AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಗಿಲ್​ ವೀರರೊಂದಿಗೆ ಪ್ರಧಾನಿ ಮೋದಿ, ಅಂದಿನ ವಿಜಯ ಗಾಥೆಯನ್ನು ನೆನೆದ ಮೋದಿ ಆರ್ಕೈವ್​

ಇಂದು ಕಾರ್ಗಿಲ್ ವಿಜಯ್ ದಿವಸ್, ಭಾರತದ ಇತಿಹಾಸದಲ್ಲಿ ಜುಲೈ 26 ಎಂಬುದು ಎಂದೂ ಮರೆಯಲಾರದ ದಿನ. ಪಾಕಿಸ್ತಾನಿ ಪಡೆಗಳು ಭಾರತದ ಭೂ ಪ್ರದೇಶಕ್ಕೆ ನುಸುಳಿದ್ದ ಸಂದರ್ಭ. ಭಾರತವು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತ್ತು. ಭಾರತೀಯ ಸೇನೆಯು ಭೀಕರ ಯುದ್ಧವನ್ನು ನಡೆಸಿತು, ಪ್ರತಿ ಇಂಚು ಭೂಮಿಯನ್ನೂ ಪುನಃ ಪಡೆದುಕೊಂಡಿತು. ನಮ್ಮ ರಾಷ್ಟ್ರದ ಸಮಗ್ರತೆಯನ್ನು ಭದ್ರಪಡೆಸಿತು.

ಕಾರ್ಗಿಲ್​ ವೀರರೊಂದಿಗೆ ಪ್ರಧಾನಿ ಮೋದಿ, ಅಂದಿನ ವಿಜಯ ಗಾಥೆಯನ್ನು ನೆನೆದ ಮೋದಿ ಆರ್ಕೈವ್​
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jul 26, 2024 | 11:23 AM

Share

ಭಾರತದ ಇತಿಹಾಸದಲ್ಲಿ ಜುಲೈ 26 ಎಂಬುದು ಎಂದೂ ಮರೆಯಲಾರದ ದಿನ. ಪಾಕಿಸ್ತಾನಿ ಪಡೆಗಳು ಭಾರತದ ಭೂ ಪ್ರದೇಶಕ್ಕೆ ನುಸುಳಿದ್ದ ಸಂದರ್ಭ. ಭಾರತವು ಆಪರೇಷನ್ ವಿಜಯ್ ಅನ್ನು ಪ್ರಾರಂಭಿಸಿತ್ತು. ಭಾರತೀಯ ಸೇನೆಯು ಭೀಕರ ಯುದ್ಧವನ್ನು ನಡೆಸಿತು, ಪ್ರತಿ ಇಂಚು ಭೂಮಿಯನ್ನೂ ಪುನಃ ಪಡೆದುಕೊಂಡಿತು. ನಮ್ಮ ರಾಷ್ಟ್ರದ ಸಮಗ್ರತೆಯನ್ನು ಭದ್ರಪಡಿಸಿತು. ಇದನ್ನು ಮೋದಿ ಆರ್ಕೈವ್​ ನೆನಪಿಸಿಕೊಂಡಿದೆ.

ಅಂತಹ ಒಂದು ಯುದ್ಧ ಭೂಮಿ ಟೈಗರ್ ಹಿಲ್ ಆಗಿತ್ತು, ಇದು ಯುದ್ಧದ ಅತ್ಯಂತ ತೀವ್ರವಾದ ಹೋರಾಟವನ್ನು ಕಂಡ ಒಂದು ಕಾರ್ಯತಂತ್ರದ ಪಾಯಿಂಟ್ ಕೂಡಾ ಆಗಿತ್ತು. ಜುಲೈ 4, 1999ರಂದು ಪಟ್ಟುಬಿಡದ ಮತ್ತು ರಕ್ತಸಿಕ್ತ ಯುದ್ಧದ ನಂತರ ಭಾರತೀಯ ಪಡೆಗಳು ಟೈಗರ್ ಹಿಲ್​ನಲ್ಲಿ ತ್ರಿವರ್ಣ ಧ್ವಜ ಹಾರಿಸಿದವು.

ಈ ವಿಜಯವು ಜುಲೈ 26, 1999 ರಂದು ಭಾರತೀಯ ಭೂಪ್ರದೇಶದಿಂದ ಒಳನುಗ್ಗುವ ಪಾಕಿಸ್ತಾನಿಗಳನ್ನು ಅಂತಿಮವಾಗಿ ಹೊರಗಟ್ಟಲಾಯಿತು ಎಂದು ಮೋದಿ ಆರ್ಕೈವ್​ನಲ್ಲಿ ಬರೆಯಲಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ, ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ.

ಜುಲೈ 26, 1999 ರಂದು, ಪಾಕಿಸ್ತಾನಿ ಸೇನೆಯನ್ನು ಓಡಿಸುವಾಗ ಭಾರತೀಯ ಸೇನೆಯು ಕಾರ್ಗಿಲ್‌ನಲ್ಲಿ ವಿಜಯದ ತ್ರಿವರ್ಣ ಧ್ವಜವನ್ನು ಹಾರಿಸಿತು. ಅಂದಿನಿಂದ, ಪ್ರತಿ ವರ್ಷ ಜುಲೈ 26 ರಂದು ಭಾರತವು “ಕಾರ್ಗಿಲ್ ವಿಜಯ್ ದಿವಸ್” ಅನ್ನು ಆಚರಿಸುತ್ತದೆ. ಈ ವಿಶೇಷ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಲೇಹ್ ಹೆದ್ದಾರಿಯಲ್ಲಿರುವ ದ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮತ್ತಷ್ಟು ಓದಿ: Kargil Vijay Diwas: ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಇಂದಿಗೂ ಸಹ, ಕಾರ್ಗಿಲ್ ಯುದ್ಧ ಸ್ಮಾರಕವನ್ನು ನೋಡಲು ಪ್ರವಾಸಿಗರು ದೂರದೂರುಗಳಿಂದ ಆಗಮಿಸುತ್ತಾರೆ ಮತ್ತು ನಮ್ಮ ದೇಶದ ವೀರರು ಹೇಗೆ ಶೌರ್ಯವನ್ನು ಪ್ರದರ್ಶಿಸಿ ಹುತಾತ್ಮರಾದರು. ಇಲ್ಲಿ ಯಾರೇ ಬಂದರೂ ಅವರ ಕಣ್ಣುಗಳು ತೇವವಾಗುತ್ತವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ