AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪ್ರಿಯರಿಗೆ ಗುಡ್​ ನ್ಯೂಸ್​, 10 ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಮದ್ಯ

ಕರ್ನಾಟಕ ಸೇರಿದಂತೆ ಈ ಆರು ರಾಜ್ಯಗಳಲ್ಲಿ ಶೀಘ್ರವೇ ಸ್ವಿಗ್ಗಿ, ಬಿಗ್​ ಬಾಸ್ಕೆಟ್ ಹಾಗೂ ಜೊಮ್ಯಾಟೊ ಮೂಲಕ ಮದ್ಯ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮದ್ಯಪ್ರಿಯರಿಗೆ ಗುಡ್​ ನ್ಯೂಸ್​, 10 ನಿಮಿಷಗಳಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಮದ್ಯ
ಸ್ವಿಗ್ಗಿ, ಜೊಮ್ಯಾಟೊ
ನಯನಾ ರಾಜೀವ್
|

Updated on:Jul 16, 2024 | 10:43 AM

Share

ಮದ್ಯ ಪ್ರಿಯರಿಗೊಂದು ಶುಭ ಸುದ್ದಿ ಇದೆ, ನೀವು ಆನ್​ಲೈನ್​ನಲ್ಲಿ ಆಹಾರವನ್ನು ಆರ್ಡರ್​ ಮಾಡಿ ಮನೆಗೆ ತರಿಸುವಂತೆಯೇ ಇನ್ನುಮುಂದೆ ನಿಮ್ಮ ಮನೆಗೆ ಬಾಗಿಲಿಗೆ ಮದ್ಯವೂ ಸರಬರಾಜಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕರ್ನಾಟಕ, ದೆಹಲಿ, ಹರ್ಯಾಣ, ಪಂಜಾಬ್, ತಮಿಳುನಾಡು, ಗೋವಾ ಹಾಗೂ ಕೇರಳದಲ್ಲಿ ಇದನ್ನು ಮೊದಲು ಜಾರಿಗೆ ತರಲಾಗುತ್ತಿದೆ. ಸ್ವಿಗ್ಗಿ, ಬಿಗ್​ಬಾಸ್ಕೆಟ್, ಜೊಮ್ಯಾಟೊ ಮೂಲಕ ಮದ್ಯ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.

2020ರಲ್ಲೇ ಈ ರೀತಿಯ ಪ್ರಸ್ತಾವನೆ ಇತ್ತು, ಮೊದಲ ಬಾರಿಗೆ ಜಾರ್ಖಂಡ್​ನಲ್ಲಿ ಪ್ರಾರಂಭಿಸಲಾಗಿತ್ತು, ಇತರೆ ರಾಜ್ಯಗಳ ಜತೆಯೂ ಮಾತುಕತೆ ನಡೆದಿತ್ತು. ಲಿಕ್ಕರ್ ಆರ್ಡರ್ ಮಾಡಲು ಗ್ರಾಹಕರು ವಯಸ್ಸಿನ ದಾಖಲೆ ಪತ್ರಗಳನ್ನು ಸಲ್ಲಿಸಬೇಕಾಗುತ್ತದೆ.

10 ನಿಮಿಷಗಳಲ್ಲೇ ಮದ್ಯ ನಿಮ್ಮ ಮನೆಯಲ್ಲಿ ವಾಸ್ತವವಾಗಿ, ಈ ರಾಜ್ಯಗಳು ಪ್ರಾಯೋಗಿಕ ಕಾರ್ಯಕ್ರಮದ ಅಡಿಯಲ್ಲಿ ಸ್ವಿಗ್ಗಿ, ಜೊಮ್ಯಾಟೊ ಹಾಗೂ ಬಿಗ್​ ಬಾಸ್ಕೆಟ್​ನಂತಹ ಇ-ಕಾಮರ್ಸ್​ ಪ್ಲಾಟ್​ಫಾರ್ಮ್​ಗಳ ಮೂಲಕ ಹೋಂ ಡೆಲಿವರಿ ಮಾಡಲು ಆಲೋಚಿಸಿದೆ.

ಮತ್ತಷ್ಟು ಓದಿ: ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಮದ್ಯ ಸೇವಿಸಿ ಸಮುದ್ರಕ್ಕಿಳಿದ ಜನ, ವ್ಹೀಲಿಂಗ್ ಮಾಡಿದ ಐವರ ಬಂಧನ

ಎಕನಾಮಿಕ್ಸ್ ಟೈಮ್ಸ್ ವರದಿ ಪ್ರಕಾರ, ಈ ರಾಜ್ಯಗಳಲ್ಲಿ ಶೀಘ್ರವೇ ಮದ್ಯ ಪ್ರಿಯರಿಗೆ ಈ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಆನ್​ಲೈನ್​ನಲ್ಲಿ ಮದ್ಯ ಕೊಳ್ಳುವವರು ತಮ್ಮ ವಯಸ್ಸನ್ನು ನಮೂದಿಸಲೇಬೇಕು. ಹೊಸ ನಿಯಮಗಳಡಿಯಲ್ಲಿ ದೇಶೀಯ ಮತ್ತು ವಿದೇಶಿ ಮದ್ಯವನ್ನು ಹೋಂ ಡೆಲಿವರಿ ಮಾಡಲು ಸಾಧ್ಯವಾಗುತ್ತದೆ.

ಇದಕ್ಕಾಗಿ ಮೊಬೈಲ್ ಅಪ್ಲಿಕೇಷನ್ ಅಥವಾ ಆನ್​ಲೈನ್ ವೆಬ್​ ಪೋರ್ಟಲ್ ತೆರೆಯಲಾಗುತ್ತದೆ. ಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮದ್ಯವನ್ನು ಮನೆಗೆ ತಲುಪಿಸಲು ಅನುಮತಿ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಾರಾಷ್ಟ್ರ, ಜಾರ್ಖಂಡ್, ಛತ್ತೀಸ್‌ಗಢ ಮತ್ತು ಅಸ್ಸಾಂನಲ್ಲಿ ಕೋವಿಡ್ -19 ಲಾಕ್‌ಡೌನ್‌ಗಳ ಸಮಯದಲ್ಲಿ ಮದ್ಯ ವಿತರಣೆಯನ್ನು ತಾತ್ಕಾಲಿಕವಾಗಿ ಅನುಮತಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:39 am, Tue, 16 July 24

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!