AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ

ಕರ್ನಾಟಕ ವಿಧಾನಸಭಾ  ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ.

Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ
ಪ್ರಮೋದ್ ಸಾವಂತ್
ನಯನಾ ರಾಜೀವ್
|

Updated on: May 09, 2023 | 9:23 AM

Share

ಕರ್ನಾಟಕ ವಿಧಾನಸಭಾ  ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗಲಿದೆ. ಈ ನಿರ್ಧಾರದಿಂದ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ತೆರಳಿ ಮತದಾನ ಮಾಡಲು ನೆರವಾಗಲಿದೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಗೋವಾ ಸರ್ಕಾರ ರಜೆ ಘೋಷಿಸಿದೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ಮೂರ್ಖ ನಿರ್ಧಾರ ಎಂದು ಕರೆದಿದ್ದಾರೆ.

ಈ ರಜೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಬಹುದು ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘ ಹೇಳಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಮೇ 10 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸೋಮವಾರ ಅಧಿಸೂಚನೆಯನ್ನು ಹೊರಡಿಸಿತು.

ಮತ್ತಷ್ಟು ಓದಿ:ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ, ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್

ಮೇ 10 ರಂದು ಎಲ್ಲಾ ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗೋವಾ ಫಾರ್ವರ್ಡ್ ಪಾರ್ಟಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ.

ಗೋವಾ ರಾಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್, ರಾಜ್ಯ ಸರ್ಕಾರದ ಈ ನಿರ್ಧಾರ ಮೂರ್ಖತನ ಎಂದು ಬಣ್ಣಿಸಿದ್ದಾರೆ. ಇದಲ್ಲದೆ, ಆಮ್ ಆದ್ಮಿ ಪಕ್ಷದ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ರಾಜ್ಯ ಸರ್ಕಾರವನ್ನು ಟೀಕಿಸಿದರು ಮತ್ತು ಈ ನಿರ್ಧಾರವನ್ನು ಮೂರ್ಖ ನಿರ್ಧಾರ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!