AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲನಾಥ್​ ರಾಜೀನಾಮೆ; ಹೊಸ ನಾಯಕನ ನೇಮಕ ಮಾಡಿದ ಕಾಂಗ್ರೆಸ್​

ಮಧ್ಯಪ್ರದೇಶದಲ್ಲೂ ಕೂಡ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. 2023ರ ಕೊನೆಯಲ್ಲಿ ವಿಧಾನಸಭೆ ಚುನಾವಣೆಯಿದ್ದು,ಪಕ್ಷದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಕಾಂಗ್ರೆಸ್​ ವರಿಷ್ಠರು ಮುಂದಾಗಿದ್ದಾರೆ.

ಮಧ್ಯಪ್ರದೇಶ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಕಮಲನಾಥ್​ ರಾಜೀನಾಮೆ; ಹೊಸ ನಾಯಕನ ನೇಮಕ ಮಾಡಿದ ಕಾಂಗ್ರೆಸ್​
ಕಮಲನಾಥ್​
TV9 Web
| Edited By: |

Updated on:Apr 28, 2022 | 6:15 PM

Share

ಕಾಂಗ್ರೆಸ್​ ನಾಯಕ ಕಮಲನಾಥ್​ ಅವರು ಮಧ್ಯಪ್ರದೇಶ ವಿಧಾನಸಭೆ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಕಮಲನಾಥ್ ರಾಜೀನಾಮೆಯನ್ನು ಕಾಂಗ್ರೆಸ್​ ಹೈಕಮಾಂಡ್​ ಅಂಗೀಕರಿಸಿ, ಒಪ್ಪಿಕೊಂಡಿದ್ದು ಮಧ್ಯಪ್ರದೇಶ ವಿಧಾನಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಡಾ. ಗೋವಿಂದ್ ಸಿಂಗ್​ರನ್ನು ನೇಮಕ ಮಾಡಿದೆ. ಇವರು ಕಾಂಗ್ರೆಸ್​ ಶಾಸಕಾಂಗ ಪಕ್ಷದ ನಾಯಕನೂ ಹೌದು. 

ನಿಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷರು ಅಂಗೀಕರಿಸಿದ್ದಾರೆ. ತಕ್ಷಣ ಜಾರಿಗೆ ಬರುವಂತೆ ನಿಮ್ಮನ್ನು ಮಧ್ಯಪ್ರದೇಶ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಬಿಡುಗಡೆಗೊಳಿಸಲಾಗಿದೆ. ನಿಮ್ಮ ಇಷ್ಟು ವರ್ಷದ ಸೇವೆ, ಪಕ್ಷಕ್ಕೆ ನೀಡಿದ ಕೊಡುಗೆಯನ್ನು ನಾವು ಶ್ಲಾಘಿಸುತ್ತೇವೆ ಎಂದು ಏಪ್ರಿಲ್​ 28ರಂದು ಕಾಂಗ್ರೆಸ್ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್​ ಅವರು ಕಮಲನಾಥ್​​ಗೆ ಪತ್ರ ಬರೆದಿದ್ದಾರೆ.

ಮಧ್ಯಪ್ರದೇಶದಲ್ಲೂ ಕೂಡ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. 2023ರ ಕೊನೆಯಲ್ಲಿ ವಿಧಾನಸಭೆ ಚುನಾವಣೆಯಿದ್ದು,ಪಕ್ಷದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಕಾಂಗ್ರೆಸ್​ ವರಿಷ್ಠರು ಮುಂದಾಗಿದ್ದಾರೆ. ಅದರ ಒಂದು ಭಾಗವಾಗಿಯೇ ಈಗ ಕಮಲನಾಥ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಇದೀಗ ಆ ಸ್ಥಾನಕ್ಕೆ ನೇಮಕಗೊಂಡಿರುವ ಗೋವಿಂದ್ ಸಿಂಗ್ ಅವರು ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, ಲಾಹರ್ ವಿಧಾನಸಭಾ ಕ್ಷೇತ್ರದ ಶಾಸಕರು. ಇನ್ನೊಂದೆಡೆ ರಾಜಸ್ಥಾನದಲ್ಲೂ ಕಾಂಗ್ರೆಸ್​ ಪಕ್ಷ ಬಲವರ್ಧನೆಗೆ ಮುಂದಾಗಿದ್ದು, ಅಲ್ಲಿನ ಸಿಎಂ ಅಶೋಕ್​ ಗೆಹ್ಲೋಟ್ ರಾಜೀನಾಮೆ ಬಗ್ಗೆ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ವಿದ್ಯಾರ್ಥಿನಿಯೊಬ್ಬಳ ಸಾವಿನಿಂದ ರೊಚ್ಚಿಗೆದ್ದ ಗೀತಂ ವಿವಿ ವಿದ್ಯಾರ್ಥಿಗಳಿಂದ ಹಾಸ್ಟೆಲ್ ಮೇಲೆ ಕಲ್ಲು ತೂರಾಟ

Published On - 6:11 pm, Thu, 28 April 22

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು