AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​
ವೈರಲ್​​ ಸ್ಟೋರಿ
ಅಕ್ಷಯ್​ ಪಲ್ಲಮಜಲು​​
|

Updated on: Oct 11, 2023 | 11:31 AM

Share

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಇದೀಗ ಈ ಕಾಳಗದ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಈ ವಿಡಿಯೋವನ್ನು ನೋಡಿದ್ರೆ ಬೆಚ್ಚಿ ಬೀಳಿಸುವಂತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಇದರಲ್ಲಿ ಎರಡು ತಂಡದ ಸದಸ್ಯರು ಖರ್ಚಿಗಳಿಂದ, ಕೈಗೆ ಸಿಕ್ಕಿದ ವಸ್ತುಗಳಿಂದ ಪರಸ್ಪರ ಹೊಡೆದಾಡುಕೊಳ್ಳುತ್ತಿರುವುದನ್ನು ಕಾಣಬಹುದು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದು ಕಬಡ್ಡಿ ಅಲ್ಲ, WW ಎಂದು ಕರೆದಿದ್ದಾರೆ.

ಈ ವಿಡಿಯೋ ಎಲ್ಲ ಕಡೆ ವೇಗವಾಗಿ ವೈರಲ್​​ ಆಗಿದ್ದು, 180,000 ವೀಕ್ಷಣೆ ಪಡೆದುಕೊಂಡಿದೆ. ಸಾವಿರಕ್ಕೂ ಹೆಚ್ಚು ಲೈಕ್​ ಪಡೆದುಕೊಂಡಿದ್ದು, ಈ ವಿಡಿಯೋಗೆ ಅನೇಕರು ಕಮೆಂಟ್​​ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ಇವರುಗಳು ನಮ್ಮ ದೇಶದ ಭವಿಷ್ಯ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ, ಇಷ್ಟು ದೊಡ್ಡ ಜಗಳ ನಡೆಯುತ್ತಿದೆ, ಆದರೆ ಈ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ತನ್ನ ಪಾಡಿಗೆ ಟೇಬಲ್​​ ಮೇಲೆ ಕುಳಿತುಕೊಂಡಿದ್ದಾನೆ. ಅವನಿಗೆ ಯಾವುದರ ಚಿಂತೆಯು ಇಲ್ಲ ಎಂದು ಹಾಸ್ಯವಾಗಿ ಕಮೆಂಟ್​​​ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಎದುರು ಮನೆ ಬಾಲ್ಕನಿಯಲ್ಲಿ ಕಾಣಿಸಿಕೊಂಡಿದ್ದು ದೆವ್ವನಾ? ವಿಡಿಯೋ ವೈರಲ್ ಆಗಿದೆ

ಐಐಟಿ ಕಾನ್ಪುರದಲ್ಲಿ ನಡೆದ ಅಂತರ್​​ ರಾಜ್ಯ ಕ್ರೀಡಾ ಕೂಟವಾಗಿತ್ತು. ಇದರಲ್ಲಿ 400 ಹೆಚ್ಚು ಕಾಲೇಜುಗಳು ಭಾಗವಹಿಸುತ್ತದೆ. ಇನ್ನು ಈ ಎರಡು ತಂಡಗಳು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿ ವಿದ್ಯಾರ್ಥಿಗಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಐಐಟಿ ಸೂಕ್ತ ಕ್ರಮವನ್ನು ತೆಗೆದುಕೊಂಡು, ಎರಡು ತಂಡಗಳನ್ನು ಸ್ಪರ್ಧೆಯಿಂದ ನಿಷೇಧಿಸಲಾಗಿದೆ. ಘಟನೆಯ ಬಗ್ಗೆ ಎರಡು ತಂಡಗಳ ಕಾಲೇಜುಗಳಿಗೆ ನೋಟಿಸ್​​ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು