AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ವಿದೇಶಿ ಪ್ರಾಣಿಗಳಿಗೆ ಹೆಚ್ಚಿದ ಬೇಡಿಕೆ: ಭಾರತದಲ್ಲೂ ಪತ್ತೆಯಾಯ್ತು ಕಾಂಗರೂಗಳು, ವಿಡಿಯೋ ವೈರಲ್,

ಆಸ್ಟ್ರೇಲಿಯಾದಲ್ಲಿ ಸಾಮಾನ್ಯವಾಗಿ ಕಂಡುಬರುವ ಕಾಂಗರೂಗಳು ಪಶ್ಚಿಮ ಬಂಗಾಳದ ಹಳ್ಳಿಯೊಂದರ ರಸ್ತೆಯೊಂದರಲ್ಲಿ ಕಂಡುಬಂದಿದೆ. ಅರಣ್ಯಾಧಿಕಾರಿಗಳು ಸೆರೆಹಿಡಿದ ಮೂರು ಕಾಂಗರೂಗಳನ್ನು ಚಿಕಿತ್ಸೆಗೆಂದು ವನ್ಯಜೀವಿ ಉದ್ಯಾನವನಕ್ಕೆ ರವಾನಿಸಿದ್ದು, ಅಲ್ಲಿ ಒಂದು ಕಾಂಗರೂ ಸಾವನ್ನಪ್ಪಿದೆ.

ಭಾರತದಲ್ಲಿ ವಿದೇಶಿ ಪ್ರಾಣಿಗಳಿಗೆ ಹೆಚ್ಚಿದ ಬೇಡಿಕೆ: ಭಾರತದಲ್ಲೂ ಪತ್ತೆಯಾಯ್ತು ಕಾಂಗರೂಗಳು, ವಿಡಿಯೋ ವೈರಲ್,
ಪತ್ತೆಯಾದ ಕಾಂಗರೂಗಳು
Follow us
TV9 Web
| Updated By: Rakesh Nayak Manchi

Updated on:May 24, 2022 | 4:17 PM

ಆಸ್ಟ್ರೇಲಿಯಾದಲ್ಲಿ ಸಾಮಾನ್ಯವಾಗಿ ಕಂಡುಬರುವ ಕಾಂಗರೂ (Kangaroo)ಗಳು ಭಾರತದಲ್ಲೂ ಪತ್ತೆಯಾಗಿದ್ದು, ಇದರ ವಿಡಿಯೋ ವೈರಲ್ (Video Viral) ಆಗುತ್ತಿದೆ. ಪಶ್ಚಿಮ ಬಂಗಾಳದ ಹಳ್ಳಿಯೊಂದರ ರಸ್ತೆಯೊಂದರಲ್ಲಿ ಮೂರು ಕಾಂಗರೂಗಳು ಪತ್ತೆಯಾಗಿವೆ. ಇದನ್ನು ನೋಡಿದ ಸ್ಥಳೀಯರು, ಅಚ್ಚರಿಗೊಂಡಿದ್ದಲ್ಲದೆ,  ಪಶ್ಚಿಮ ಬಂಗಾಳ ರಾಜ್ಯದ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅರಣ್ಯಾಧಿಕಾರಿಗಳು ಮೂರು ಕಾಂಗರೂಗಳನ್ನು ಹಿಡಿದು ವನ್ಯಜೀವಿ ಉದ್ಯಾನವನಕ್ಕೆ ಚಿಕಿತ್ಸೆಗೆಂದು ರವಾನಿಸಿದ್ದಾರೆ. ನಂತರ ಒಂದು ಕಾಂಗರೂ ಸಾವನ್ನಪ್ಪಿದೆ.

ಈ ಬಗ್ಗೆ ಖಾಸಗಿ ಸುದ್ದಿಸಂಸ್ಥೆ ಬಿಬಿಸಿ ನ್ಯೂಸ್ ಜೊತೆ ಮಾತನಾಡಿದ ಪಶ್ಚಿಮ ಬಂಗಾಳದ ಮುಖ್ಯ ವನ್ಯಜೀವಿ ವಾರ್ಡನ್ ಡೆಬಲ್ ರೇ, ”ಕೆಲವು ವಿದೇಶಿ ಪ್ರಾಣಿಗಳನ್ನು ರಾಜ್ಯಕ್ಕೆ ಕಳ್ಳಸಾಗಣಿಕೆ ಮಾಡಲಾಗುತ್ತಿದೆ ಎಂಬ ಸುಳಿವು ಲಭಿಸಿತ್ತು. ಕೂಡಲೇ ನಮ್ಮ ತಂಡ ಕಾರ್ಯಪ್ರವೃತ್ತರಾಗಿ ವಾಹನ ತಪಾಸಣೆ ನಡೆಸಲು ಆರಂಭಿಸಿದ್ದಾರೆ. ಈ ಸುದ್ದಿ ತಿಳಿದು ಕಳ್ಳಸಾಗಾಣೆಕೆದಾರರು ಕಾಂಗರೂಗಳನ್ನು ಹೆದ್ದಾರಿಯಲ್ಲಿ ಬಿಟ್ಟು ಕಾಲ್ಕಿತ್ತಿರಬಹುದು” ಎಂದಿದ್ದಾರೆ.

ಇದನ್ನೂ ಓದಿ: ಅಸ್ಸಾಂನಲ್ಲಿ ಹೆಚ್ಚುತ್ತಿದೆ ಮಾನವ- ವನ್ಯಜೀವಿ ಸಂಘರ್ಷ; ಫೋಟೋ ತೆಗೆಯಲು ಮುಂದಾದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಚಿರತೆ

ಬಹುಶಃ ಈ ಪ್ರಾಣಿಗಳನ್ನು ಆಗ್ನೇಯ ಏಷ್ಯಾದ ಖಾಸಗಿ ಬ್ರೀಡಿಂಗ್ ಫಾರ್ಮ್‌ಗಳಿಂದ ರಾಜ್ಯಕ್ಕೆ ತರಲಾಗುತ್ತಿತ್ತು. ಕಳ್ಳಸಾಗಣೀಕೆದಾರರು ಮ್ಯಾನ್ಮಾರ್ ಮೂಲಕ ಭಾರತದ ಗಡಿ ರಾಜ್ಯಗಳಿಗೆ ತರುತ್ತಾರೆ ಎಂದು ಪ್ರಾದೇಶಿಕ ವನ್ಯಜೀವಿ ನಿಯಂತ್ರಣ ಬ್ಯೂರೋದ ಉಪ ನಿರ್ದೇಶಕ ಅಗ್ನಿ ಮಿತ್ರ ಹೇಳಿದ್ದಾರೆ.

ಭಾರತದ ಕಳ್ಳಸಾಗಣೆ ವಿರೋಧಿ ಗುಪ್ತಚರ ಸಂಸ್ಥೆ, ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಸುದ್ದಿಸಂಸ್ಥೆಗೆ ನೀಡಿದ ಮಾಹಿತಿ ಪ್ರಕಾರ, ದೇಶದಲ್ಲಿ ವಿದೇಶಿ ಪ್ರಾಣಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಬ್ಯಾಂಕಾಕ್, ಮಲೇಷ್ಯಾ ಮತ್ತು ಇತರ ಆಗ್ನೇಯ ಏಷ್ಯಾದ ಪ್ರಮುಖ ಪ್ರವಾಸಿ ತಾಣಗಳಿಂದ ದೇಶದೊಳಗೆ ಕಳ್ಳಸಾಗಣೆಯಾಗುತ್ತಿವೆ. ಜನರು ಸರಿಯಾದ ಪರವಾನಿಗೆ ಹೊಂದಿಲ್ಲದಿದ್ದರೆ ಕಾಡು ಪ್ರಾಣಿಗಳನ್ನು ಸಾಗಿಸುವುದನ್ನು ತಡೆಯುವ ಅಧಿಕಾರ ಕಸ್ಟಮ್ಸ್ ಅಧಿಕಾರಿಗಳಿಗೆ ಇದೆ. ಆದರೆ ಸರಂಧ್ರ ಗಡಿಗಳ ಮೂಲಕ ಅಕ್ರಮ ವ್ಯಾಪಾರವನ್ನು ಪತ್ತೆಹಚ್ಚಲು ಅವರಿಗೆ ಕಷ್ಟವಾಗುತ್ತದೆ. ಸ್ಥಳೀಯ ಪ್ರಾಣಿ ಪ್ರಭೇದಗಳ ವ್ಯಾಪಾರದ ಮೇಲೆ ನಿಷೇಧವಿರುವುದರಿಂದ, ಇಂಥ ಪ್ರಾಣಿಗಳ ಕಳ್ಳಸಾಗಾಣಿಕೆ ಆರಂಭಿಸಿದ್ದಾರೆ.

ಇದನ್ನೂ ಓದಿ: viral video: ಸದ್ದಿಲ್ಲದೆ ಆಸ್ಟ್ರೇಲಿಯಾದ ಬಾರ್​ವೊಂದಕ್ಕೆ ಎಂಟ್ರಿ ಕೊಟ್ಟ ಕಾಂಗರೂ; ಮುಂದೇನಾಯ್ತು..!

“ಸ್ವಲ್ಪ ಸಮಯದ ಹಿಂದೆ, ಭಾರತದಲ್ಲಿ ಖಾಸಗಿ ಮೃಗಾಲಯಕ್ಕೆ ಸಂಬಂಧಿಸಿದ ಜೀಬ್ರಾಗಳನ್ನು ಬಾಂಗ್ಲಾದೇಶದಲ್ಲಿ ವಶಪಡಿಸಿಕೊಳ್ಳಲಾಗಿತ್ತು. ಜನರು ಹುಚ್ಚುತನದ ಕೆಲಸಗಳನ್ನು ಮಾಡುತ್ತಿದ್ದಾರೆ” ಎಂದು ವರ್ಲ್ಡ್ ಅನಿಮಲ್ ಪ್ರೊಟೆಕ್ಷನ್ ಗುಂಪಿನ ಕಾರ್ಯಕರ್ತ ಶುಭೋಬ್ರೊಟೊ ಘೋಷ್ ಹೇಳಿದ್ದಾರೆ.

ವಿದೇಶಿ ಪ್ರಾಣಿಗಳನ್ನು ಸಾಕುಪ್ರಾಣಿಗಳಾಗಿ ದೇಶಕ್ಕೆ ಕರೆತರುವ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದರೂ, ವ್ಯಾಪಾರವನ್ನು ಮೇಲ್ವಿಚಾರಣೆ ಮಾಡಲು ಯಾವುದೇ ಪರಿಣಾಮಕಾರಿ ಕಾನೂನು ಇನ್ನೂ ಇಲ್ಲ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:16 pm, Tue, 24 May 22

ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು