AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Umesh Pal Murder Case: ಶಾಯಿಸ್ತಾ ಪರ್ವೀನ್, ಗುಡ್ಡು ಮುಸ್ಲಿಂ, ಸಬೀರ್ ವಿರುದ್ಧ ಲುಕ್​ಔಟ್ ನೋಟಿಸ್

ಉಮೇಶ್​ ಪಾಲ್(Umesh Pal) ​ ಹತ್ಯೆಗೆ ಸಂಬಂಧಿಸಿದಂತೆ ಶಾಯಿಸ್ತಾ ಪರ್ವೀನ್, ಗುಡ್ಡು ಮುಸ್ಲಿಂ, ಸಬೀರ್ ವಿರುದ್ಧ ಪೊಲೀಸರು ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

Umesh Pal Murder Case: ಶಾಯಿಸ್ತಾ ಪರ್ವೀನ್, ಗುಡ್ಡು ಮುಸ್ಲಿಂ, ಸಬೀರ್ ವಿರುದ್ಧ ಲುಕ್​ಔಟ್ ನೋಟಿಸ್
ಶಾಯಿಸ್ತಾ ಪರ್ವೀನ್Image Credit source: OpIndia
ನಯನಾ ರಾಜೀವ್
|

Updated on: May 16, 2023 | 12:27 PM

Share

ಉಮೇಶ್​ ಪಾಲ್(Umesh Pal) ​ ಹತ್ಯೆಗೆ ಸಂಬಂಧಿಸಿದಂತೆ ಶಾಯಿಸ್ತಾ ಪರ್ವೀನ್, ಗುಡ್ಡು ಮುಸ್ಲಿಂ, ಸಬೀರ್ ವಿರುದ್ಧ ಪೊಲೀಸರು ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಉಮೇಶ್ ಪಾಲ್ ಹತ್ಯೆ ನಂತರ ಅತೀಕ್ ಅಹ್ಮದ್ ಪತ್ನಿ ಶಾಯಿಸ್ತಾ , ಆತನ ಆಪ್ತ ಗುಡ್ಡು ಮುಸ್ಲಿಂ ಹಾಗೂ ಸಬೀರ್ ಪರಾರಿಯಾಗಿದ್ದರು ಈಗ ಅವರ ವಿರುದ್ಧ ಪ್ರಯಾಗ್​ರಾಜ್ ಪೊಲೀಸರು ಲುಕ್​ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಈಗಾಗಲೇ ಶೈಸ್ತಾ ಪರ್ವೀನ್ ಹೆಸರಿನಲ್ಲಿ 50,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ, ದೇಶ ತೊರೆಯದಂತೆ ಲುಕ್​ಔಟ್ ನೋಟಿಸ್ ಜಾರಿ ಮಾಡಿಲಕಾಗಿದೆ, ಈ ನೋಟಿಸ್ ಅವಧಿ 1 ವರ್ಷದ್ದಾಗಿರುತ್ತದೆ.

ಉಮೇಶ್ ಪಾಲ್ ಹತ್ಯೆಯಾಗಿ 81 ದಿನಗಳಿಂದ ಮೂವರೂ ತಲೆಮರೆಸಿಕೊಂಡಿದ್ದಾರೆ. ಈ ಮೂವರ ಹುಡುಕಾಟದಲ್ಲಿ ಯುಪಿ ಪೊಲೀಸ್, ಎಸ್‌ಟಿಎಫ್ ತಂಡ ಮಹಾರಾಷ್ಟ್ರ, ಒಡಿಶಾ, ಬಿಹಾರ, ರಾಜಸ್ಥಾನ ಸೇರಿದಂತೆ 8 ರಾಜ್ಯಗಳಲ್ಲಿ ಇದುವರೆಗೆ ದಾಳಿ ನಡೆಸಿದೆ.

ಗುಪ್ತಚರ ಇಲಾಖೆಯ ವರದಿ ಬಂದ ನಂತರ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೂವರೂ ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಭೂತಾನ್‌ನಂತಹ ದೇಶಗಳಿಗೆ ಪಲಾಯನ ಮಾಡುವ ಆತಂಕವಿದೆ. ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಅವರನ್ನು ಏಪ್ರಿಲ್ 15 ರಂದು ಕೊಲ್ವಿನ್ ಆಸ್ಪತ್ರೆಯಲ್ಲಿ ಹತ್ಯೆ ಮಾಡಲಾಗಿದೆ.

ಮತ್ತಷ್ಟು ಓದಿ: Atiq Ahmad Killers: ಪ್ರತಾಪ್​ಗಢ ಕಾರಾಗೃಹಕ್ಕೆ ಗ್ಯಾಂಗ್​ಸ್ಟರ್ ಅತೀಕ್ ಅಹ್ಮದ್ ಹಂತಕರ ಸ್ಥಳಾಂತರ

ಉಮೇಶ್ ಪಾಲ್ ಮತ್ತು ಪೊಲೀಸ್ ಅಂಗರಕ್ಷಕರ ಮೇಲೆ ಗುಡ್ಡು ಮುಸ್ಲಿಂ ಕಚ್ಚಾ ಬಾಂಬ್‌ಗಳನ್ನು ಎಸೆದಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿತ್ತು. ನಂತರ ತಲೆ ಮರೆಸಿಕೊಂಡಿದ್ದ ಗುಡ್ಡು ಮುಸ್ಲಿಂ ಇದೀಗ ಕರ್ನಾಟಕದಲ್ಲಿ ಓಡಾಡುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಯಿಂಗಳಿಂದ ಪತ್ತೆ ಹಚ್ಚಲಾಗಿತ್ತು. ಆತನ ಬಂಧನಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಕರ್ನಾಟಕ ಪೊಲೀಸರ ನೆರವು ಕೋರಿದ್ದಾರೆ.

ಉಮೇಶ್ ಪಾಲ್ ಮತ್ತು ಇಬ್ಬರು ಪೊಲೀಸರನ್ನು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಅವರ ನಿವಾಸದ ಹೊರಗೆ ಗುಂಡಿಕ್ಕಿ ಕೊಂದ ನಂತರ ಎರಡು ತಿಂಗಳೊಳಗೆ ಮಾಫಿಯಾ ಡಾನ್, ರಾಜಕಾರಣಿ ಅತೀಕ್ ಅಹ್ಮದ್‌ಗೆ ಸಂಬಂಧಿಸಿದ ಆರು ಜನರು ಹತ್ಯೆ ಮಾಡಲಾಗಿದೆ. ಆರು ಮಂದಿಯ ಪಟ್ಟಿಯಲ್ಲಿ ಅತೀಕ್, ಅವರ ಪುತ್ರ ಅಸಾದ್, ಸಹಚರರಾದ ಅರ್ಬಾಜ್, ವಿಜಯ್ ಚೌಧರಿ ಅಲಿಯಾಸ್ ಉಸ್ಮಾನ್ ಮತ್ತು ಗುಲಾಮ್ ಹಸನ್ ಸೇರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ