AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kannur: ಚಲಿಸುತ್ತಿದ್ದ ಕಾರಿಗೆ ಬೆಂಕಿ, ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ, ನಾಲ್ವರು ಪ್ರಾಣಾಪಾಯದಿಂದ ಪಾರು

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರು ಸಜೀವ ಸಹನವಾಗಿರುವ ಹೃದಯ ವಿದ್ರಾವಕ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.

Kannur: ಚಲಿಸುತ್ತಿದ್ದ ಕಾರಿಗೆ ಬೆಂಕಿ, ಗರ್ಭಿಣಿ ಸೇರಿ ಇಬ್ಬರು ಸಜೀವ ದಹನ, ನಾಲ್ವರು ಪ್ರಾಣಾಪಾಯದಿಂದ ಪಾರು
ಬೆಂಕಿ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on:Feb 02, 2023 | 3:18 PM

Share

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಗರ್ಭಿಣಿ ಸೇರಿದಂತೆ ಇಬ್ಬರು ಸಜೀವ ಸಹನವಾಗಿರುವ ಹೃದಯ ವಿದ್ರಾವಕ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಕಾರಿನಲ್ಲಿ ಆರು ಮಂದಿ ಪ್ರಯಾಣಿಸುತ್ತಿದ್ದರು ಮತ್ತು ವಾಹನಕ್ಕೆ ಬೆಂಕಿ ಹೊತ್ತಿಕೊಂಡಾಗ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಮಗು ಸೇರಿದಂತೆ ನಾಲ್ವರು ಪಾರಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂತ್ರಸ್ತರ ಸಹ ಪ್ರಯಾಣಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿದ ಕಣ್ಣೂರು ನಗರ ಪೊಲೀಸ್ ಕಮಿಷನರ್ ಅಜಿತ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, “ಅವರಿಗೆ ಯಾವುದೇ ಗಾಯಗಳಾಗಿಲ್ಲ, ಅವರು ಆಸ್ಪತ್ರೆಯಲ್ಲಿದ್ದಾರೆ ಮತ್ತು ಅವರನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಕಾರಿನ ಮುಂಭಾಗದ ಬಾಗಿಲು ತೆರೆಯಲು ಸಾಧ್ಯವಾಗದ ಕಾರಣ ಸಂತ್ರಸ್ತರು ಒಳಗೆ ಸಿಲುಕಿಕೊಂಡಿದ್ದರು ಎಂದು ಅವರು ಹೇಳಿದರು.

ಜಿಲ್ಲೆಯ ಕುಟ್ಯತ್ತೂರಿನವರಾದ 35 ಮತ್ತು 26 ವರ್ಷ ವಯಸ್ಸಿನ ಸಂತ್ರಸ್ತರು ಮತ್ತು ಇತರರು ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸ್ಥಳೀಯರ ಪ್ರಕಾರ, ಮೃತಪಟ್ಟ ಮಹಿಳೆ ಗರ್ಭಿಣಿಯಾಗಿದ್ದು, ಕಾರಿನ ಮುಂಭಾಗದ ಬಾಗಿಲು ತೆರೆದು ಸಂತ್ರಸ್ತ ದಂಪತಿಯನ್ನು ರಕ್ಷಿಸಲು ಪ್ರಯತ್ನಿಸಿದರು ಆದರೆ ವಿಫಲರಾಗಿದ್ದಾರೆ.

ಸ್ಥಳದಲ್ಲಿದ್ದ ಸ್ಥಳೀಯರು ಕಾರಿನೊಳಗೆ ಸಿಲುಕಿಕೊಂಡಿದ್ದ ದಂಪತಿಯನ್ನು ರಕ್ಷಿಸಲು ಸುಟ್ಟ ಕಾರಿನ ಕಡೆಗೆ ಓಡುತ್ತಿರುವುದನ್ನು ಟಿವಿ ದೃಶ್ಯಾವಳಿಗಳು ತೋರಿಸಿವೆ. ಅವರಲ್ಲಿ ಕೆಲವರು ಪುರುಷ ಮತ್ತು ಮಹಿಳೆಯನ್ನು ರಕ್ಷಿಸಲು ಬಾಗಿಲು ತೆರೆಯಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:18 pm, Thu, 2 February 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ