Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ರಾಜಕೀಯದಲ್ಲಿ ರಜನಿ-ಕಮಲ್​ ಮೈತ್ರಿ? ಸೂಚನೆ ನೀಡಿದ ಸ್ಟಾರ್​ ನಟ

ರಜನಿಕಾಂತ್​ ಹಾಗೂ ಕಮಲ್​ ಹಾಸನ್​ ಸಿನಿಮಾ ಹಿನ್ನಲೆಯವರು. ಎಲ್ಲಕ್ಕಿಂತ ಹೆಚ್ಚಾಗಿ ಇಬ್ಬರ ನಡುವೆ ಉತ್ತಮ ಗೆಳೆತನವಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಮೈತ್ರಿ ಬೆಳೆಯಲಿದೆ ಎನ್ನಲಾಗುತ್ತಿದೆ.

ತಮಿಳುನಾಡು ರಾಜಕೀಯದಲ್ಲಿ ರಜನಿ-ಕಮಲ್​ ಮೈತ್ರಿ? ಸೂಚನೆ ನೀಡಿದ ಸ್ಟಾರ್​ ನಟ
ರಜನಿಕಾಂತ್ ಮತ್ತು ಕಮಲ್ ಹಾಸನ್
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Dec 16, 2020 | 7:58 PM

ಚೆನ್ನೈ: ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆವ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದೆ. ನಟ ಕಮಲ್​ ಹಾಸನ್​ ಈಗಾಗಲೇ ಪಕ್ಷ ಘೋಷಣೆ ಮಾಡಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ತಮಿಳುನಾಡಿನ ಸೂಪರ್​ಸ್ಟಾರ್​ ನಟ ರಜನಿಕಾಂತ್​ ಸಹ ಪಕ್ಷ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಮಧ್ಯೆ, ಕಮಲ್​ ಹಾಸನ್​ ಹಾಗೂ ರಜನಿ ನಡುವೆ ಮೈತ್ರಿ ಏರ್ಪಡುವ ಸೂಚನೆ ಸಿಕ್ಕಿದೆ.

ರಜನಿಕಾಂತ್ ರಾಜಕೀಯಕ್ಕೆ ಬರುವುದಾಗಿ ಈ ಮೊದಲಿನಿಂದಲೂ ಹೇಳುತ್ತಲೇ ಬರುತ್ತಿದ್ದಾರೆ. ಆದರೆ, ಇದೇ ಮೊದಲ ಬಾರಿ ರಜನಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಡಿಸೆಂಬರ್​ 31ರಂದು ಹೊಸ ಪಕ್ಷದ ಹೆಸರನ್ನು ಸೂಪರ್​ಸ್ಟಾರ್​ ಬಹಿರಂಗಪಡಿಸಲಿದ್ದಾರೆ.

ರಜನಿಕಾಂತ್​ ಹಾಗೂ ಕಮಲ್​ ಹಾಸನ್​ ಸಿನಿಮಾ ಹಿನ್ನಲೆಯವರು. ಎಲ್ಲಕ್ಕಿಂತ ಹೆಚ್ಚಾಗಿ ಇಬ್ಬರ ನಡುವೆ ಉತ್ತಮ ಗೆಳೆತನವಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಮೈತ್ರಿ ಬೆಳೆಯಲಿದೆ ಎನ್ನಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮಕ್ಕಳ್​ ನೀದಿ ಮಯಮ್​ ಪಕ್ಷದ ಸ್ಥಾಪಕ ಕಮಲ್​ ಹಾಸನ್​ ಪ್ರತಿಕ್ರಿಯಿಸಿದ್ದಾರೆ.

ನಮ್ಮಿಬ್ಬರ ಸಿದ್ಧಾಂತಗಳಲ್ಲಿ ಹೋಲಿಕೆಯಿದ್ದರೆ ಮತ್ತು ಅದರಿಂದ ಜನರಿಗೆ ಪ್ರಯೋಜನವಾಗುತ್ತದೆ ಎಂದಾದರೆ ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧರಿದ್ದೇವೆ ಎಂದು ಕಮಲ್​ ಹಾಸನ್​ ಹೇಳಿದ್ದಾರೆ. ಈ ಮೂಲಕ ಮೈತ್ರಿ ಸೂಚನೆ ನೀಡಿರುವ ಅವರು, ‘ಇಬ್ಬರ ಮೈತ್ರಿಗೆ ಒಂದು ದೂರವಾಣಿ ಕರೆ ಮಾಡುವುದು ಮಾತ್ರ ಬಾಕಿ ಉಳಿದಿದೆ’ ಎಂದಿದ್ದಾರೆ.

ಮೈತ್ರಿ ಆದರೆ ಯಾರಿಗೆ ಲಾಭ? ಕಮಲ್​ ಹಾಸನ್​ ಈಗಾಗಲೇ ಪಕ್ಷ ಕಟ್ಟಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ರಜನಿಕಾಂತ್​ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಜನಿ ಪಕ್ಷ ಘೋಷಣೆ ಮಾಡುತ್ತಿದ್ದಾರೆ. ಪಕ್ಷ ಕಟ್ಟಲು, ಅಭ್ಯರ್ಥಿಗಳ ಆಯ್ಕೆ ಮಾಡಲು ಹಾಗೂ ಪ್ರಚಾರಕ್ಕೆ ರಜನಿಕಾಂತ್​ಗೆ ತುಂಬಾನೇ ಕಡಿಮೆ ಸಮಯಾವಕಾಶ ಸಿಗುತ್ತದೆ. ಹೀಗಾಗಿ, ಕಮಲ್​ ಹಾಸನ್​ ಜೊತೆ ಮೈತ್ರಿ ಮಾಡಿಕೊಂಡರೆ ರಜನಿಕಾಂತ್​ಗೆ ಲಾಭದಾಯಕವಾಗಲಿದೆ.

ಇನ್ನು, ರಜನಿ- ಕಮಲ್​ ಹಾಸನ್​ ಮೈತ್ರಿ ಮಾಡಿಕೊಂಡರೆ ಅಧಿಕಾರಕ್ಕಾಗಿ ಸ್ಪರ್ಧೆ ನಡೆಸುತ್ತಿರುವ ಎಐಡಿಎಂಕೆ ಹಾಗೂ ಡಿಎಂಕೆ ಪಕ್ಷಕ್ಕೆ ದೊಡ್ಡ ಪೆಟ್ಟು ಉಂಟಾಗಲಿದೆ. ಅಲ್ಲದೆ, ಮತಗಳು ಒಡೆಯುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

Published On - 7:56 pm, Wed, 16 December 20

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ