AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರ: ಹುಡುಗಿಯರು ಸ್ನಾನ ಮಾಡುತ್ತಿರುವಾಗ ವಿಡಿಯೊ ಚಿತ್ರೀಕರಣ; ಹಾಸ್ಟೆಲ್ ಸಿಬ್ಬಂದಿ ಬಂಧನ

ಕಾನ್ಪುರದ ತುಳಸಿ ನಗರ ಪ್ರದೇಶದಲ್ಲಿ ವೈದ್ಯಕೀಯ ಆಕಾಂಕ್ಷಿಗಳು ತಂಗಿರುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.  ಆರೋಪಿ ಹುಡುಗಿಯರು ಸ್ನಾನ ಮಾಡುತ್ತಿರುವ ವಿಡಿಯೊ ಶೂಟ್ ಮಾಡಿದ್ದು, ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು

ಕಾನ್ಪುರ: ಹುಡುಗಿಯರು ಸ್ನಾನ ಮಾಡುತ್ತಿರುವಾಗ ವಿಡಿಯೊ ಚಿತ್ರೀಕರಣ; ಹಾಸ್ಟೆಲ್ ಸಿಬ್ಬಂದಿ ಬಂಧನ
ವಿದ್ಯಾರ್ಥಿನಿಯರು ಠಾಣೆ ಮುಂದೆ ಪ್ರತಿಭಟನೆ ನಡೆಸಿರುವುದು
TV9 Web
| Edited By: |

Updated on: Sep 29, 2022 | 8:50 PM

Share

ಕಾನ್ಪುರ:  ಸ್ನಾನ ಮಾಡುತ್ತಿರುವಾಗ ತಮ್ಮ ಹಾಸ್ಟೆಲ್ ಸಿಬ್ಬಂದಿ ವಿಡಿಯೊ ಚಿತ್ರೀಕರಿಸಿದ್ದಾರೆ ಎಂದು ಉತ್ತರ ಪ್ರದೇಶದ ಕಾನ್ಪುರದ (Kanpur) ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ದೂರು ನೀಡಿದರೂ ಕ್ರಮ ಕೈಗೊಳ್ಳದ ಆರೋಪದ ಮೇಲೆ ಬಾಲಕಿಯರ ಗುಂಪು ಸ್ಥಳೀಯ ಪೊಲೀಸ್ ಠಾಣೆಗೆ ಬಂದು ಪ್ರತಿಭಟನೆ ನಡೆಸಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ವಾರಗಳ ಹಿಂದೆ ಚಂಡೀಗಢ ವಿಶ್ವವಿದ್ಯಾಲಯದಲ್ಲಿ (Chandigarh University controversy) ಇದೇ  ರೀತಿಯ ಪ್ರಕರಣ ನಡೆದಿತ್ತು. ವಿದ್ಯಾರ್ಥಿನಿಯರ  ಹಾಸ್ಟೆಲ್‌ನಿಂದ ವಿಡಿಯೊ ಸೋರಿಕೆಯಾಗಿದ್ದನ್ನು ಖಂಡಿಸಿ  ವಿದ್ಯಾರ್ಥಿಗಳು ಭಾರೀ ಪ್ರತಿಭಟನೆ ನಡೆಸಿದ್ದರು. ಕಾನ್ಪುರದ ಖಾಸಗಿ ಹಾಸ್ಟೆಲ್‌ನಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ವಿದ್ಯಾರ್ಥಿನಿಯರು ಅಶ್ಲೀಲ ವಿಡಿಯೊ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಆರೋಪಿಯನ್ನು  ಬಂಧಿಸಲಾಗಿದೆ. ಕಾನ್ಪುರದ ತುಳಸಿ ನಗರ ಪ್ರದೇಶದಲ್ಲಿ ವೈದ್ಯಕೀಯ ಆಕಾಂಕ್ಷಿಗಳು ತಂಗಿರುವ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ.  ಆರೋಪಿ ಹುಡುಗಿಯರು ಸ್ನಾನ ಮಾಡುತ್ತಿರುವ ವಿಡಿಯೊ ಶೂಟ್ ಮಾಡಿದ್ದು, ವಿದ್ಯಾರ್ಥಿನಿಯರು ಪೊಲೀಸರಿಗೆ ದೂರು ನೀಡಿದ್ದಾರೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೂರಿನ ಪ್ರಕಾರ, ಹಾಸ್ಟೆಲ್ ಸಿಬ್ಬಂದಿ ಹಾಸ್ಟೆಲ್‌ನಲ್ಲಿರುವ ಹುಡುಗಿಯರ ಹಲವಾರು ಅಶ್ಲೀಲ ವೀಡಿಯೊಗಳನ್ನು ಮಾಡಿದ್ದಾನೆ. ಗುರುವಾರ ಈತ  ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದುದನ್ನು ನೋಡಿದ ಬಾಲಕಿಯೊಬ್ಬಳು ಆತನ ಫೋನ್ ಕಸಿದುಕೊಂಡಿದ್ದಳು. ಇದರಲ್ಲಿ ಹಲವು  ವಿಡಿಯೊಗಳು ಇರುವುದಾಗಿ ಕಂಡುಕೊಂಡ ವಿದ್ಯಾರ್ಥಿನಿಯರು  ಸಮೀಪದ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.

ಈ ಹಾಸ್ಟೆಲ್ ಉತ್ತರ ಪ್ರದೇಶದ ಜಿಲ್ಲೆಯೊಂದರಲ್ಲಿ ಹೆಚ್ಚುವರಿ ಎಸ್‌ಪಿಯಾಗಿ ನೇಮಕಗೊಂಡ ಪೊಲೀಸ್ ಅಧಿಕಾರಿಯ ಒಡೆತನದಲ್ಲಿದೆ. ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದು ವೈದ್ಯಕೀಯ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಾರೆ.

ಬಾಲಕಿಯರಿಂದ ದೂರು ಸ್ವೀಕರಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಎಸಿಪಿ ಕಲ್ಯಾಣಪುರ ದಿನೇಶ್ ಶುಕ್ಲಾ ಇಂಡಿಯಾ ಟುಡೇಗೆ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​