AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ

ಕರ್ನಾಟಕ ವಿಧಾನಸಭಾ  ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ.

Karnataka Assembly Elections 2023: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಮೇ10 ರಂದು ವೇತನ ಸಹಿತ ರಜೆ ಘೋಷಿಸಿದ ಗೋವಾ ಸರ್ಕಾರ
ಪ್ರಮೋದ್ ಸಾವಂತ್
ನಯನಾ ರಾಜೀವ್
|

Updated on: May 09, 2023 | 9:23 AM

Share

ಕರ್ನಾಟಕ ವಿಧಾನಸಭಾ  ಚುನಾವಣೆ(Karnataka Assembly Elections) ಯ ದೃಷ್ಟಿಯಿಂದ ಗೋವಾ ಸರ್ಕಾರವು ಮೇ 10 ರಂದು ವೇತನ ಸಹಿತ ರಜೆ ಘೋಷಿಸಿದೆ. ಇದು ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಎಲ್ಲಾ ಖಾಸಗಿ ಕಂಪನಿಗಳಿಗೂ ಅನ್ವಯವಾಗಲಿದೆ. ಈ ನಿರ್ಧಾರದಿಂದ ಗೋವಾದಲ್ಲಿರುವ ಕನ್ನಡಿಗರು ರಾಜ್ಯಕ್ಕೆ ತೆರಳಿ ಮತದಾನ ಮಾಡಲು ನೆರವಾಗಲಿದೆ. ಕರ್ನಾಟಕದಲ್ಲಿ ಮೇ 10 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಗೋವಾ ಸರ್ಕಾರ ರಜೆ ಘೋಷಿಸಿದೆ. ಗೋವಾ ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ಮೂರ್ಖ ನಿರ್ಧಾರ ಎಂದು ಕರೆದಿದ್ದಾರೆ.

ಈ ರಜೆಯ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕಾಗಬಹುದು ಎಂದು ಗೋವಾ ರಾಜ್ಯ ಕೈಗಾರಿಕೆಗಳ ಸಂಘ ಹೇಳಿದೆ. ವಾಸ್ತವವಾಗಿ, ಗೋವಾ ಸರ್ಕಾರವು ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾರಣ ಮೇ 10 ರಂದು ವೇತನ ಸಹಿತ ರಜೆಯನ್ನು ಘೋಷಿಸಿ ಸೋಮವಾರ ಅಧಿಸೂಚನೆಯನ್ನು ಹೊರಡಿಸಿತು.

ಮತ್ತಷ್ಟು ಓದಿ:ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ, ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್

ಮೇ 10 ರಂದು ಎಲ್ಲಾ ಸರ್ಕಾರಿ ಮತ್ತು ಕೈಗಾರಿಕಾ ನೌಕರರು ಸೇರಿದಂತೆ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ ಘೋಷಿಸಲಾಗಿದೆ ಎಂದು ಈ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಇದೇ ವೇಳೆ ಗೋವಾ ಫಾರ್ವರ್ಡ್ ಪಾರ್ಟಿ ಟ್ವೀಟ್ ಮಾಡುವ ಮೂಲಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದೆ.

ಗೋವಾ ರಾಜ್ಯ ಕೈಗಾರಿಕಾ ಸಂಘದ ಅಧ್ಯಕ್ಷ ದಾಮೋದರ್ ಕೋಚ್ಕರ್, ರಾಜ್ಯ ಸರ್ಕಾರದ ಈ ನಿರ್ಧಾರ ಮೂರ್ಖತನ ಎಂದು ಬಣ್ಣಿಸಿದ್ದಾರೆ. ಇದಲ್ಲದೆ, ಆಮ್ ಆದ್ಮಿ ಪಕ್ಷದ ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ರಾಜ್ಯ ಸರ್ಕಾರವನ್ನು ಟೀಕಿಸಿದರು ಮತ್ತು ಈ ನಿರ್ಧಾರವನ್ನು ಮೂರ್ಖ ನಿರ್ಧಾರ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್