AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kangana Ranaut: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ‘ರಾಮ್ ಕೋವಿಡ್’ ಎಂದ ಕಂಗನಾ ರಣಾವತ್; ಇಂಟರ್ನೆಟ್​ನಲ್ಲಿ ಟ್ರೋಲ್ ಸುರಿಮಳೆ

ಸಂದರ್ಶನವೊಂದರಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಪದೇಪದೆ 'ರಾಮ್ ಕೋವಿಡ್' ಎಂದು ಕರೆದಿರುವ ಕಂಗನಾ ರಣಾವತ್ ಬಗ್ಗೆ ಇಂಟರ್ನೆಟ್​ನಲ್ಲಿ ಮೆಮ್ಸ್, ಟ್ರೋಲ್​ಗಳು ಹೆಚ್ಚಾಗಿವೆ. ಕಂಗನಾ ಅವರ ಸಾಮಾನ್ಯ ಜ್ಞಾನದ ಬಗ್ಗೆ ನೆಟ್ಟಿಗರು ಟೀಕೆ ಮಾಡುತ್ತಿದ್ದು, ಆಕೆಗೆ ಅರ್ಜೆಂಟಾಗಿ ಮನಶ್ಯಾಸ್ತ್ರಜ್ಞರೊಬ್ಬರ ಅಗತ್ಯವಿದೆ ಎಂದು ಲೇವಡಿ ಮಾಡಿದ್ದಾರೆ.

Kangana Ranaut: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ 'ರಾಮ್ ಕೋವಿಡ್' ಎಂದ ಕಂಗನಾ ರಣಾವತ್; ಇಂಟರ್ನೆಟ್​ನಲ್ಲಿ ಟ್ರೋಲ್ ಸುರಿಮಳೆ
ಕಂಗನಾ ರಣಾವತ್
ಸುಷ್ಮಾ ಚಕ್ರೆ
|

Updated on: Aug 30, 2024 | 4:10 PM

Share

ನವದೆಹಲಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ತಮ್ಮ ಮುಂಬರುವ ಇಂದಿರಾ ಗಾಂಧಿಯವ ಸರ್ಕಾರದ ಆಡಳಿತವನ್ನು ಕುರಿತ ಚಿತ್ರ ಎಮರ್ಜೆನ್ಸಿ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಅವರು ನೀಡಿದ ಸಂದರ್ಶನಗಳ ತುಣುಕುಗಳು ಟ್ರೋಲ್ ಆಗುತ್ತಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ರಾಮ್ ಕೋವಿಡ್ ಎಂದು ಕರೆದಿದ್ದಾರೆ. ದಲಿತ ರಾಷ್ಟ್ರಪತಿ ಎನ್ನುವ ಬದಲಾಗಿ ಗಲಿತ್ ರಾಷ್ಟ್ರಪತಿ ಎಂದು ಹೇಳಿ ನಂತರ ತಿದ್ದಿಕೊಂಡಿದ್ದಾರೆ. ಅಲ್ಲದೆ, ರಾಮನಾಥ್ ಕೋವಿಂದ್ (ರಾಮ್ ಕೋವಿಡ್) ಭಾರತದ ಮೊದಲ ದಲಿತ ರಾಷ್ಟ್ರಪತಿ ಎಂದು ತಪ್ಪು ಮಾಹಿತಿಯನ್ನೂ ಹೇಳಿದ್ದಾರೆ.

ಈ ಬಗ್ಗೆ ಆನ್‌ಲೈನ್‌ನಲ್ಲಿ ಮೆಮ್ಸ್ ಫೆಸ್ಟ್ ಶುರುವಾಗಿದೆ. ಅಷ್ಟೇ ಅಲ್ಲ, ಕಂಗನಾ ರಣಾವತ್ ಅವರು ರಾಮನಾಥ್ ಕೋವಿಂದ್ ಭಾರತದ ಮೊದಲ ದಲಿತ ರಾಷ್ಟ್ರಪತಿ ಎಂದೂ ಹೇಳಿದ್ದಾರೆ. ಅದನ್ನು ಸರಿಪಡಿಸಿದ ಆ್ಯಂಕರ್ ಭಾರತದ ಮೊದಲ ದಲಿತ ರಾಷ್ಟ್ರಪತಿ ಕೆಆರ್ ನಾರಾಯಣನ್ ಎಂದು ಆಕೆಯನ್ನು ತಿದ್ದಿದಾಗ, “ನನ್ನ ತಪ್ಪು ಮಾಹಿತಿಗಾಗಿ ಕ್ಷಮಿಸಿ” ಎಂದು ತಕ್ಷಣವೇ ಒಪ್ಪಿಕೊಡಿದ್ದಾರೆ.

ಇದನ್ನೂ ಓದಿ: 

ಈ 11 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇಂಟರ್ನೆಟ್ ಮೆಮೆ ಮೇನಿಯಾದಲ್ಲಿ ಸ್ಫೋಟಗೊಂಡಿದೆ.

ಕಂಗನಾ ಕುರಿತು ಇನ್​ಸ್ಟಾಗ್ರಾಂ, ಎಕ್ಸ್​ನಲ್ಲಿ ಮೇಮ್‌ಗಳು ಮತ್ತು ಜೋಕ್‌ಗಳ ಮಳೆ ಸುರಿಯುತ್ತಿದೆ. ನಿನ್ನೆಯಿಂದ ಕಂಗನಾ ರಣಾವತ್ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಟ್ರೆಂಡಿಂಗ್ ಆಗಿದ್ದಾರೆ.

“ಇಂತಹ ಅದ್ಭುತ ಸಂಸದರನ್ನು ಕಳುಹಿಸಿದ್ದಕ್ಕಾಗಿ ನಾವು ಹಿಮಾಚಲಕ್ಕೆ ಧನ್ಯವಾದ ಹೇಳಬೇಕು. ಇಲ್ಲದಿದ್ದರೆ ಅಂತಹ ಅಮೂಲ್ಯ ರತ್ನದ ಬಗ್ಗೆ ನಮಗೆ ತಿಳಿಯುತ್ತಿರಲಿಲ್ಲ” ಎಂದು ಎಕ್ಸ್​ ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.

ರಾಮ್ ಕೋವಿಡ್ ಎಂದಿರುವುದು “ಕೊವಿಡ್ ಲಸಿಕೆ ಅಡ್ಡ ಪರಿಣಾಮ” ಎಂದು ಕೆಲವರು ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ