AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalyan Singh: ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ

ಕಲ್ಯಾಣ್ ಸಿಂಗ್ ನಿಧನ: 89 ವರ್ಷದ ಕಲ್ಯಾಣ್ ಸಿಂಗ್ ಅವರ ದೇಹ ಇದ್ದಕ್ಕಿದ್ದಂತೆ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

Kalyan Singh: ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ
ಕಲ್ಯಾಣ್ ಸಿಂಗ್
TV9 Web
| Edited By: |

Updated on:Aug 21, 2021 | 10:43 PM

Share

ದೆಹಲಿ: ಬಿಜೆಪಿ ಹಿರಿಯ ನಾಯಕ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ (Kalyan Singh) ಬಹು ಅಂಗಾಂಗ ವೈಫಲ್ಯದಿಂದ ದೆಹಲಿಯ ಸಂಜಯ್ ಗಾಂಧಿ ಪೋಸ್ಟ್​ ಗ್ರಾಜುಯೇಟ್ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್​ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.  89 ವರ್ಷದ ಕಲ್ಯಾಣ್ ಸಿಂಗ್ ಅವರ ದೇಹ ಇದ್ದಕ್ಕಿದ್ದಂತೆ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ಬಾರಿ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ   ಕಲ್ಯಾಣ್ ಸಿಂಗ್  ಸೇವೆ ಸಲ್ಲಿಸಿದ್ದರು. ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿತ್ತು. ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ, ಎಂಡೋಕ್ರಿನಾಲಜಿ ವೈದ್ಯರು ಸಿಂಗ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇಟ್ಟಿದ್ದರು. ಆನಂತರ ಮೂತ್ರ ವಿಸರ್ಜನೆಯಾಗದ ಹಿನ್ನೆಲೆಯಲ್ಲಿ ಡಯಾಲಿಸಿಸ್​ನಲ್ಲಿ ಇರಿಸಲಾಗಿತ್ತು. 

1991, ಜೂನ್ ತಿಂಗಳಿಂದ 1992 ಡಿಸೆಂಬರ್​ವರೆಗೆ ಮತ್ತು 1997 ಸೆಪ್ಟೆಂಬರ್​ನಿಂದ 1999 ನವೆಂಬರ್​ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಮೊದಲ ಅಧಿಕಾರಾವಧಿಯಲ್ಲಿ ಅಯೋಧ್ಯಾದ ಬಾಬ್ರೀ ಮಸೀದಿಯನ್ನು ಕರ ಸೇವಕರು ನಾಶಪಡಿಸಿದ ಘಟನೆಯೂ ನಡೆದಿತ್ತು. ಬಾಬ್ರೀ ಮಸೀದಿ ಧ್ವಂಸಗೊಂಡ ದಿನವೇ ಕಲ್ಯಾಣ್ ಸಿಂಗ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದಲೇ ಕಲ್ಯಾಣ್ ಸಿಂಗ್​ರನ್ನು ಇಂದಿಗೂ ಹಲವರು ನೆನಪಿಸಿಕೊಳ್ಳುತ್ತಾರೆ.

ಕಲ್ಯಾಣ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹಲವು ಬಿಜೆಪಿ ನಾಯಕರು ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ, ಮಾಯಾವತಿ, ಅಖಿಲೇಶ್ ಯಾದವ್ ಮತ್ತು ಹಲವು ಗಣ್ಯರು ಕಲ್ಯಾಣ್ ಸಿಂಗ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಮೂರು ದಿನ ಶೋಕಾಚರಣೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಆದೇಶಿಸಿದ್ದಾರೆ.

ಇದನ್ನೂ ಓದಿ: 

Kalyan Singh Health: ಮಾಜಿ ಸಿಎಂ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ; ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿ 

ಉತ್ತರ ಪ್ರದೇಶದ ಮಾಜಿ ಸಿಎಂ, ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ಆರೋಗ್ಯ ಸ್ಥಿತಿಯಲ್ಲಿ ಸುಧಾರಣೆ; ಶೀಘ್ರ ಗುಣಮುಖರಾಗಲು ಮೋದಿ ಪ್ರಾರ್ಥನೆ

(Kalyan Singh Former Uttar Pradesh CM died at 89)

Published On - 10:10 pm, Sat, 21 August 21