AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ಹಯ್ಯ ಕುಮಾರ್ ನವಜೋತ್ ಸಿಧುನಂತೆ, ಅವರು ಕಾಂಗ್ರೆಸ್​​ನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

Kanhaiya Kumar: ಕಾಂಗ್ರೆಸ್ ದೊಡ್ಡ ಹಡಗು ಅದನ್ನು ಉಳಿಸಬೇಕಾಗಿದೆ ಎಂದು ಕನ್ಹಯ್ಯ ಮಾತನ್ನು ಉಲ್ಲೇಖಿಸಿದ ತಿವಾರಿ "ಅವರು ಪಕ್ಷವನ್ನು ಮತ್ತಷ್ಟು ನಾಶ ಮಾಡುವ ಇನ್ನೊಬ್ಬ ನವಜೋತ್ ಸಿಂಗ್ ಸಿಧುವಿನಂತಿದ್ದಾರೆ" ಎಂದು ಹೇಳಿದರು.

ಕನ್ಹಯ್ಯ ಕುಮಾರ್ ನವಜೋತ್ ಸಿಧುನಂತೆ, ಅವರು ಕಾಂಗ್ರೆಸ್​​ನ್ನು ನಾಶ ಮಾಡುತ್ತಾರೆ: ಆರ್​​ಜೆಡಿ
ಕನ್ಹಯ್ಯ ಕುಮಾರ್
TV9 Web
| Edited By: |

Updated on: Oct 01, 2021 | 6:39 PM

Share

ಮುಜಾಫರ್ ನಗರ(ಬಿಹಾರ): ಬಿಹಾರದ ಪ್ರಮುಖ ವಿರೋಧ ಪಕ್ಷವಾದ ಆರ್​​​ಜೆಡಿ (RJD) ಕನ್ಹಯ್ಯ ಕುಮಾರ್ (Kanhaiya Kumar) ಅವರು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದನ್ನು ಗೇಲಿ ಮಾಡಿದೆ. ಜೆಎನ್‌ಯುನ ಮಾಜಿ ವಿದ್ಯಾರ್ಥಿಯು “ಇನ್ನೊಬ್ಬ ನವಜೋತ್ ಸಿಂಗ್ ಸಿಧು” ನಂತೆ ಇದ್ದಾರೆ, ಅವರು ಹಳೆಯ ಪಕ್ಷವನ್ನು “ನಾಶಪಡಿಸುತ್ತಾರೆ”. ಎಂದು ಆರ್​​ಜೆಡಿ ವಾಗ್ದಾಳಿ ಮಾಡಿದೆ. ಕಾಂಗ್ರೆಸ್ ಮುಳುಗುವ ಹಡಗು ಎಂದಿದ್ದನ್ನು ವ್ಯಂಗ್ಯವಾಡಿದ ಹಿರಿಯ ಆರ್‌ಜೆಡಿ ನಾಯಕ ಶಿವಾನಂದ್ ತಿವಾರಿ (Shivanand Tiwari) ಅವರು ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯಿಂದ ಪಕ್ಷದಲ್ಲಿ ಯಾವುದೇ ಬದಲಾವಣೆ ಆಗಲ್ಲ ಎಂದು ಹೇಳಿದರು. ಕಾಂಗ್ರೆಸ್ ದೊಡ್ಡ ಹಡಗು ಅದನ್ನು ಉಳಿಸಬೇಕಾಗಿದೆ ಎಂದು ಕನ್ಹಯ್ಯ ಮಾತನ್ನು ಉಲ್ಲೇಖಿಸಿದ ತಿವಾರಿ “ಅವರು ಪಕ್ಷವನ್ನು ಮತ್ತಷ್ಟು ನಾಶ ಮಾಡುವ ಇನ್ನೊಬ್ಬ ನವಜೋತ್ ಸಿಂಗ್ ಸಿಧುವಿನಂತಿದ್ದಾರೆ” ಎಂದು ಹೇಳಿದರು. “ಕನ್ಹಯ್ಯ ಕುಮಾರ್ ಅವರ ಸೇರ್ಪಡೆಯಿಂದ ಯಾವುದೇ ವ್ಯತ್ಯಾಸವಾಗುವುದಿಲ್ಲ. ಅವರು ಪಕ್ಷವನ್ನು ಉಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಳುಗುವ ಹಡಗು ಮತ್ತು ಅದಕ್ಕೆ ಭವಿಷ್ಯವಿಲ್ಲ” ಎಂದು ಆರ್​​ಜೆಡಿ ನಾಯಕ ಸುದ್ದಿಗಾರರಿಗೆ ತಿಳಿಸಿದರು.

ತೇಜಸ್ವಿ ಯಾದವ್ ನೇತೃತ್ವದ ಪಕ್ಷವನ್ನು ಸಂಪರ್ಕಿಸದೆ ಕುಮಾರ್ ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದಕ್ಕೆ ಪಕ್ಷವು ಅತೃಪ್ತಿ ಹೊಂದಿದೆ ಎಂದು ಆರ್‌ಜೆಡಿ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಆರ್‌ಜೆಡಿ ನೇತೃತ್ವದ ವಿರೋಧ ಮೈತ್ರಿಕೂಟದ ಮಹಾಘಟಬಂಧನ್‌ನ ಒಂದು ಭಾಗವಾಗಿದ್ದು ಅದು 2020 ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ವಿರುದ್ಧ ಹೋರಾಡಿದೆ. ಬಿಹಾರ ಕಾಂಗ್ರೆಸ್ ನಾಯಕರು ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ಕನ್ಹಯ್ಯ ಕುಮಾರ್ ಕಾಂಗ್ರೆಸ್ ಪಕ್ಷದ ಆಶಾಕಿರಣವಾಗಿದ್ದಾರೆ ಅಂತ ರಾಜಕೀಯ ವಿಶ್ಲೇಷಕರು ಹೇಳುತ್ತಿರುವುದರಲ್ಲಿ ಹುರುಳಿದೆಯೇ?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ