ಮಂಡಿ ಕ್ಷೇತ್ರದಿಂದ ಕಂಗನಾ ಆಯ್ಕೆ ಪ್ರಶ್ನಿಸಿ ಅರ್ಜಿ, ಹೈಕೋರ್ಟ್​ ನೋಟಿಸ್

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದ ಸಂಸದೆ ಕಂಗನಾ ರಣಾವತ್ ಅವರ ಗೆಲುವನ್ನು ಪ್ರಶ್ನಿಸಿ ಒಬ್ಬರು ಹಿಮಾಚಲ ಪ್ರದೇಶ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಮಂಡಿ ಕ್ಷೇತ್ರದಿಂದ ಕಂಗನಾ ಆಯ್ಕೆ ಪ್ರಶ್ನಿಸಿ ಅರ್ಜಿ, ಹೈಕೋರ್ಟ್​ ನೋಟಿಸ್
ಕಂಗನಾ ರಣಾವತ್
Follow us
|

Updated on: Jul 25, 2024 | 11:54 AM

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್(Kangana Ranaut) ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಆಯ್ಕೆಯನ್ನು ಹಿಮಾಚಲ ಪ್ರದೇಶ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿದೆ, ನಂತರ ನ್ಯಾಯಾಲಯವು ಕಂಗನಾ ಗೆ ನೋಟಿಸ್ ಕಳುಹಿಸಿದೆ. ನೋಟಿಸ್ ಜಾರಿ ಮಾಡಿದ ನ್ಯಾಯಮೂರ್ತಿ ಜ್ಯೋತ್ಸ್ನಾ ರೇವಾಲ್ ಅವರು ಆಗಸ್ಟ್ 21 ರೊಳಗೆ ಉತ್ತರಿಸುವಂತೆ ಕೇಳಿದ್ದಾರೆ.

ಈ ಅರ್ಜಿಯನ್ನು ಕಿನ್ನೌರ್ ನಿವಾಸಿ ಸ್ವತಂತ್ರ ಅಭ್ಯರ್ಥಿ ಲಾಯಿಕ್ ರಾಮ್ ನೇಗಿ ಸಲ್ಲಿಸಿದ್ದಾರೆ. ನಿಗದಿತ ಮಾನದಂಡಗಳನ್ನು ಪೂರೈಸಿದ್ದರೂ, ತಮ್ಮ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಅವರು ಈ ಅರ್ಜಿಯ ಮೂಲಕ ವಾದಿಸಿದ್ದಾರೆ.

ರಾಮ್ ನೇಗಿ ಅರಣ್ಯ ಇಲಾಖೆಯ ಮಾಜಿ ಉದ್ಯೋಗಿ ಎಂಬುದು ಗಮನಾರ್ಹ. ಅವರು ಅಕಾಲಿಕ ನಿವೃತ್ತಿಯನ್ನು ತೆಗೆದುಕೊಂಡಿದ್ದರು. ನಿಗದಿತ ಮಾನದಂಡಗಳನ್ನು ಪೂರೈಸಿದ್ದರೂ ಚುನಾವಣೆಗೆ ಮುನ್ನವೇ ತಮ್ಮ ನಾಮಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಮತ್ತಷ್ಟು ಓದಿ: ಕನ್ವರ್ ಯಾತ್ರೆ:ಯುಪಿ ಸರ್ಕಾರದ ‘ಹೆಸರು ಪ್ರದರ್ಶನ’ ಆದೇಶ ಬಗ್ಗೆ ಸೂನು ಸೂದ್ ನಿಲುವು ಪ್ರಶ್ನಿಸಿದ ಕಂಗನಾ ರಣಾವತ್

ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 100ರ ಅಡಿಯಲ್ಲಿ ಮಂಡಿಯಲ್ಲಿ ಚುನಾವಣೆಗೆ ಸವಾಲು ಹಾಕಿದರೆ ಅರ್ಜಿದಾರನು ತನ್ನ ನಾಮಪತ್ರವನ್ನು ಅಕ್ರಮವಾಗಿ ತಿರಸ್ಕರಿಸಲಾಗಿದೆ ಎಂದು ಸಾಬೀತುಪಡಿಸಲು ವಿಫಲವಾದಲ್ಲಿ ನ್ಯಾಯಾಲಯವು ಅಸಿಂಧು ಎಂದು ಘೋಷಿಸಬಹುದು.

ಕಂಗನಾ ರಣಾವತ್ ಅವರು 74 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಅವರನ್ನು ಬಿಜೆಪಿಯ ಕಂಗನಾ ರಣಾವತ್ 74 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ. ಕಂಗನಾ ರಣಾವತ್ 5.37 ಲಕ್ಷ ಮತಗಳನ್ನು ಪಡೆದರೆ, ವಿಕ್ರಮಾದಿತ್ಯ ಸಿಂಗ್ ಸುಮಾರು 4.62 ಲಕ್ಷ ಮತಗಳನ್ನು ಪಡೆದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವಿದ್ಯಾರ್ಥಿನಿಯರ ಮೇಲೆ ಗೂಳಿ ದಾಳಿ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಮೈದಾನ ರಾಮಾವತಾರ ಗಣೇಶ ಮೆರವಣಿಗೆಯ ವಿಡಿಯೋ ನೋಡಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ
ಕೋಲಾರ: ಸಂಕಷ್ಟಹರ ಗಣಪತಿ ದೇವಾಲಯದಲ್ಲಿ 10001 ಕರಿಗಡುಬಿನಲ್ಲಿ ಅರಳಿದ ಗಣಪತಿ