AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ಹುಡುಗಿಯರು ಸ್ನಾನ ಮಾಡುತ್ತಿರುವಾಗ ವಿಡಿಯೊ ಚಿತ್ರೀಕರಣ; ಹಾಸ್ಟೆಲ್ ಸಿಬ್ಬಂದಿ ಬಂಧನ

ಕಾನ್ಪುರದ ತುಳಸಿ ನಗರ ಪ್ರದೇಶದಲ್ಲಿ ವೈದ್ಯಕೀಯ ಆಕಾಂಕ್ಷಿಗಳು ತಂಗಿರುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.  ಆರೋಪಿ ಹುಡುಗಿಯರು ಸ್ನಾನ ಮಾಡುತ್ತಿರುವ ವಿಡಿಯೊ ಶೂಟ್ ಮಾಡಿದ್ದು, ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು

ಕಾನ್ಪುರ: ಹುಡುಗಿಯರು ಸ್ನಾನ ಮಾಡುತ್ತಿರುವಾಗ ವಿಡಿಯೊ ಚಿತ್ರೀಕರಣ; ಹಾಸ್ಟೆಲ್ ಸಿಬ್ಬಂದಿ ಬಂಧನ
ವಿದ್ಯಾರ್ಥಿನಿಯರು ಠಾಣೆ ಮುಂದೆ ಪ್ರತಿಭಟನೆ ನಡೆಸಿರುವುದು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Sep 29, 2022 | 8:50 PM

Share

ಕಾನ್ಪುರ:  ಸ್ನಾನ ಮಾಡುತ್ತಿರುವಾಗ ತಮ್ಮ ಹಾಸ್ಟೆಲ್ ಸಿಬ್ಬಂದಿ ವಿಡಿಯೊ ಚಿತ್ರೀಕರಿಸಿದ್ದಾರೆ ಎಂದು ಉತ್ತರ ಪ್ರದೇಶದ ಕಾನ್ಪುರದ (Kanpur) ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ದೂರು ನೀಡಿದರೂ ಕ್ರಮ ಕೈಗೊಳ್ಳದ ಆರೋಪದ ಮೇಲೆ ಬಾಲಕಿಯರ ಗುಂಪು ಸ್ಥಳೀಯ ಪೊಲೀಸ್ ಠಾಣೆಗೆ ಬಂದು ಪ್ರತಿಭಟನೆ ನಡೆಸಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ವಾರಗಳ ಹಿಂದೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ (Chandigarh University controversy) ಇದೇ  ರೀತಿಯ ಪ್ರಕರಣ ನಡೆದಿತ್ತು. ವಿದ್ಯಾರ್ಥಿನಿಯರ  ಹಾಸ್ಟೆಲ್‌ನಿಂದ ವಿಡಿಯೊ ಸೋರಿಕೆಯಾಗಿದ್ದನ್ನು ಖಂಡಿಸಿ  ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ್ದರು. ಕಾನ್ಪುರದ ಖಾಸಗಿ ಹಾಸ್ಟೆಲ್‌ನಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿದ್ಯಾರ್ಥಿನಿಯರು ಅಶ್ಲೀಲ ವಿಡಿಯೊ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆರೋಪಿಯನ್ನು  ಬಂಧಿಸಲಾಗಿದೆ. ಕಾನ್ಪುರದ ತುಳಸಿ ನಗರ ಪ್ರದೇಶದಲ್ಲಿ ವೈದ್ಯಕೀಯ ಆಕಾಂಕ್ಷಿಗಳು ತಂಗಿರುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.  ಆರೋಪಿ ಹುಡುಗಿಯರು ಸ್ನಾನ ಮಾಡುತ್ತಿರುವ ವಿಡಿಯೊ ಶೂಟ್ ಮಾಡಿದ್ದು, ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೂರಿನ ಪ್ರಕಾರ, ಹಾಸ್ಟೆಲ್ ಸಿಬ್ಬಂದಿ ಹಾಸ್ಟೆಲ್‌ನಲ್ಲಿರುವ ಹುಡುಗಿಯರ ಹಲವಾರು ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾನೆ. ಗುರುವಾರ ಈತ  ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದುದನ್ನು ನೋಡಿದ ಬಾಲಕಿಯೊಬ್ಬಳು ಆತನ ಫೋನ್ ಕಸಿದುಕೊಂಡಿದ್ದಳು. ಇದರಲ್ಲಿ ಹಲವು  ವಿಡಿಯೊಗಳು ಇರುವುದಾಗಿ ಕಂಡುಕೊಂಡ ವಿದ್ಯಾರ್ಥಿನಿಯರು  ಸಮೀಪದ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಈ ಹಾಸ್ಟೆಲ್ ಉತ್ತರ ಪ್ರದೇಶದ ಜಿಲ್ಲೆಯೊಂದರಲ್ಲಿ ಹೆಚ್ಚುವರಿ ಎಸ್‌ಪಿಯಾಗಿ ನೇಮಕಗೊಂಡ ಪೊಲೀಸ್ ಅಧಿಕಾರಿಯ ಒಡೆತನದಲ್ಲಿದೆ. ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದು ವೈದ್ಯಕೀಯ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ.

ಬಾಲಕಿಯರಿಂದ ದೂರು ಸ್ವೀಕರಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸಿಪಿ ಕಲ್ಯಾಣಪುರ ದಿನೇಶ್ ಶುಕ್ಲಾ ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?