AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಕಮಲ್​ನಾಥ್​, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ(Madhya Pradesh Assembly Election)ಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್(Congress) ಹೀನಾಯ ಸೋಲು ಕಂಡಿದೆ. ಪಕ್ಷದ ಸೋಲಿನ ನಂತರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್(Kamal Nath) ನಾಯಕತ್ವದ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿವೆ. ಕಮಲ್ ನಾಥ್ ಅವರು  ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಊಹಾಪೋಹಗಳೆದ್ದಿತ್ತು. ಕಮಲ್ ನಾಥ್ ಅವರು ಮಂಗಳವಾರ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರನ್ನು ಭೇಟಿ ಮಾಡಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸುವಂತೆ ಕೇಳಿದ್ದಾರೆ ಎನ್ನಲಾಗುತ್ತಿದೆ.

ಮಲ್ಲಿಕಾರ್ಜುನ ಖರ್ಗೆಯನ್ನು ಭೇಟಿಯಾದ ಕಮಲ್​ನಾಥ್​, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ?
ಕಮಲ್​ನಾಥ್Image Credit source: Mint
Follow us
ನಯನಾ ರಾಜೀವ್
|

Updated on: Dec 06, 2023 | 8:24 AM

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ(Madhya Pradesh Assembly Election)ಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್(Congress) ಹೀನಾಯ ಸೋಲು ಕಂಡಿದೆ. ಪಕ್ಷದ ಸೋಲಿನ ನಂತರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್(Kamal Nath) ನಾಯಕತ್ವದ ಬಗ್ಗೆ ಪ್ರಶ್ನೆಗಳು ಏಳಲಾರಂಭಿಸಿವೆ. ಕಮಲ್ ನಾಥ್ ಅವರು  ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂಬ ಊಹಾಪೋಹಗಳೆದ್ದಿತ್ತು. ಕಮಲ್ ನಾಥ್ ಅವರು ಮಂಗಳವಾರ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರನ್ನು ಭೇಟಿ ಮಾಡಿ ಹೊಸ ರಾಜ್ಯಾಧ್ಯಕ್ಷರನ್ನು ನೇಮಿಸುವಂತೆ ಕೇಳಿದ್ದಾರೆ ಎನ್ನಲಾಗುತ್ತಿದೆ.

ರಾಜಧಾನಿ ದೆಹಲಿಗೆ ತೆರಳುವ ಮುನ್ನ ಕಮಲ್ ನಾಥ್ ಮಂಗಳವಾರ ಪಕ್ಷದ ಎಲ್ಲಾ ಸೋತ ಮತ್ತು ಗೆದ್ದ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಿದರು. ಭೋಪಾಲ್‌ನಲ್ಲಿರುವ ರಾಜ್ಯ ಕಚೇರಿಯಲ್ಲಿ ಸೋಲಿನ ಪರಾಮರ್ಶೆ ನಡೆಸಲಾಯಿತು. ಕಮಲ್ ನಾಥ್ ಅವರು ಎಲ್ಲಾ ಅಭ್ಯರ್ಥಿಗಳೊಂದಿಗೆ ಒಂದೊಂದು ಚರ್ಚೆ ನಡೆಸಿದರು. ಕಮಲ್ ನಾಥ್, ‘ಕೆಲವು ಶಾಸಕರು ತಮ್ಮ ಗ್ರಾಮದಲ್ಲಿ 50 ಮತಗಳನ್ನು ಪಡೆದಿದ್ದಾರೆ ಎಂದು ಹೇಳಿದರು.

ಕಮಲ್ ನಾಥ್ ಅವರನ್ನು ಸ್ಥಾನದಿಂದ ತೆಗೆದುಹಾಕಲು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸೋಲು ಕಾರಣ. ಇದಲ್ಲದೇ ಚುನಾವಣಾ ಪ್ರಚಾರದ ವೇಳೆ ವಿಪಕ್ಷಗಳ ಮೈತ್ರಿಕೂಟದ ಇಂಡಿಯಾ ಒಕ್ಕೂಟದ ಬಗ್ಗೆ ಕಮಲ್ ನಾಥ್ ಹೇಳಿಕೆ ನೀಡಿದ್ದರಿಂದ ಕಾಂಗ್ರೆಸ್ ಹೈಕಮಾಂಡ್ ಕೂಡ ಕಮಲ್ ನಾಥ್ ವಿರುದ್ಧ ಕೆರಳಿದೆ ಎನ್ನಲಾಗಿದೆ.

ಚುನಾವಣೆಯ ಸಂದರ್ಭದಲ್ಲಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಜನತಾ ದಳ ಯುನೈಟೆಡ್ ಮುಖ್ಯಸ್ಥ ನಿತೀಶ್ ಕುಮಾರ್ ಸೇರಿದಂತೆ ಇತರ ನಾಯಕರ ವಿರುದ್ಧ ಕಮಲ್ ನಾಥ್ ಅವರು ಸೀಟು ಹಂಚಿಕೆ ಕುರಿತು ಪ್ರತಿಕ್ರಿಯಿಸಿದ್ದರು. ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಭೇಟಿ ಮಾಡದ ಕಮಲ್ ನಾಥ್ ಮತ್ತು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡದಿರುವ ಬಗ್ಗೆ ಹೈಕಮಾಂಡ್ ಕೋಪಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ:ಮಧ್ಯಪ್ರದೇಶ: ಚುನಾವಣಾ ಸೋಲಿನ ಬಳಿಕ ಕಮಲ್​ನಾಥ್ ರಾಜೀನಾಮೆ ಒತ್ತಾಯಿಸಿತೇ ಕಾಂಗ್ರೆಸ್​?

ಮಧ್ಯಪ್ರದೇಶದ ಹೀನಾಯ ಸೋಲಿನ ನಂತರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ ನೀಡುವ ಬಗ್ಗೆ ಊಹಾಪೋಹಗಳು ಶುರುವಾಗಿವೆ. ರಾಜ್ಯ ಕಾಂಗ್ರೆಸ್ ಜೊತೆಗೆ ವಿರೋಧ ಪಕ್ಷದ ನಾಯಕರ ಹೆಸರಿಗೂ ಗಲಾಟೆ ಶುರುವಾಗಿದೆ. ಈ ಬಾರಿ ಪಕ್ಷವು ಎರಡೂ ಹುದ್ದೆಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬಹುದು.

ಮಧ್ಯಪ್ರದೇಶದ 230 ವಿಧಾನಸಭಾ ಸ್ಥಾನಗಳಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) 163 ಸ್ಥಾನಗಳನ್ನು ಗಳಿಸಿದರೆ, ಕಾಂಗ್ರೆಸ್ 66 ಕ್ಷೇತ್ರಗಳಲ್ಲಿ ವಿಜಯವನ್ನು ದಾಖಲಿಸಿತು.

ಚುರ್ಹತ್ ಶಾಸಕ ಅಜಯ್ ಸಿಂಗ್ ರಾಹುಲ್ ಭಯ್ಯಾ, ದಿಂಡೋರಿ ವಿಧಾನಸಭೆಯಿಂದ ನಾಲ್ಕನೇ ಬಾರಿಗೆ ಗೆದ್ದಿರುವ ಕಾಂಗ್ರೆಸ್ ಶಾಸಕ ಓಂಕಾರ್ ಮಾರ್ಕಮ್, ಶಿಯೋಪುರ ಜಿಲ್ಲೆಯ ವಿಜಯಪುರದಿಂದ ಕಾಂಗ್ರೆಸ್ ಶಾಸಕ ರಾಮನಿವಾಸ್ ರಾವತ್, ಬಾಲಾ ಬಚ್ಚನ್, ಬರ್ವಾನಿ ಜಿಲ್ಲೆಯ ರಾಜಪುರ ಕ್ಷೇತ್ರದ ಶಾಸಕ, ಕಾಂಗ್ರೆಸ್ ಕಾಸರವಾಡ ಕ್ಷೇತ್ರ: ಗಂಧವಾನಿ ಕ್ಷೇತ್ರದಿಂದ ಶಾಸಕ ಸಚಿನ್ ಯಾದವ್ ಶಾಸಕ ಉಮಂಗ್ ಸಿಂಗ್ ಅವರಿಗೆ ಅವಕಾಶ ನೀಡಬಹುದು. ಇದಲ್ಲದೇ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಲವು ಹೆಸರುಗಳು ರೇಸ್​ನಲ್ಲಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಥೂ...ಛೀ..ಬೆಂಗಳೂರಿನಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ, ವಿಡಿಯೋ ವೈರಲ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಕನ್ನಡದ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ; ಗಾಯಕನ ವಿರುದ್ಧ ಎಫ್​ಐಆರ್
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ಪಿಒಕೆಯಲ್ಲಿ ಸ್ಥಳೀಯರಿಗೆ ಪಾಕ್ ಸೇನೆಯಿಂದ ಶಸ್ತ್ರಾಸ್ತ್ರ ತರಬೇತಿ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ನನ್ನ ಪತಿ ಮತ್ತು ಯತ್ನಾಳ್ ನಡುವಿನ ಜಗಳ ಅವರವರ ವೈಯಕ್ತಿಕ ವಿಚಾರ: ವೀಣಾ
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ
ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ