AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಕೃಷಿ ಕಾಯ್ದೆ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಕಮಲ್ ಹಾಸನ್ ಪಕ್ಷದ ಪ್ರಧಾನ ಕಾರ್ಯದರ್ಶಿ

ಕಮಲ್ ಹಾಸನ್​ರ ಮಕ್ಕಳ್ ನೀತಿ ಮಯ್ಯಮ್ ಪಕ್ಷದ ಸ್ಥಾಪಕ ಸದಸ್ಯ,ಪ್ರಧಾನಿ ಕಾರ್ಯದರ್ಶಿ ಎ. ಅರುಣಾಚಲಂ ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನೂತನ ಕೃಷಿ ಕಾಯ್ದೆಗಳನ್ನು ಬೆಂಬಲಿಸಲು ಪಕ್ಷದ ವರಿಷ್ಠ ಕಮಲ್ ಹಾಸನ್ ನಿರಾಕರಿಸಿದ ಕಾರಣ ಬಿಜೆಪಿ ಸೇರ್ಪಡೆಯಾಗಿದ್ದಾಗಿ ಎ.ಅರುಣಾಚಲಂ ತಿಳಿಸಿದ್ದಾರೆ.

ನೂತನ ಕೃಷಿ ಕಾಯ್ದೆ ಬೆಂಬಲಿಸಿ ಬಿಜೆಪಿ ಸೇರ್ಪಡೆಯಾದ ಕಮಲ್ ಹಾಸನ್ ಪಕ್ಷದ ಪ್ರಧಾನ ಕಾರ್ಯದರ್ಶಿ
ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಎ.ಅರುಣಾಚಲಂ
guruganesh bhat
| Edited By: |

Updated on: Dec 25, 2020 | 6:44 PM

Share

ಚೆನ್ನೈ: ಸಕ್ರಿಯ ರಾಜಕೀಯಕ್ಕೆ ಇಳಿದಿರುವ ಬಹುಭಾಷಾ ನಟ ಕಮಲ್ ಹಾಸನ್​ಗೆ ಸ್ವಪಕ್ಷದಿಂದಲೇ ಆಘಾತ ಉಂಟಾಗಿದೆ. ಮುಂದಿನ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಿಂದಲೂ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲು ಯೋಜನೆ ರೂಪಿಸುತ್ತಿರುವ ಕಮಲ್ ಹಾಸನ್​ ಮಕ್ಕಳ್ ನೀತಿ ಮಯ್ಯಮ್ ಪಕ್ಷದ ಸ್ಥಾಪಕ ಸದಸ್ಯ, ಪ್ರಧಾನ ಕಾರ್ಯದರ್ಶಿ ಎ. ಅರುಣಾಚಲಂ ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನೂತನ ಕೃಷಿ ಕಾಯ್ದೆಗಳನ್ನು ಬೆಂಬಲಿಸಲು ಪಕ್ಷದ ವರಿಷ್ಠ ಕಮಲ್ ಹಾಸನ್ ನಿರಾಕರಿಸಿದ ಕಾರಣ ಬಿಜೆಪಿ ಸೇರ್ಪಡೆ ಆಗಿದ್ದಾಗಿ ಎ.ಅರುಣಾಚಲಂ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮದಿನದಂದೇ ಬಿಜೆಪಿಗೆ ಸೇರ್ಪಡೆಯಾಗಲು ಸಿಕ್ಕ ಅವಕಾಶವನ್ನು ಭಾಗ್ಯವೆಂದೇ ಅರುಣಾಚಲಂ ಬಣ್ಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಈ ಕಾಯ್ದೆಗಳನ್ನು ರೂಪಿಸಿದ್ದು, ಈ ಕಾಯ್ದೆಗಳಿಂದ ಕೃಷಿಕರ ಬದುಕಲ್ಲಿ ಸುಧಾರಣೆಯಾಗುವುದು ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿರುವ ತಮಗೆ ಅರಿವಾಗಿದೆ. ಮಕ್ಕಳ್ ನೀತಿ ಮಯ್ಯಮ್ ಪಕ್ಷದ ಪ್ರಮುಖರು ಕೃಷಿ ಕಾಯ್ದೆಗಳನ್ನು ವಿರೋಧಿಸಿದ ಕಾರಣ ನಾನು ಬಿಜೆಪಿ ಸೇರಬೇಕಾಯಿತು ಎಂದು ಎ.ಅರುಣಾಚಲಂ ತಿಳಿಸಿದ್ದಾರೆ.

ಬಿಜೆಪಿ ರೂಪಿಸಿದ ಕಾಯ್ದೆಗಳೆಂಬುದನ್ನು ಮರೆತು ಕೃಷಿ ಕಾಯ್ದೆಗಳು ಎಂದು ಅದನ್ನು ವಿಶ್ಲೇಷಿಸಿ ಎಂದು ಅರುಣಾಚಲಂ  ಈ ಮೊದಲು ಪಕ್ಷದ ಮುಖಂಡರಲ್ಲಿ ವಿನಂತಿಸಿದ್ದರು. ಆದರೆ, ಇದಕ್ಕೆ ಮುಖಂಡರು ಸಮ್ಮತಿಸಿರಲಿಲ್ಲ. ಅಲ್ಲದೆ, ಕಮಲ್ ಹಾಸನ್​ ಕೂಡ ಈ ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿದ್ದರು. ಹೀಗಾಗಿ, ಅವರು ಬಿಜೆಪಿ ಸೇರಿರುವುದಾಗಿ ಇಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಎ. ಅರುಣಾಚಲಂ ಪಕ್ಷ ತೊರೆದಿರುವುದು ಕಮಲ್ ಹಾಸನ್ ಪಕ್ಷ ಸಂಘಟನೆಗೆ ದೊಡ್ಡ ಪೆಟ್ಟು ನೀಡುವ ಸಾಧ್ಯತೆಗಳಿವೆ ಎಂಬ ವಿಶ್ಲೇಷಣೆ ತಮಿಳುನಾಡು ರಾಜಕೀಯ ಪಡಸಾಲೆಯಲ್ಲಿ ಕೇಳಿಬಂದಿವೆ.

ತಮಿಳುನಾಡು ರಾಜಕೀಯದಲ್ಲಿ ರಜನಿ-ಕಮಲ್​ ಮೈತ್ರಿ? ಸೂಚನೆ ನೀಡಿದ ಸ್ಟಾರ್​ ನಟ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ