AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ರಾಜಕೀಯದಲ್ಲಿ ರಜನಿ-ಕಮಲ್​ ಮೈತ್ರಿ? ಸೂಚನೆ ನೀಡಿದ ಸ್ಟಾರ್​ ನಟ

ರಜನಿಕಾಂತ್​ ಹಾಗೂ ಕಮಲ್​ ಹಾಸನ್​ ಸಿನಿಮಾ ಹಿನ್ನಲೆಯವರು. ಎಲ್ಲಕ್ಕಿಂತ ಹೆಚ್ಚಾಗಿ ಇಬ್ಬರ ನಡುವೆ ಉತ್ತಮ ಗೆಳೆತನವಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಮೈತ್ರಿ ಬೆಳೆಯಲಿದೆ ಎನ್ನಲಾಗುತ್ತಿದೆ.

ತಮಿಳುನಾಡು ರಾಜಕೀಯದಲ್ಲಿ ರಜನಿ-ಕಮಲ್​ ಮೈತ್ರಿ? ಸೂಚನೆ ನೀಡಿದ ಸ್ಟಾರ್​ ನಟ
ರಜನಿಕಾಂತ್ ಮತ್ತು ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
| Edited By: |

Updated on:Dec 16, 2020 | 7:58 PM

Share

ಚೆನ್ನೈ: ಮುಂದಿನ ವರ್ಷ ತಮಿಳುನಾಡಿನಲ್ಲಿ ನಡೆವ ವಿಧಾನಸಭಾ ಚುನಾವಣೆಗೆ ಅಖಾಡ ಸಿದ್ಧವಾಗಿದೆ. ನಟ ಕಮಲ್​ ಹಾಸನ್​ ಈಗಾಗಲೇ ಪಕ್ಷ ಘೋಷಣೆ ಮಾಡಿದ್ದು, ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ತಮಿಳುನಾಡಿನ ಸೂಪರ್​ಸ್ಟಾರ್​ ನಟ ರಜನಿಕಾಂತ್​ ಸಹ ಪಕ್ಷ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಮಧ್ಯೆ, ಕಮಲ್​ ಹಾಸನ್​ ಹಾಗೂ ರಜನಿ ನಡುವೆ ಮೈತ್ರಿ ಏರ್ಪಡುವ ಸೂಚನೆ ಸಿಕ್ಕಿದೆ.

ರಜನಿಕಾಂತ್ ರಾಜಕೀಯಕ್ಕೆ ಬರುವುದಾಗಿ ಈ ಮೊದಲಿನಿಂದಲೂ ಹೇಳುತ್ತಲೇ ಬರುತ್ತಿದ್ದಾರೆ. ಆದರೆ, ಇದೇ ಮೊದಲ ಬಾರಿ ರಜನಿ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಡಿಸೆಂಬರ್​ 31ರಂದು ಹೊಸ ಪಕ್ಷದ ಹೆಸರನ್ನು ಸೂಪರ್​ಸ್ಟಾರ್​ ಬಹಿರಂಗಪಡಿಸಲಿದ್ದಾರೆ.

ರಜನಿಕಾಂತ್​ ಹಾಗೂ ಕಮಲ್​ ಹಾಸನ್​ ಸಿನಿಮಾ ಹಿನ್ನಲೆಯವರು. ಎಲ್ಲಕ್ಕಿಂತ ಹೆಚ್ಚಾಗಿ ಇಬ್ಬರ ನಡುವೆ ಉತ್ತಮ ಗೆಳೆತನವಿದೆ. ಇದೇ ಕಾರಣಕ್ಕೆ ಇಬ್ಬರ ನಡುವೆ ಮೈತ್ರಿ ಬೆಳೆಯಲಿದೆ ಎನ್ನಲಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿ ಮಕ್ಕಳ್​ ನೀದಿ ಮಯಮ್​ ಪಕ್ಷದ ಸ್ಥಾಪಕ ಕಮಲ್​ ಹಾಸನ್​ ಪ್ರತಿಕ್ರಿಯಿಸಿದ್ದಾರೆ.

ನಮ್ಮಿಬ್ಬರ ಸಿದ್ಧಾಂತಗಳಲ್ಲಿ ಹೋಲಿಕೆಯಿದ್ದರೆ ಮತ್ತು ಅದರಿಂದ ಜನರಿಗೆ ಪ್ರಯೋಜನವಾಗುತ್ತದೆ ಎಂದಾದರೆ ನಮ್ಮ ಅಹಂಕಾರವನ್ನು ಬದಿಗಿಟ್ಟು ಪರಸ್ಪರ ಸಹಕರಿಸಲು ನಾವು ಸಿದ್ಧರಿದ್ದೇವೆ ಎಂದು ಕಮಲ್​ ಹಾಸನ್​ ಹೇಳಿದ್ದಾರೆ. ಈ ಮೂಲಕ ಮೈತ್ರಿ ಸೂಚನೆ ನೀಡಿರುವ ಅವರು, ‘ಇಬ್ಬರ ಮೈತ್ರಿಗೆ ಒಂದು ದೂರವಾಣಿ ಕರೆ ಮಾಡುವುದು ಮಾತ್ರ ಬಾಕಿ ಉಳಿದಿದೆ’ ಎಂದಿದ್ದಾರೆ.

ಮೈತ್ರಿ ಆದರೆ ಯಾರಿಗೆ ಲಾಭ? ಕಮಲ್​ ಹಾಸನ್​ ಈಗಾಗಲೇ ಪಕ್ಷ ಕಟ್ಟಿ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ, ರಜನಿಕಾಂತ್​ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ರಜನಿ ಪಕ್ಷ ಘೋಷಣೆ ಮಾಡುತ್ತಿದ್ದಾರೆ. ಪಕ್ಷ ಕಟ್ಟಲು, ಅಭ್ಯರ್ಥಿಗಳ ಆಯ್ಕೆ ಮಾಡಲು ಹಾಗೂ ಪ್ರಚಾರಕ್ಕೆ ರಜನಿಕಾಂತ್​ಗೆ ತುಂಬಾನೇ ಕಡಿಮೆ ಸಮಯಾವಕಾಶ ಸಿಗುತ್ತದೆ. ಹೀಗಾಗಿ, ಕಮಲ್​ ಹಾಸನ್​ ಜೊತೆ ಮೈತ್ರಿ ಮಾಡಿಕೊಂಡರೆ ರಜನಿಕಾಂತ್​ಗೆ ಲಾಭದಾಯಕವಾಗಲಿದೆ.

ಇನ್ನು, ರಜನಿ- ಕಮಲ್​ ಹಾಸನ್​ ಮೈತ್ರಿ ಮಾಡಿಕೊಂಡರೆ ಅಧಿಕಾರಕ್ಕಾಗಿ ಸ್ಪರ್ಧೆ ನಡೆಸುತ್ತಿರುವ ಎಐಡಿಎಂಕೆ ಹಾಗೂ ಡಿಎಂಕೆ ಪಕ್ಷಕ್ಕೆ ದೊಡ್ಡ ಪೆಟ್ಟು ಉಂಟಾಗಲಿದೆ. ಅಲ್ಲದೆ, ಮತಗಳು ಒಡೆಯುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.

ಸೂಪರ್​​ಸ್ಟಾರ್ ರಜನಿಕಾಂತ್ ಪಕ್ಷದ ಹೆಸರು ‘ಮಕ್ಕಳ್ ಸೇವೈ ಕಟ್ಚಿ’ ಪಕ್ಷದ ಚಿಹ್ನೆ ಆಟೋರಿಕ್ಷಾ?

Published On - 7:56 pm, Wed, 16 December 20

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ