AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kapil Sibal ಕಾಂಗ್ರೆಸ್ ಪಕ್ಷ ತೊರೆದ ಕಪಿಲ್ ಸಿಬಲ್, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ

ಸಂಸತ್​​ನಲ್ಲಿ ಸ್ವತಂತ್ರ ದನಿಯ ಅಗತ್ಯವಿದೆ. ಸ್ವತಂತ್ರವಾಗಿ ದನಿಯೆತ್ತಿದರೆ ಮಾತ್ರ ಇದು ರಾಜಕೀಯ ಪಕ್ಷದ್ದು ಅಲ್ಲ ಎಂದು ಜನರು ನಂಬುತ್ತಾರೆ ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ಸಿಬಲ್ ಹೇಳಿದ್ದಾರೆ.

Kapil Sibal ಕಾಂಗ್ರೆಸ್ ಪಕ್ಷ ತೊರೆದ ಕಪಿಲ್ ಸಿಬಲ್, ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ರಾಜ್ಯಸಭೆಗೆ ನಾಮಪತ್ರ ಸಲ್ಲಿಕೆ
ಕಪಿಲ್ ಸಿಬಲ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:May 25, 2022 | 1:48 PM

Share

ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್ (Kapil Sibal) ಉತ್ತರ ಪ್ರದೇಶದಿಂದ (Uttar Pradesh) ರಾಜ್ಯಸಭೆಗೆ ಸಮಾಜವಾದಿ ಪಕ್ಷದ (Samajwadi Party) ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಕಪಿಲ್ ಸಿಬಲ್ ‘ನಾನು ಮೇ 16 ರಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದೆ’ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಂಸತ್​​ನಲ್ಲಿ ಸ್ವತಂತ್ರ ದನಿಯ ಅಗತ್ಯವಿದೆ. ಸ್ವತಂತ್ರವಾಗಿ ದನಿಯೆತ್ತಿದರೆ ಮಾತ್ರ ಇದು ರಾಜಕೀಯ ಪಕ್ಷದ್ದು ಅಲ್ಲ ಎಂದು ಜನರು ನಂಬುತ್ತಾರೆ ಎಂದು ಸುದ್ದಿಗಾರರರೊಂದಿಗೆ ಮಾತನಾಡಿದ ಸಿಬಲ್ ಹೇಳಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕರಲ್ಲಿ ಒಬ್ಬರಾದ ಸಿಬಲ್ ಕಾಂಗ್ರೆಸ್ ಪಕ್ಷದ ನಾಯಕತ್ವ ಮತ್ತು ಸಂಘಟನೆಯನ್ನು ಟೀಕಿಸಿದ್ದ ಬಂಡಾಯಗಾರರ ಗುಂಪಾದ ಜಿ-23ಯ ಸದಸ್ಯರಾಗಿದ್ದಾರೆ. ಇತ್ತೀಚಿನ ವಾರಗಳಲ್ಲಿ ಗಾಂಧಿ ನೇತೃತ್ವದ ಬಗ್ಗೆ ಕಪಿಲ್ ಟೀಕಿಸಿದ್ದರು. ಇತ್ತೀಚೆಗೆ ಅವರು ಲಖನೌದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದರು. ಸುಪ್ರೀಂಕೋರ್ಟ್ ನಲ್ಲಿ ಸಮಾಜವಾದಿ ಪಕ್ಷದ ಆಜಂ ಖಾನ್ ಅವರ ಪ್ರಕರಣವನ್ನೂ ಇದೇ ಕಪಿಲ್ ಸಿಬಲ್ ವಾದಿಸಿದ್ದರು. 2 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ ಆಜಂ ಖಾನ್ ಗೆ ಕೆಲವು ದಿನಗಳ ಹಿಂದೆಯಷ್ಟೇ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಮುಂದಿನ ತಿಂಗಳು ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಿಂದ 11 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

ಹಿರಿಯ ವಕೀಲರಾಗಿ ಸಿಬಲ್ ಅವರ ಯಾದವ್ ಕುಟುಂಬಕ್ಕೆ ತುಂಬಾ ಆಪ್ತರಾಗಿದ್ದಾರೆ. ಅಖಿಲೇಶ್ ಯಾದವ್ ಅವರಿಗೆ ಪಕ್ಷದ ಚಿಹ್ನೆಯಾಗಿ ಸೈಕಲ್ ಚಿಹ್ನೆ ಬೇಕು ಎಂದು 2017 ಜನವರಿಯಲ್ಲಿ ಸಿಬಲ್ ವಾದಿಸಿದ್ದರು. ಇದರ ಫಲವಾಗಿ ಚುನಾವಣಾ ಆಯೋಗ ಅಖಿಲೇಶ್ ಗೆ ಸೈಕಲ್ ಚಿಹ್ನೆ ನೀಡಿತ್ತು.

ಸಮಾಜವಾದಿ ಪಕ್ಷದ ಬೆಂಬಲದೊಂದಿಗೆ ಕಪಿಲ್ ಸಿಬಲ್ ಈಗ ತಾನೇ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ. ಅವರು ಖ್ಯಾತ ವಕೀಲರು ಮತ್ತು ರಾಜಕೀಯ ಧುರೀಣ. ಅವರು ಪ್ರಧಾನ ಸಮಸ್ಯೆಗಳನ್ನು ಲೋಕಸಭೆಯಲ್ಲಿ ಮತ್ತು ರಾಜ್ಯಸಭೆಯಲ್ಲಿ ಮುಂದಿಡುತ್ತಿದ್ದರು. ದೇಶವು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದೆ. ಅವರು ಇದನ್ನೆಲ್ಲ ರಾಜ್ಯ ಸಭೆಯಲ್ಲಿ ಪ್ರಸ್ತಾಪಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 1:04 pm, Wed, 25 May 22

Follow Us
TV9 Web
TV9 Web

TV9 Kannada

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್