AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇತನ ಸಹಿತ ಮುಟ್ಟಿನ ರಜೆ: ಸ್ಮೃತಿ ಇರಾನಿ ಹೇಳಿಕೆ ಬೆಂಬಲಿಸಿದ ನಟಿ ಕಂಗನಾ

ಮುಟ್ಟು ಎಂಬುದು ಹೆಣ್ಣಿನ ದೇಹದಲ್ಲಾಗುವ ಸಹಜ ಪ್ರಕ್ರಿಯೆ ಅದೊಂದು ರೋಗವಲ್ಲ ಹೀಗಾಗಿ ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್(Kangana Ranaut) ಹೇಳಿದ್ದಾರೆ. ನಿನ್ನೆಯಷ್ಟೇ ಈ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಮಾತನಾಡಿ, ಮುಟ್ಟು ಎಂಬುದು ಅಂಗವೈಕಲ್ಯವಲ್ಲ ಸಹಜ ಪ್ರಕ್ರಿಯೆ ಹೀಗಾಗಿ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾಪವೇ ಇಲ್ಲ ಎಂದಿದ್ದರು.

ವೇತನ ಸಹಿತ ಮುಟ್ಟಿನ ರಜೆ: ಸ್ಮೃತಿ ಇರಾನಿ ಹೇಳಿಕೆ ಬೆಂಬಲಿಸಿದ ನಟಿ ಕಂಗನಾ
ಸ್ಮೃತಿ ಇರಾನಿ-ಕಂಗನಾImage Credit source: ABP Live
ನಯನಾ ರಾಜೀವ್
|

Updated on: Dec 15, 2023 | 12:27 PM

Share

ಮುಟ್ಟು(Menstruation) ಎಂಬುದು ಹೆಣ್ಣಿನ ದೇಹದಲ್ಲಾಗುವ ಸಹಜ ಪ್ರಕ್ರಿಯೆ ಅದೊಂದು ರೋಗವಲ್ಲ ಹೀಗಾಗಿ ಹೆಣ್ಣುಮಕ್ಕಳಿಗೆ ವೇತನ ಸಹಿತ ಮುಟ್ಟಿನ ರಜೆ ನೀಡುವ ಅಗತ್ಯವಿಲ್ಲ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್(Kangana Ranaut) ಹೇಳಿದ್ದಾರೆ. ನಿನ್ನೆಯಷ್ಟೇ ಈ ಕುರಿತು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಮಾತನಾಡಿ, ಮುಟ್ಟು ಎಂಬುದು ಅಂಗವೈಕಲ್ಯವಲ್ಲ ಸಹಜ ಪ್ರಕ್ರಿಯೆ ಹೀಗಾಗಿ ವೇತನ ಸಹಿತ ಮುಟ್ಟಿನ ರಜೆ ನೀಡುವ ಪ್ರಸ್ತಾಪವೇ ಇಲ್ಲ ಎಂದಿದ್ದರು.

ಇದೀಗ ಕಂಗನಾ ಕೂಡ ಸ್ಮೃತಿ ಇರಾನಿ ಹೇಳಿಕೆಗೆ ದನಿಗೂಡಿಸಿದ್ದಾರೆ. ಕಂಗನಾ ಯಾವಾಗಲೂ ತನ್ನ ನಿಲುವು, ಅಭಿಪ್ರಾಯವನ್ನು ಹೇಳಲು ಹಿಂಜರಿಯುವುದಿಲ್ಲ. ಮಾನವ ಇತಿಹಾಸದಲ್ಲಿ ಕೆಲಸ ಮಾಡದ ಮಹಿಳೆ ಇಲ್ಲ, ಹೊಲ, ಗದ್ದೆಗಳಲ್ಲಿ ಕೆಲಸ ಮಾಡುವುದರಿಂದ ಹಿಡಿದು ಮನೆಯನ್ನು, ಮಕ್ಕಳನ್ನು ನೋಡಿಕೊಳ್ಳುವವರೆಗೆ ಎಲ್ಲವನ್ನೂ ಆಕೆ ಮಾಡುತ್ತಾಳೆ ಎಂದಿದ್ದಾರೆ.

ಸ್ಮೃತಿ ಇರಾನಿ ಸದನದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ, ಮಹಿಳೆಗೆ ಮುಟ್ಟು ಎಂಬುದು ಎಂದೂ ಕೆಲಸಕ್ಕೆ ಅಡ್ಡಿ ಮಾಡಿಲ್ಲ. ಅದು ಆಕೆಯ ಜೀವನ ಪಯಣದ ಒಂದು ಭಾಗವಾಗಿರುತ್ತದೆ. ದುಡಿಯುವ ಮಹಿಳೆ ಮುಟ್ಟಿನ ಹೆಸರಿನಲ್ಲಿ ರಜೆ ಹಾಕುವುದು ಅರ್ಥಹೀನ, ಇದೀಗ ಮಹಿಳೆಗೂ ಸಮಾನ ಹಕ್ಕು ಬೇಕೆಂದು ಹೋರಾಟ ನಡೆಯುತ್ತಿರುವ ಸಮಯದಲ್ಲಿ ಈ ರಜೆಯು ತಾರತಮ್ಯಕ್ಕೆ ಕಾರಣವಾಗಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಮುಟ್ಟು ಎಂಬುದು ಅಂಗವೈಕಲ್ಯವಲ್ಲ, ಹೆಣ್ಣುಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ: ಸ್ಮೃತಿ ಇರಾನಿ

ಋತುಚಕ್ರವು ಮಹಿಳೆಯರ ಕೆಲಸಕ್ಕೆ ಎಂದೂ ಅಡ್ಡಿಯಾಗುವುದಿಲ್ಲ, ಅದು ಅಂಗವೈಕಲ್ಯವಲ್ಲ, ಇದು ಮಹಿಳೆಯರ ಜೀವನದ ಒಂದು ಭಾಗ ಹಾಗೂ ಸಹಜ ಪ್ರಕ್ರಿಯೆ ಎಂದು ಹೇಳಿದರು.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮುಟ್ಟಿನ ನೈರ್ಮಲ್ಯದ ಕರಡು ನೀತಿಯನ್ನು ಸಿದ್ಧಪಡಿಸಿದೆ ಎಂದರು. 10-19 ವಯೋಮಾನದ ಬಾಲಕಿಯರಲ್ಲಿ ಮುಟ್ಟಿನ ನೈರ್ಮಲ್ಯವನ್ನು ಉತ್ತೇಜಿಸಲು ಕೇಂದ್ರವು ಈಗಾಗಲೇ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂದು ಅವರು ಸದನಕ್ಕೆ ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ