳಿಕ ಪುಣೆಯ ನ್ಯಾಯಾಲಯವೊಂದು ಈ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಆದರೆ ರಾಯ್ಪುರದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯವೊಂದು ಕಾಳಿ ಚರಣ್​​ರಿಗೆ ಬೇಲ್​ ನೀಡಲು ನಿರಾಕರಿಸಿತ್ತು. ಹಾಗಾಗಿ ಕಳೆದ 3 ತಿಂಗಳುಗಳಿಂದಲೂ ಅವರು ಜೈಲಿನಲ್ಲಿಯೇ ಇದ್ದರು.

ರಾಯ್ಪುರ ಧರ್ಮ ಸಂಸದ್​​ನಲ್ಲಿ ಇವರು ಮಹಾತ್ಮ ಗಾಂಧಿ ಬಗ್ಗೆ ಅವಹೇಳನ ಮಾಡಿ, ದ್ವೇಷ ಭಾಷಣ ಮಾಡಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿತ್ತು. ಅದಾದ ಬಳಿಕ ಮಧ್ಯಪ್ರದೇಶದ ಖುಜರಾಹೋದಿಂದ 2021ರ ಡಿಸೆಂಬರ್​ 30ರಂದು ರಾಯ್ಪುರ ಪೊಲೀಸರು ಬಂಧಿಸಿದ್ದರು.  ಅಲ್ಪಸಂಖ್ಯಾತರು  (ಇಸ್ಲಾಂ)  ರಾಜಕೀಯದ ಮೂಲಕ ಅಧಿಕಾರ  ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪರಮಗುರಿ ಇದೇ ಆಗಿದೆ. ದೇಶದಲ್ಲಿ ಇಂಥದ್ದೊಂದು ಸನ್ನಿವೇಶ ಸೃಷ್ಟಿಸಿ, ದುರಂತಕ್ಕೆ ಕಾರಣವಾಗಿದ್ದು ಎಲ್ಲರೂ ಮಹಾತ್ಮ ಎಂದು ಹೇಳುವ ಮೋಹನದಾಸ್​ ಕರಮಚಂದ್ ಗಾಂಧಿ. ಅವರನ್ನು ಕೊಂದ ನಾಥೂರಾಂ ಗೋಡ್ಸೆಗೆ ನಮನಗಳು ಎಂದು ಕಾಳಿಚರಣ್ ಹೇಳಿದ್ದು ವಿಡಿಯೊದಲ್ಲಿ ಕೇಳಿಸುತ್ತದೆ.

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಛತ್ತೀಸ್​ಗಢ್​ ಹೈಕೋರ್ಟ್​ ಕಾಳಿಚರಣ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂ.ಶ್ಯೂರಿಟಿ ಬಾಂಡ್ ಜತೆಗೆ 50 ಸಾವಿರ ರೂಪಾಯಿ ತುಂಬಬೇಕು ಎಂದು ಹೇಳಿದೆ. ವಿದೇಶಗಳಿಗೆ ಪ್ರಯಾಣ ಮಾಡುವಂತಿಲ್ಲ, ವಿಚಾರಣೆಗಾಗಿ ನ್ಯಾಯಾಲಯಕ್ಕೆ ತಪ್ಪದೆ ಹಾಜರಾಗಬೇಕು ಎಂದೂ ಸೂಚಿಸಿದೆ.

ಇದನ್ನೂ ಓದಿ: ಸಾಲದ ಸುಳಿಯಲ್ಲಿ ಸಿಲುಕಿ ರೈತ ಕಂಗಾಲು: ಕೃಷಿ ಜಮೀನು ಹರಾಜ್ ಹಾಕಲು ಬ್ಯಾಂಕ್ ಮುಂದು; ಸಿಧನೂರು ರೈತರ ಗೋಳು ಕೇಳೊರ್ಯಾರು?

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!