AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ
ಕಾಳಿ ಚರಣ್ ಮಹಾರಾಜ್​
TV9 Web
| Edited By: |

Updated on: Apr 02, 2022 | 11:03 AM

Share

ರಾಯ್ಪುರದಲ್ಲಿ ನಡೆದಿದ್ದ ಧರ್ಮ ಸಂಸದ್​ನಲ್ಲಿ ಮಹಾತ್ಮಗಾಂಧಿಯನ್ನು ಅವಹೇಳನ ಮಾಡಿ, ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಧರ್ಮಗುರು ಕಾಳಿಚರಣ್ ಮಹಾರಾಜ್ (Kalicharan) ​​ರಿಗೆ ಬಿಲಾಸ್​ಪುರ ಹೈಕೋರ್ಟ್ ಜಾಮೀನು ನೀಡಿದೆ. ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೂಡ ದ್ವೇಷ ಭಾಷಣ ಮಾಡಿದ್ದ ಕಾಳಿ ಚರಣ್​​ರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಬಳಿಕ ಪುಣೆಯ ನ್ಯಾಯಾಲಯವೊಂದು ಈ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಆದರೆ ರಾಯ್ಪುರದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯವೊಂದು ಕಾಳಿ ಚರಣ್​​ರಿಗೆ ಬೇಲ್​ ನೀಡಲು ನಿರಾಕರಿಸಿತ್ತು. ಹಾಗಾಗಿ ಕಳೆದ 3 ತಿಂಗಳುಗಳಿಂದಲೂ ಅವರು ಜೈಲಿನಲ್ಲಿಯೇ ಇದ್ದರು.

ರಾಯ್ಪುರ ಧರ್ಮ ಸಂಸದ್​​ನಲ್ಲಿ ಇವರು ಮಹಾತ್ಮ ಗಾಂಧಿ ಬಗ್ಗೆ ಅವಹೇಳನ ಮಾಡಿ, ದ್ವೇಷ ಭಾಷಣ ಮಾಡಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿತ್ತು. ಅದಾದ ಬಳಿಕ ಮಧ್ಯಪ್ರದೇಶದ ಖುಜರಾಹೋದಿಂದ 2021ರ ಡಿಸೆಂಬರ್​ 30ರಂದು ರಾಯ್ಪುರ ಪೊಲೀಸರು ಬಂಧಿಸಿದ್ದರು.  ಅಲ್ಪಸಂಖ್ಯಾತರು  (ಇಸ್ಲಾಂ)  ರಾಜಕೀಯದ ಮೂಲಕ ಅಧಿಕಾರ  ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪರಮಗುರಿ ಇದೇ ಆಗಿದೆ. ದೇಶದಲ್ಲಿ ಇಂಥದ್ದೊಂದು ಸನ್ನಿವೇಶ ಸೃಷ್ಟಿಸಿ, ದುರಂತಕ್ಕೆ ಕಾರಣವಾಗಿದ್ದು ಎಲ್ಲರೂ ಮಹಾತ್ಮ ಎಂದು ಹೇಳುವ ಮೋಹನದಾಸ್​ ಕರಮಚಂದ್ ಗಾಂಧಿ. ಅವರನ್ನು ಕೊಂದ ನಾಥೂರಾಂ ಗೋಡ್ಸೆಗೆ ನಮನಗಳು ಎಂದು ಕಾಳಿಚರಣ್ ಹೇಳಿದ್ದು ವಿಡಿಯೊದಲ್ಲಿ ಕೇಳಿಸುತ್ತದೆ.

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಛತ್ತೀಸ್​ಗಢ್​ ಹೈಕೋರ್ಟ್​ ಕಾಳಿಚರಣ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂ.ಶ್ಯೂರಿಟಿ ಬಾಂಡ್ ಜತೆಗೆ 50 ಸಾವಿರ ರೂಪಾಯಿ ತುಂಬಬೇಕು ಎಂದು ಹೇಳಿದೆ. ವಿದೇಶಗಳಿಗೆ ಪ್ರಯಾಣ ಮಾಡುವಂತಿಲ್ಲ, ವಿಚಾರಣೆಗಾಗಿ ನ್ಯಾಯಾಲಯಕ್ಕೆ ತಪ್ಪದೆ ಹಾಜರಾಗಬೇಕು ಎಂದೂ ಸೂಚಿಸಿದೆ.

ಇದನ್ನೂ ಓದಿ: ಸಾಲದ ಸುಳಿಯಲ್ಲಿ ಸಿಲುಕಿ ರೈತ ಕಂಗಾಲು: ಕೃಷಿ ಜಮೀನು ಹರಾಜ್ ಹಾಕಲು ಬ್ಯಾಂಕ್ ಮುಂದು; ಸಿಧನೂರು ರೈತರ ಗೋಳು ಕೇಳೊರ್ಯಾರು?

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ