AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್‌ನಲ್ಲಿ ಬಾವಿ ತೋಡುತ್ತಿದ್ದ ನಾಲ್ವರು ಕಾರ್ಮಿಕರ ಜೀವಂತ ಸಮಾಧಿ

ಜಾರ್ಖಂಡ್​ನ ರಾಜಧಾನಿ ರಾಂಚಿಯಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ ಸೆನ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿತ್ರಿ ಅಂಬತೋಲಿ ಗ್ರಾಮದಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಮಿಕರು ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಬಾವಿಯನ್ನು ಅಗೆಯುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ ಬಾವಿ ತೋಡುತ್ತಿದ್ದ ನಾಲ್ವರು ಕಾರ್ಮಿಕರ ಜೀವಂತ ಸಮಾಧಿ
ಪೊಲೀಸರು
ಸುಷ್ಮಾ ಚಕ್ರೆ
|

Updated on: May 23, 2024 | 8:37 PM

Share

ರಾಂಚಿ: ಜಾರ್ಖಂಡ್‌ನ (Jharkhand) ಲೋಹರ್ಡಗಾ ಜಿಲ್ಲೆಯಲ್ಲಿ ಇಂದು (ಗುರುವಾರ) ಮಹಿಳೆ ಸೇರಿದಂತೆ ರಾಂಚಿಯ (Ranchi) ನಾಲ್ವರು ಕಾರ್ಮಿಕರು ಬಾವಿ ತೋಡುವ ವೇಳೆ ಜೀವಂತ ಸಮಾಧಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾರ್ಖಂಡ್​ನ ರಾಜಧಾನಿ ರಾಂಚಿಯಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ ಸೆನ್ಹಾ ಪೊಲೀಸ್ ಠಾಣೆ ವ್ಯಾಪ್ತಿಯ ಚಿತ್ರಿ ಅಂಬತೋಲಿ ಗ್ರಾಮದಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಕಾರ್ಮಿಕರು ಎಂಜಿಎನ್‌ಆರ್‌ಇಜಿಎ ಯೋಜನೆಯಡಿ ಬಾವಿಯನ್ನು ಅಗೆಯುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೊಲೀಸರು ಈ ಬಗ್ಗೆ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ಅಷ್ಟರೊಳಗೆ ಎಲ್ಲಾ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: Fire Accident: ಥಾಣೆಯ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಸ್ಫೋಟ; ದುರಂತದಲ್ಲಿ 4 ಮಂದಿ ಸಾವು, 25 ಜನರಿಗೆ ಗಾಯ

“ನಾಲ್ವರು ಕಾರ್ಮಿಕರು ಬಾವಿಯನ್ನು ಅಗೆಯುತ್ತಿದ್ದಾಗ ಮೇಲಿನ ಭೂಮಿಯ ಒಂದು ಭಾಗವು ಕುಸಿದಿದೆ. ಈ ವೇಳೆ ಅಗೆಯುವ ಯಂತ್ರಗಳು ಮತ್ತು ಇತರ ಉಪಕರಣಗಳನ್ನು ನಿಯೋಜಿಸಲಾಗಿತ್ತು. ಆ ವೇಳೆಗಾಗಲೇ ನಾಲ್ವರು ಸತ್ತಿರುವುದು ಪತ್ತೆಯಾಗಿದೆ” ಎಂದು ಸೇನ್ಹ ಪೊಲೀಸ್ ಠಾಣೆಯ ಉಸ್ತುವಾರಿ ವೇದಾಂತ್ ಶಂಕರ್ ಹೇಳಿದ್ದಾರೆ.

ಮೃತರನ್ನು ಅಬು ರೆಹಾನ್ ಅನ್ಸಾರಿ (35), ಶಬ್ನಮ್ ಖಾತುನ್ (21), ರಂಜಾನ್ ಅನ್ಸಾರಿ (35) ಮತ್ತು ಭಗತ್ ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ