AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ಹಯ್ಯ ಕುಮಾರ್ ನವಜೋತ್ ಸಿಧುನಂತೆ, ಅವರು ಕಾಂಗ್ರೆಸ್​​ನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

Kanhaiya Kumar: ಕಾಂಗ್ರೆಸ್ ದೊಡ್ಡ ಹಡಗು ಅದನ್ನು ಉಳಿಸಬೇಕಾಗಿದೆ ಎಂದು ಕನ್ಹಯ್ಯ ಮಾತನ್ನು ಉಲ್ಲೇಖಿಸಿದ ತಿವಾರಿ "ಅವರು ಪಕ್ಷವನ್ನು ಮತ್ತಷ್ಟು ನಾಶ ಮಾಡುವ ಇನ್ನೊಬ್ಬ ನವಜೋತ್ ಸಿಂಗ್ ಸಿಧುವಿನಂತಿದ್ದಾರೆ" ಎಂದು ಹೇಳಿದರು.

ಕನ್ಹಯ್ಯ ಕುಮಾರ್ ನವಜೋತ್ ಸಿಧುನಂತೆ, ಅವರು ಕಾಂಗ್ರೆಸ್​​ನ್ನು ನಾಶ ಮಾಡುತ್ತಾರೆ: ಆರ್​​ಜೆಡಿ
ಕನ್ಹಯ್ಯ ಕುಮಾರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 01, 2021 | 6:39 PM

Share

ಮುಜಾಫರ್ ನಗರ(ಬಿಹಾರ): ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್​​​ಜೆಡಿ (RJD) ಕನ್ಹಯ್ಯ ಕುಮಾರ್ (Kanhaiya Kumar) ಅವರು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದನ್ನು ಗೇಲಿ ಮಾಡಿದೆ. ಜೆಎನ್‌ಯುನ ಮಾಜಿ ವಿದ್ಯಾರ್ಥಿಯು “ಇನ್ನೊಬ್ಬ ನವಜೋತ್ ಸಿಂಗ್ ಸಿಧು” ನಂತೆ ಇದ್ದಾರೆ, ಅವರು ಹಳೆಯ ಪಕ್ಷವನ್ನು “ನಾಶಪಡಿಸುತ್ತಾರೆ”. ಎಂದು ಆರ್​​ಜೆಡಿ ವಾಗ್ದಾಳಿ ಮಾಡಿದೆ. ಕಾಂಗ್ರೆಸ್ ಮುಳುಗುವ ಹಡಗು ಎಂದಿದ್ದನ್ನು ವ್ಯಂಗ್ಯವಾಡಿದ ಹಿರಿಯ ಆರ್‌ಜೆಡಿ ನಾಯಕ ಶಿವಾನಂದ್ ತಿವಾರಿ (Shivanand Tiwari) ಅವರು ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯಿಂದ ಪಕ್ಷದಲ್ಲಿ ಯಾವುದೇ ಬದಲಾವಣೆ ಆಗಲ್ಲ ಎಂದು ಹೇಳಿದರು. ಕಾಂಗ್ರೆಸ್ ದೊಡ್ಡ ಹಡಗು ಅದನ್ನು ಉಳಿಸಬೇಕಾಗಿದೆ ಎಂದು ಕನ್ಹಯ್ಯ ಮಾತನ್ನು ಉಲ್ಲೇಖಿಸಿದ ತಿವಾರಿ “ಅವರು ಪಕ್ಷವನ್ನು ಮತ್ತಷ್ಟು ನಾಶ ಮಾಡುವ ಇನ್ನೊಬ್ಬ ನವಜೋತ್ ಸಿಂಗ್ ಸಿಧುವಿನಂತಿದ್ದಾರೆ” ಎಂದು ಹೇಳಿದರು. “ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ. ಅವರು ಪಕ್ಷವನ್ನು ಉಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಳುಗುವ ಹಡಗು ಮತ್ತು ಅದಕ್ಕೆ ಭವಿಷ್ಯವಿಲ್ಲ” ಎಂದು ಆರ್​​ಜೆಡಿ ನಾಯಕ ಸುದ್ದಿಗಾರರಿಗೆ ತಿಳಿಸಿದರು.

ತೇಜಸ್ವಿ ಯಾದವ್ ನೇತೃತ್ವದ ಪಕ್ಷವನ್ನು ಸಂಪರ್ಕಿಸದೆ ಕುಮಾರ್ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಕ್ಕೆ ಪಕ್ಷವು ಅತೃಪ್ತಿ ಹೊಂದಿದೆ ಎಂದು ಆರ್‌ಜೆಡಿ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಆರ್‌ಜೆಡಿ ನೇತೃತ್ವದ ವಿರೋಧ ಮೈತ್ರಿಕೂಟದ ಮಹಾಘಟಬಂಧನ್‌ನ ಒಂದು ಭಾಗವಾಗಿದ್ದು ಅದು 2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಹೋರಾಡಿದೆ. ಬಿಹಾರ ಕಾಂಗ್ರೆಸ್ ನಾಯಕರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯ ಕುಮಾರ್ ಕಾಂಗ್ರೆಸ್ ಪಕ್ಷದ ಆಶಾಕಿರಣವಾಗಿದ್ದಾರೆ ಅಂತ ರಾಜಕೀಯ ವಿಶ್ಲೇಷಕರು ಹೇಳುತ್ತಿರುವುದರಲ್ಲಿ ಹುರುಳಿದೆಯೇ?

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್