AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​
ವೈರಲ್​​ ಸ್ಟೋರಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Oct 11, 2023 | 11:31 AM

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಇದೀಗ ಈ ಕಾಳಗದ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಈ ವಿಡಿಯೋವನ್ನು ನೋಡಿದ್ರೆ ಬೆಚ್ಚಿ ಬೀಳಿಸುವಂತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಇದರಲ್ಲಿ ಎರಡು ತಂಡದ ಸದಸ್ಯರು ಖರ್ಚಿಗಳಿಂದ, ಕೈಗೆ ಸಿಕ್ಕಿದ ವಸ್ತುಗಳಿಂದ ಪರಸ್ಪರ ಹೊಡೆದಾಡುಕೊಳ್ಳುತ್ತಿರುವುದನ್ನು ಕಾಣಬಹುದು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದು ಕಬಡ್ಡಿ ಅಲ್ಲ, WW ಎಂದು ಕರೆದಿದ್ದಾರೆ.

ಈ ವಿಡಿಯೋ ಎಲ್ಲ ಕಡೆ ವೇಗವಾಗಿ ವೈರಲ್​​ ಆಗಿದ್ದು, 180,000 ವೀಕ್ಷಣೆ ಪಡೆದುಕೊಂಡಿದೆ. ಸಾವಿರಕ್ಕೂ ಹೆಚ್ಚು ಲೈಕ್​ ಪಡೆದುಕೊಂಡಿದ್ದು, ಈ ವಿಡಿಯೋಗೆ ಅನೇಕರು ಕಮೆಂಟ್​​ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ಇವರುಗಳು ನಮ್ಮ ದೇಶದ ಭವಿಷ್ಯ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ, ಇಷ್ಟು ದೊಡ್ಡ ಜಗಳ ನಡೆಯುತ್ತಿದೆ, ಆದರೆ ಈ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ತನ್ನ ಪಾಡಿಗೆ ಟೇಬಲ್​​ ಮೇಲೆ ಕುಳಿತುಕೊಂಡಿದ್ದಾನೆ. ಅವನಿಗೆ ಯಾವುದರ ಚಿಂತೆಯು ಇಲ್ಲ ಎಂದು ಹಾಸ್ಯವಾಗಿ ಕಮೆಂಟ್​​​ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಎದುರು ಮನೆ ಬಾಲ್ಕನಿಯಲ್ಲಿ ಕಾಣಿಸಿಕೊಂಡಿದ್ದು ದೆವ್ವನಾ? ವಿಡಿಯೋ ವೈರಲ್ ಆಗಿದೆ

ಐಐಟಿ ಕಾನ್ಪುರದಲ್ಲಿ ನಡೆದ ಅಂತರ್​​ ರಾಜ್ಯ ಕ್ರೀಡಾ ಕೂಟವಾಗಿತ್ತು. ಇದರಲ್ಲಿ 400 ಹೆಚ್ಚು ಕಾಲೇಜುಗಳು ಭಾಗವಹಿಸುತ್ತದೆ. ಇನ್ನು ಈ ಎರಡು ತಂಡಗಳು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿ ವಿದ್ಯಾರ್ಥಿಗಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಐಐಟಿ ಸೂಕ್ತ ಕ್ರಮವನ್ನು ತೆಗೆದುಕೊಂಡು, ಎರಡು ತಂಡಗಳನ್ನು ಸ್ಪರ್ಧೆಯಿಂದ ನಿಷೇಧಿಸಲಾಗಿದೆ. ಘಟನೆಯ ಬಗ್ಗೆ ಎರಡು ತಂಡಗಳ ಕಾಲೇಜುಗಳಿಗೆ ನೋಟಿಸ್​​ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು