AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಕಾಳಿಚರಣ್ ಮಹಾರಾಜ್​ಗೆ ಜಾಮೀನು; 3 ತಿಂಗಳ ನಂತರ ಬಿಡುಗಡೆ ಭಾಗ್ಯ
ಕಾಳಿ ಚರಣ್ ಮಹಾರಾಜ್​
TV9 Web
| Edited By: |

Updated on: Apr 02, 2022 | 11:03 AM

Share

ರಾಯ್ಪುರದಲ್ಲಿ ನಡೆದಿದ್ದ ಧರ್ಮ ಸಂಸದ್​ನಲ್ಲಿ ಮಹಾತ್ಮಗಾಂಧಿಯನ್ನು ಅವಹೇಳನ ಮಾಡಿ, ನಾಥೂರಾಂ ಗೋಡ್ಸೆಯನ್ನು ಹೊಗಳಿ ಜೈಲು ಸೇರಿದ್ದ ಧರ್ಮಗುರು ಕಾಳಿಚರಣ್ ಮಹಾರಾಜ್ (Kalicharan) ​​ರಿಗೆ ಬಿಲಾಸ್​ಪುರ ಹೈಕೋರ್ಟ್ ಜಾಮೀನು ನೀಡಿದೆ. ಪುಣೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೂಡ ದ್ವೇಷ ಭಾಷಣ ಮಾಡಿದ್ದ ಕಾಳಿ ಚರಣ್​​ರನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು. ಬಳಿಕ ಪುಣೆಯ ನ್ಯಾಯಾಲಯವೊಂದು ಈ ಪ್ರಕರಣದಲ್ಲಿ ಜಾಮೀನು ನೀಡಿತ್ತು. ಆದರೆ ರಾಯ್ಪುರದಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿದ್ದ ಸ್ಥಳೀಯ ನ್ಯಾಯಾಲಯವೊಂದು ಕಾಳಿ ಚರಣ್​​ರಿಗೆ ಬೇಲ್​ ನೀಡಲು ನಿರಾಕರಿಸಿತ್ತು. ಹಾಗಾಗಿ ಕಳೆದ 3 ತಿಂಗಳುಗಳಿಂದಲೂ ಅವರು ಜೈಲಿನಲ್ಲಿಯೇ ಇದ್ದರು.

ರಾಯ್ಪುರ ಧರ್ಮ ಸಂಸದ್​​ನಲ್ಲಿ ಇವರು ಮಹಾತ್ಮ ಗಾಂಧಿ ಬಗ್ಗೆ ಅವಹೇಳನ ಮಾಡಿ, ದ್ವೇಷ ಭಾಷಣ ಮಾಡಿದ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿತ್ತು. ಅದಾದ ಬಳಿಕ ಮಧ್ಯಪ್ರದೇಶದ ಖುಜರಾಹೋದಿಂದ 2021ರ ಡಿಸೆಂಬರ್​ 30ರಂದು ರಾಯ್ಪುರ ಪೊಲೀಸರು ಬಂಧಿಸಿದ್ದರು.  ಅಲ್ಪಸಂಖ್ಯಾತರು  (ಇಸ್ಲಾಂ)  ರಾಜಕೀಯದ ಮೂಲಕ ಅಧಿಕಾರ  ಹಿಡಿಯಲು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪರಮಗುರಿ ಇದೇ ಆಗಿದೆ. ದೇಶದಲ್ಲಿ ಇಂಥದ್ದೊಂದು ಸನ್ನಿವೇಶ ಸೃಷ್ಟಿಸಿ, ದುರಂತಕ್ಕೆ ಕಾರಣವಾಗಿದ್ದು ಎಲ್ಲರೂ ಮಹಾತ್ಮ ಎಂದು ಹೇಳುವ ಮೋಹನದಾಸ್​ ಕರಮಚಂದ್ ಗಾಂಧಿ. ಅವರನ್ನು ಕೊಂದ ನಾಥೂರಾಂ ಗೋಡ್ಸೆಗೆ ನಮನಗಳು ಎಂದು ಕಾಳಿಚರಣ್ ಹೇಳಿದ್ದು ವಿಡಿಯೊದಲ್ಲಿ ಕೇಳಿಸುತ್ತದೆ.

ಕಾಳಿ ಚರಣ್​ ವಿರುದ್ಧ ಹಲವರು ದೂರು ನೀಡಿದ್ದರು. ಆದರೆ ಅವರನ್ನು ಬಂಧಿಸಿದ ರೀತಿಯನ್ನು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್​ ಮಿಶ್ರಾ, ಕೇಂದ್ರ ಸಚಿವ ಗಿರಿರಾಜ್​ ಸಿಂಗ್​ ಟೀಕಿಸಿದ್ದರು. ಛತ್ತೀಸ್​ಗಢ್​ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಛತ್ತೀಸ್​ಗಢ್​ ಹೈಕೋರ್ಟ್​ ಕಾಳಿಚರಣ್​​ರಿಗೆ ಷರತ್ತುಬದ್ಧ ಜಾಮೀನು ನೀಡಿದೆ. 1 ಲಕ್ಷ ರೂ.ಶ್ಯೂರಿಟಿ ಬಾಂಡ್ ಜತೆಗೆ 50 ಸಾವಿರ ರೂಪಾಯಿ ತುಂಬಬೇಕು ಎಂದು ಹೇಳಿದೆ. ವಿದೇಶಗಳಿಗೆ ಪ್ರಯಾಣ ಮಾಡುವಂತಿಲ್ಲ, ವಿಚಾರಣೆಗಾಗಿ ನ್ಯಾಯಾಲಯಕ್ಕೆ ತಪ್ಪದೆ ಹಾಜರಾಗಬೇಕು ಎಂದೂ ಸೂಚಿಸಿದೆ.

ಇದನ್ನೂ ಓದಿ: ಸಾಲದ ಸುಳಿಯಲ್ಲಿ ಸಿಲುಕಿ ರೈತ ಕಂಗಾಲು: ಕೃಷಿ ಜಮೀನು ಹರಾಜ್ ಹಾಕಲು ಬ್ಯಾಂಕ್ ಮುಂದು; ಸಿಧನೂರು ರೈತರ ಗೋಳು ಕೇಳೊರ್ಯಾರು?

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು