AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು

ಉತ್ತರ ಪ್ರದೇಶದ ಕಾನ್ಪುರದಲ್ಲಿ ದೇವಾಲಯದ ಅರ್ಚಕರೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಮಾಂಸಾಹಾರ ಸೇವನೆಯ ವೈರಲ್ ಫೋಟೋದಿಂದ ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಆರೋಪಿಸಲಾಗಿದೆ. ಅರ್ಚಕರು ಇದು ಎಡಿಟ್ ಮಾಡಿದ ಫೋಟೋ, ತಮ್ಮನ್ನು ಹೊರಹಾಕುವ ಸಂಚು ಎಂದಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಅರ್ಚಕರನ್ನು ರಕ್ಷಿಸಿದ್ದಾರೆ, ಈ ಘಟನೆ ಕಾನ್ಪುರದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಅರ್ಚಕ ಮಾಂಸ ತಿನ್ನುವ ಫೋಟೋ ವೈರಲ್​: ದೇವಾಲಯದಿಂದ ಹೊರ ಎಳೆದು ಥಳಿಸಿದ ಗುಂಪು
ವಿಡಿಯೋ
ಅಕ್ಷಯ್​ ಪಲ್ಲಮಜಲು​​
|

Updated on: Mar 09, 2026 | 5:38 PM

Share

ಕಾನ್ಪುರ, ಮಾ.9: ಉತ್ತರ ಪ್ರದೇಶದ ಕಾನ್ಪುರದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ದೇವಾಲಯದ ಅರ್ಚಕರೊಬ್ಬರನ್ನು ಜನರ ಗುಂಪು ಮನಬಂದಂತೆ ಥಳಿಸಿರುವ ಘಟನೆ ಭಾನುವಾರ ತಡರಾತ್ರಿ ಸಂಭವಿಸಿದೆ. ಹೋಟೆಲ್‌ವೊಂದರಲ್ಲಿ ಅರ್ಚಕರು ಮಾಂಸಾಹಾರ ಸೇವಿಸುತ್ತಿದ್ದಾರೆ ಎನ್ನಲಾದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಹಿಂಸಾಚಾರ ನಡೆದಿದೆ.

ಕಾನ್ಪುರದ ಭೂತೇಶ್ವರ ದೇವಾಲಯದ ಅರ್ಚಕ ಪ್ರಶಾಂತ್ ಗಿರಿ  ಮೇಲೆ ಸುಮಾರು 50 ರಿಂದ 60 ಜನರ ಗುಂಪೊಂದು ದಾಳಿ ನಡೆಸಿದೆ. ಅರ್ಚಕರನ್ನು ಅವರ ಕೊಠಡಿಯಿಂದ ಹೊರಗೆ ಎಳೆದುಕೊಂಡು ಬಂದು ರಸ್ತೆಯಲ್ಲಿ ಧರಧರನೆ ಎಳೆದಾಡಿ ಹಿಗ್ಗಾಮುಗ್ಗಾ ಥಳಿಸಲಾಗಿದೆ.

ಇಲ್ಲಿದೆ ನೋಡಿ ವಿಡಿಯೋ:

ಈ ವೇಳೆ ದೇವಾಲಯದಲ್ಲಿದ್ದ ಕೆಲವು ಮಹಿಳೆಯರು ಅರ್ಚಕರನ್ನು ಕಾಪಾಡಲು ಮುಂದಾದರು. ಅರ್ಚಕರ ಸುತ್ತಲೂ ಕುಳಿತು ಗುರಾಣಿಯಂತೆ ರಕ್ಷಣೆ ನೀಡಲು ಪ್ರಯತ್ನಿಸಿದರು. ಆದರೆ, ಉದ್ರಿಕ್ತ ಗುಂಪು ಅರ್ಚಕರನ್ನು ಉಳಿಸಲು ಬಂದ ಮಹಿಳೆಯರ ಮೇಲೆ ಕೂಡ ಹಲ್ಲೆ ನಡೆಸಿ, ಅವರನ್ನು ದೂಡಿ ಹಾಕಿ ಅರ್ಚಕನಿಗೆ ಹೊಡೆದಿದ್ದಾರೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಗುಂಪಿನಿಂದ ಅರ್ಚಕರನ್ನು ರಕ್ಷಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಶಾಲೆಯಲ್ಲಿ ಅಡುಗೆ ಮಾಡುವ ಮಹಿಳಾ ಕುಕ್​​ ಜತೆ ಹೆಡ್​​ ಮಾಸ್ಟರ್​ ಕುಚ್ ಕುಚ್: ಗ್ರಾಮಸ್ಥರಿಂದ ಬಿತ್ತು ಗೂಸ

ಗಾಯಗೊಂಡಿರುವ ಅರ್ಚಕರು ಈ ಬಗ್ಗೆ ದೂರು ನೀಡಿದ್ದು, “ತನ್ನನ್ನು ದೇವಾಲಯದಿಂದ ಹೊರಹಾಕಲು ನಡೆದ ಪಿತೂರಿ ಇದಾಗಿದೆ. ರೆಸ್ಟೋರೆಂಟ್‌ವೊಂದರಲ್ಲಿ ನಾನು ಕುಳಿತಿದ್ದ ಹಳೆಯ ಫೋಟೋವನ್ನು ಎಡಿಟ್ ಮಾಡಿ, ಅಲ್ಲಿ ಮಾಂಸಾಹಾರ ಇರುವಂತೆ ಬಿಂಬಿಸಲಾಗಿದೆ” ಎಂದು ಆರೋಪಿಸಿದ್ದಾರೆ. ಪೊಲೀಸರು ವೈರಲ್ ವಿಡಿಯೋ ಆಧರಿಸಿ ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
‘ಬಾಸ್’ ಚಿತ್ರದಲ್ಲಿ ರೇಣುಕಾಸ್ವಾಮಿ ಸಾವಿನ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ಮೈದಾನದಲ್ಲಿ ಪತ್ನಿಗೆ ಲಿಪ್‌ಲಾಕ್ ಮಾಡಿದ ಕ್ರಿಕೆಟಿಗ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಸಿಗರೇಟ್‌ಗೆ ಗಾಂಜಾ ತುಂಬಿಸಿ ನಶೆ ಏರಿಸುತ್ತಿದ್ದ ಇಬ್ಬರು ಖಾಕಿ ಬಲೆಗೆ
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ಚಿನ್ನ ಕದ್ದ ಕ್ಯಾಬ್​​ ಚಾಲಕ ಲಾಕ್: ದರೋಡೆ ನಡೆಸಿದ ರೀತಿಯೇ ಇಂಟರೆಸ್ಟಿಂಗ್​!
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!
ಇರಾನ್ ಯುದ್ಧದಿಂದ ಜಗತ್ತಿಗೇ ಮಾರಕ ಕಾಯಿಲೆ ಭೀತಿ, ಭಾರತಕ್ಕೂ ಇದೆ ಆತಂಕ!
RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಸತೀಶ್​​ ಜಾರಕಿಹೊಳಿ ಅಚ್ಚರಿಯ ಹೇಳಿಕೆ
RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಸತೀಶ್​​ ಜಾರಕಿಹೊಳಿ ಅಚ್ಚರಿಯ ಹೇಳಿಕೆ
ಸೊಂಡಿಲ ಬಳಸಿ ಮರದಿಂದ ಹಲಸಿನ ಕಾಯಿ ಕಿತ್ತ ಆನೆ
ಸೊಂಡಿಲ ಬಳಸಿ ಮರದಿಂದ ಹಲಸಿನ ಕಾಯಿ ಕಿತ್ತ ಆನೆ
ಸಾಕು ನಾಯಿಗೆ ಅದ್ದೂರಿಯಾಗಿ ಸೀಮಂತ: ಉಡಿ ತುಂಬಿದ ಮಹಿಳೆಯರು
ಸಾಕು ನಾಯಿಗೆ ಅದ್ದೂರಿಯಾಗಿ ಸೀಮಂತ: ಉಡಿ ತುಂಬಿದ ಮಹಿಳೆಯರು
ಸದ್ದಡಗಿಸಲು ಬಂದು ಸದ್ದಿಲ್ಲದೇ ನಿಂತ ಮಿಚೆಲ್ ಸ್ಯಾಂಟ್ನರ್..!
ಸದ್ದಡಗಿಸಲು ಬಂದು ಸದ್ದಿಲ್ಲದೇ ನಿಂತ ಮಿಚೆಲ್ ಸ್ಯಾಂಟ್ನರ್..!