Kangana Ranaut: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ ‘ರಾಮ್ ಕೋವಿಡ್’ ಎಂದ ಕಂಗನಾ ರಣಾವತ್; ಇಂಟರ್ನೆಟ್​ನಲ್ಲಿ ಟ್ರೋಲ್ ಸುರಿಮಳೆ

ಸಂದರ್ಶನವೊಂದರಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಪದೇಪದೆ 'ರಾಮ್ ಕೋವಿಡ್' ಎಂದು ಕರೆದಿರುವ ಕಂಗನಾ ರಣಾವತ್ ಬಗ್ಗೆ ಇಂಟರ್ನೆಟ್​ನಲ್ಲಿ ಮೆಮ್ಸ್, ಟ್ರೋಲ್​ಗಳು ಹೆಚ್ಚಾಗಿವೆ. ಕಂಗನಾ ಅವರ ಸಾಮಾನ್ಯ ಜ್ಞಾನದ ಬಗ್ಗೆ ನೆಟ್ಟಿಗರು ಟೀಕೆ ಮಾಡುತ್ತಿದ್ದು, ಆಕೆಗೆ ಅರ್ಜೆಂಟಾಗಿ ಮನಶ್ಯಾಸ್ತ್ರಜ್ಞರೊಬ್ಬರ ಅಗತ್ಯವಿದೆ ಎಂದು ಲೇವಡಿ ಮಾಡಿದ್ದಾರೆ.

Kangana Ranaut: ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್​ಗೆ 'ರಾಮ್ ಕೋವಿಡ್' ಎಂದ ಕಂಗನಾ ರಣಾವತ್; ಇಂಟರ್ನೆಟ್​ನಲ್ಲಿ ಟ್ರೋಲ್ ಸುರಿಮಳೆ
ಕಂಗನಾ ರಣಾವತ್
Follow us
|

Updated on: Aug 30, 2024 | 4:10 PM

ನವದೆಹಲಿ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ತಮ್ಮ ಮುಂಬರುವ ಇಂದಿರಾ ಗಾಂಧಿಯವ ಸರ್ಕಾರದ ಆಡಳಿತವನ್ನು ಕುರಿತ ಚಿತ್ರ ಎಮರ್ಜೆನ್ಸಿ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಅವರು ನೀಡಿದ ಸಂದರ್ಶನಗಳ ತುಣುಕುಗಳು ಟ್ರೋಲ್ ಆಗುತ್ತಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ಅವರು ಭಾರತದ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ರಾಮ್ ಕೋವಿಡ್ ಎಂದು ಕರೆದಿದ್ದಾರೆ. ದಲಿತ ರಾಷ್ಟ್ರಪತಿ ಎನ್ನುವ ಬದಲಾಗಿ ಗಲಿತ್ ರಾಷ್ಟ್ರಪತಿ ಎಂದು ಹೇಳಿ ನಂತರ ತಿದ್ದಿಕೊಂಡಿದ್ದಾರೆ. ಅಲ್ಲದೆ, ರಾಮನಾಥ್ ಕೋವಿಂದ್ (ರಾಮ್ ಕೋವಿಡ್) ಭಾರತದ ಮೊದಲ ದಲಿತ ರಾಷ್ಟ್ರಪತಿ ಎಂದು ತಪ್ಪು ಮಾಹಿತಿಯನ್ನೂ ಹೇಳಿದ್ದಾರೆ.

ಈ ಬಗ್ಗೆ ಆನ್‌ಲೈನ್‌ನಲ್ಲಿ ಮೆಮ್ಸ್ ಫೆಸ್ಟ್ ಶುರುವಾಗಿದೆ. ಅಷ್ಟೇ ಅಲ್ಲ, ಕಂಗನಾ ರಣಾವತ್ ಅವರು ರಾಮನಾಥ್ ಕೋವಿಂದ್ ಭಾರತದ ಮೊದಲ ದಲಿತ ರಾಷ್ಟ್ರಪತಿ ಎಂದೂ ಹೇಳಿದ್ದಾರೆ. ಅದನ್ನು ಸರಿಪಡಿಸಿದ ಆ್ಯಂಕರ್ ಭಾರತದ ಮೊದಲ ದಲಿತ ರಾಷ್ಟ್ರಪತಿ ಕೆಆರ್ ನಾರಾಯಣನ್ ಎಂದು ಆಕೆಯನ್ನು ತಿದ್ದಿದಾಗ, “ನನ್ನ ತಪ್ಪು ಮಾಹಿತಿಗಾಗಿ ಕ್ಷಮಿಸಿ” ಎಂದು ತಕ್ಷಣವೇ ಒಪ್ಪಿಕೊಡಿದ್ದಾರೆ.

ಇದನ್ನೂ ಓದಿ: 

ಈ 11 ಸೆಕೆಂಡುಗಳ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಇಂಟರ್ನೆಟ್ ಮೆಮೆ ಮೇನಿಯಾದಲ್ಲಿ ಸ್ಫೋಟಗೊಂಡಿದೆ.

ಕಂಗನಾ ಕುರಿತು ಇನ್​ಸ್ಟಾಗ್ರಾಂ, ಎಕ್ಸ್​ನಲ್ಲಿ ಮೇಮ್‌ಗಳು ಮತ್ತು ಜೋಕ್‌ಗಳ ಮಳೆ ಸುರಿಯುತ್ತಿದೆ. ನಿನ್ನೆಯಿಂದ ಕಂಗನಾ ರಣಾವತ್ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಟ್ರೆಂಡಿಂಗ್ ಆಗಿದ್ದಾರೆ.

“ಇಂತಹ ಅದ್ಭುತ ಸಂಸದರನ್ನು ಕಳುಹಿಸಿದ್ದಕ್ಕಾಗಿ ನಾವು ಹಿಮಾಚಲಕ್ಕೆ ಧನ್ಯವಾದ ಹೇಳಬೇಕು. ಇಲ್ಲದಿದ್ದರೆ ಅಂತಹ ಅಮೂಲ್ಯ ರತ್ನದ ಬಗ್ಗೆ ನಮಗೆ ತಿಳಿಯುತ್ತಿರಲಿಲ್ಲ” ಎಂದು ಎಕ್ಸ್​ ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.

ರಾಮ್ ಕೋವಿಡ್ ಎಂದಿರುವುದು “ಕೊವಿಡ್ ಲಸಿಕೆ ಅಡ್ಡ ಪರಿಣಾಮ” ಎಂದು ಕೆಲವರು ಟೀಕಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ