AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ರಾಜಕೀಯದಲ್ಲಿ ರಜನಿ-ಕಮಲ್​ ಮೈತ್ರಿ? ಸೂಚನೆ ನೀಡಿದ ಸ್ಟಾರ್​ ನಟ

ರಜನಿಕಾಂತ್​ ಹಾಗೂ ಕಮಲ್​ ಹಾಸನ್​ ಸಿನಿಮಾ ಹಿನ್ನಲೆಯವರು. ಎಲ್ಲಕ್ಕಿಂತ ಹೆಚ್ಚಾಗಿ ಇಬ್ಬರ ನಡುವೆ ಉತ್ತಮ ಗೆಳೆತನವಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಮೈತ್ರಿ ಬೆಳೆಯಲಿದೆ ಎನ್ನಲಾಗುತ್ತಿದೆ.

ತಮಿಳುನಾಡು ರಾಜಕೀಯದಲ್ಲಿ ರಜನಿ-ಕಮಲ್​ ಮೈತ್ರಿ? ಸೂಚನೆ ನೀಡಿದ ಸ್ಟಾರ್​ ನಟ
ರಜನಿಕಾಂತ್ ಮತ್ತು ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
| Edited By: |

Updated on:Dec 16, 2020 | 7:58 PM

Share

ಚೆನ್ನೈ: ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆವ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದೆ. ನಟ ಕಮಲ್​ ಹಾಸನ್​ ಈಗಾಗಲೇ ಪಕ್ಷ ಘೋಷಣೆ ಮಾಡಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ತಮಿಳುನಾಡಿನ ಸೂಪರ್​ಸ್ಟಾರ್​ ನಟ ರಜನಿಕಾಂತ್​ ಸಹ ಪಕ್ಷ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಮಧ್ಯೆ, ಕಮಲ್​ ಹಾಸನ್​ ಹಾಗೂ ರಜನಿ ನಡುವೆ ಮೈತ್ರಿ ಏರ್ಪಡುವ ಸೂಚನೆ ಸಿಕ್ಕಿದೆ.

ರಜನಿಕಾಂತ್ ರಾಜಕೀಯಕ್ಕೆ ಬರುವುದಾಗಿ ಈ ಮೊದಲಿನಿಂದಲೂ ಹೇಳುತ್ತಲೇ ಬರುತ್ತಿದ್ದಾರೆ. ಆದರೆ, ಇದೇ ಮೊದಲ ಬಾರಿ ರಜನಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಡಿಸೆಂಬರ್​ 31ರಂದು ಹೊಸ ಪಕ್ಷದ ಹೆಸರನ್ನು ಸೂಪರ್​ಸ್ಟಾರ್​ ಬಹಿರಂಗಪಡಿಸಲಿದ್ದಾರೆ.

ರಜನಿಕಾಂತ್​ ಹಾಗೂ ಕಮಲ್​ ಹಾಸನ್​ ಸಿನಿಮಾ ಹಿನ್ನಲೆಯವರು. ಎಲ್ಲಕ್ಕಿಂತ ಹೆಚ್ಚಾಗಿ ಇಬ್ಬರ ನಡುವೆ ಉತ್ತಮ ಗೆಳೆತನವಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಮೈತ್ರಿ ಬೆಳೆಯಲಿದೆ ಎನ್ನಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮಕ್ಕಳ್​ ನೀದಿ ಮಯಮ್​ ಪಕ್ಷದ ಸ್ಥಾಪಕ ಕಮಲ್​ ಹಾಸನ್​ ಪ್ರತಿಕ್ರಿಯಿಸಿದ್ದಾರೆ.

ನಮ್ಮಿಬ್ಬರ ಸಿದ್ಧಾಂತಗಳಲ್ಲಿ ಹೋಲಿಕೆಯಿದ್ದರೆ ಮತ್ತು ಅದರಿಂದ ಜನರಿಗೆ ಪ್ರಯೋಜನವಾಗುತ್ತದೆ ಎಂದಾದರೆ ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧರಿದ್ದೇವೆ ಎಂದು ಕಮಲ್​ ಹಾಸನ್​ ಹೇಳಿದ್ದಾರೆ. ಈ ಮೂಲಕ ಮೈತ್ರಿ ಸೂಚನೆ ನೀಡಿರುವ ಅವರು, ‘ಇಬ್ಬರ ಮೈತ್ರಿಗೆ ಒಂದು ದೂರವಾಣಿ ಕರೆ ಮಾಡುವುದು ಮಾತ್ರ ಬಾಕಿ ಉಳಿದಿದೆ’ ಎಂದಿದ್ದಾರೆ.

ಮೈತ್ರಿ ಆದರೆ ಯಾರಿಗೆ ಲಾಭ? ಕಮಲ್​ ಹಾಸನ್​ ಈಗಾಗಲೇ ಪಕ್ಷ ಕಟ್ಟಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ರಜನಿಕಾಂತ್​ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಜನಿ ಪಕ್ಷ ಘೋಷಣೆ ಮಾಡುತ್ತಿದ್ದಾರೆ. ಪಕ್ಷ ಕಟ್ಟಲು, ಅಭ್ಯರ್ಥಿಗಳ ಆಯ್ಕೆ ಮಾಡಲು ಹಾಗೂ ಪ್ರಚಾರಕ್ಕೆ ರಜನಿಕಾಂತ್​ಗೆ ತುಂಬಾನೇ ಕಡಿಮೆ ಸಮಯಾವಕಾಶ ಸಿಗುತ್ತದೆ. ಹೀಗಾಗಿ, ಕಮಲ್​ ಹಾಸನ್​ ಜೊತೆ ಮೈತ್ರಿ ಮಾಡಿಕೊಂಡರೆ ರಜನಿಕಾಂತ್​ಗೆ ಲಾಭದಾಯಕವಾಗಲಿದೆ.

ಇನ್ನು, ರಜನಿ- ಕಮಲ್​ ಹಾಸನ್​ ಮೈತ್ರಿ ಮಾಡಿಕೊಂಡರೆ ಅಧಿಕಾರಕ್ಕಾಗಿ ಸ್ಪರ್ಧೆ ನಡೆಸುತ್ತಿರುವ ಎಐಡಿಎಂಕೆ ಹಾಗೂ ಡಿಎಂಕೆ ಪಕ್ಷಕ್ಕೆ ದೊಡ್ಡ ಪೆಟ್ಟು ಉಂಟಾಗಲಿದೆ. ಅಲ್ಲದೆ, ಮತಗಳು ಒಡೆಯುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

Published On - 7:56 pm, Wed, 16 December 20

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ