AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಈ ಘಟನೆಯ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ.

ಕಾನ್ಪುರ: ವಾರ್ಷಿಕ ಕ್ರೀಡಾಕೂಟದ ಕಬಡ್ಡಿ ಪಂದ್ಯ ವೇಳೆ ಎರಡು ತಂಡಗಳ ನಡುವೆ ಕಾಳಗ, ವಿಡಿಯೋ ವೈರಲ್​​
ವೈರಲ್​​ ಸ್ಟೋರಿ
ಅಕ್ಷಯ್​ ಪಲ್ಲಮಜಲು​​
|

Updated on: Oct 11, 2023 | 11:31 AM

Share

ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾ ಉತ್ಸವದ ಕಬಡ್ಡಿ ಪಂದ್ಯದಲ್ಲಿ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಎರಡು ತಂಡಗಳು ಕುರ್ಚಿ, ಆಯುಧಗಳಿಂದ ಹಿಂಸಾತ್ಮಕ ಕಾದಾಟವನ್ನು ನಡೆಸಿದ್ದಾರೆ. ಇದೀಗ ಈ ಕಾಳಗದ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಈ ವಿಡಿಯೋವನ್ನು ನೋಡಿದ್ರೆ ಬೆಚ್ಚಿ ಬೀಳಿಸುವಂತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದ್ದು, ಇದರಲ್ಲಿ ಎರಡು ತಂಡದ ಸದಸ್ಯರು ಖರ್ಚಿಗಳಿಂದ, ಕೈಗೆ ಸಿಕ್ಕಿದ ವಸ್ತುಗಳಿಂದ ಪರಸ್ಪರ ಹೊಡೆದಾಡುಕೊಳ್ಳುತ್ತಿರುವುದನ್ನು ಕಾಣಬಹುದು. ಇನ್ನು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಇದು ಕಬಡ್ಡಿ ಅಲ್ಲ, WW ಎಂದು ಕರೆದಿದ್ದಾರೆ.

ಈ ವಿಡಿಯೋ ಎಲ್ಲ ಕಡೆ ವೇಗವಾಗಿ ವೈರಲ್​​ ಆಗಿದ್ದು, 180,000 ವೀಕ್ಷಣೆ ಪಡೆದುಕೊಂಡಿದೆ. ಸಾವಿರಕ್ಕೂ ಹೆಚ್ಚು ಲೈಕ್​ ಪಡೆದುಕೊಂಡಿದ್ದು, ಈ ವಿಡಿಯೋಗೆ ಅನೇಕರು ಕಮೆಂಟ್​​ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರ ಇವರುಗಳು ನಮ್ಮ ದೇಶದ ಭವಿಷ್ಯ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ, ಇಷ್ಟು ದೊಡ್ಡ ಜಗಳ ನಡೆಯುತ್ತಿದೆ, ಆದರೆ ಈ ವಿಡಿಯೋದಲ್ಲಿ ಒಬ್ಬ ವಿದ್ಯಾರ್ಥಿ ತನ್ನ ಪಾಡಿಗೆ ಟೇಬಲ್​​ ಮೇಲೆ ಕುಳಿತುಕೊಂಡಿದ್ದಾನೆ. ಅವನಿಗೆ ಯಾವುದರ ಚಿಂತೆಯು ಇಲ್ಲ ಎಂದು ಹಾಸ್ಯವಾಗಿ ಕಮೆಂಟ್​​​ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯರಾತ್ರಿ ಎದುರು ಮನೆ ಬಾಲ್ಕನಿಯಲ್ಲಿ ಕಾಣಿಸಿಕೊಂಡಿದ್ದು ದೆವ್ವನಾ? ವಿಡಿಯೋ ವೈರಲ್ ಆಗಿದೆ

ಐಐಟಿ ಕಾನ್ಪುರದಲ್ಲಿ ನಡೆದ ಅಂತರ್​​ ರಾಜ್ಯ ಕ್ರೀಡಾ ಕೂಟವಾಗಿತ್ತು. ಇದರಲ್ಲಿ 400 ಹೆಚ್ಚು ಕಾಲೇಜುಗಳು ಭಾಗವಹಿಸುತ್ತದೆ. ಇನ್ನು ಈ ಎರಡು ತಂಡಗಳು ಕಾನ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿ ವಿದ್ಯಾರ್ಥಿಗಳಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಐಐಟಿ ಸೂಕ್ತ ಕ್ರಮವನ್ನು ತೆಗೆದುಕೊಂಡು, ಎರಡು ತಂಡಗಳನ್ನು ಸ್ಪರ್ಧೆಯಿಂದ ನಿಷೇಧಿಸಲಾಗಿದೆ. ಘಟನೆಯ ಬಗ್ಗೆ ಎರಡು ತಂಡಗಳ ಕಾಲೇಜುಗಳಿಗೆ ನೋಟಿಸ್​​ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More