AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣದಲ್ಲಿ ಹಿಜಾಬ್​ ಅಷ್ಟೊಂದು ಮುಖ್ಯವಾಗಿದ್ದರೆ, ರಾಹುಲ್​ ಗಾಂಧಿಯೇ ಅದನ್ನು ಕಡ್ಡಾಯಗೊಳಿಸಬಹುದಿತ್ತಲ್ಲ?!-ಬಿಜೆಪಿ ತಿರುಗೇಟು

ಕಾಂಗ್ರೆಸ್​ನ ಸಹ ಮಾಲೀಕರಾದ ರಾಹುಲ್​ ಗಾಂಧಿಯವರು ಶಿಕ್ಷಣದಲ್ಲೂ ಕೋಮುವಾದ ಸೃಷ್ಟಿಸುವ ಮೂಲಕ, ಈ ದೇಶದ ಭವಿಷ್ಯಕ್ಕೆ ತಾವು ಮಾರಕ ಎಂಬುದನ್ನು ತೋರಿಸುತ್ತಿದ್ದಾರೆ ಎಂದು ಕರ್ನಾಟಕ ಬಿಜೆಪಿ ಹೇಳಿದೆ.

ಶಿಕ್ಷಣದಲ್ಲಿ ಹಿಜಾಬ್​ ಅಷ್ಟೊಂದು ಮುಖ್ಯವಾಗಿದ್ದರೆ, ರಾಹುಲ್​ ಗಾಂಧಿಯೇ ಅದನ್ನು ಕಡ್ಡಾಯಗೊಳಿಸಬಹುದಿತ್ತಲ್ಲ?!-ಬಿಜೆಪಿ ತಿರುಗೇಟು
ಹಿಜಾಬ್​ ಧರಿಸಿ ಕುಳಿತಿರುವ ವಿದ್ಯಾರ್ಥಿನಿಯರು
TV9 Web
| Edited By: |

Updated on: Feb 05, 2022 | 6:04 PM

Share

ರಾಜ್ಯದ ಕರಾವಳಿ ಜಿಲ್ಲೆ ಉಡುಪಿಯಲ್ಲಿ ಎದ್ದಿರುವ ಜಿಜಾಬ್ (Hijab)​ ವಿವಾದ ರಾಷ್ಟ್ರಮಟ್ಟದಲ್ಲಿ ಭರ್ಜರಿ ಸುದ್ದಿ ಮಾಡುತ್ತಿದೆ. ಈ ಬಗ್ಗೆ ಇಂದು ಟ್ವೀಟ್ ಮಾಡಿದ್ದ ರಾಹುಲ್​ ಗಾಂಧಿ(Rahul Gandhi), ವಿದ್ಯಾರ್ಥಿಗಳ ಶಿಕ್ಷಣದ ದಾರಿಯಲ್ಲಿ ಅವರು ಧರಿಸುವ ಹಿಜಾಬ್​ನ್ನು ಅಡ್ಡ ತರುತ್ತಿರುವುದು ಖೇದಕರ. ಈ ಮೂಲಕ ನಮ್ಮ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನೇ ಲೂಟಿ ಮಾಡಲಾಗುತ್ತಿದೆ. ತಾಯಿ ಸರಸ್ವತಿ ಪ್ರತಿಯೊಬ್ಬರಿಗೂ ಜ್ಞಾನ ನೀಡುತ್ತಾಳೆ. ಯಾರಿಗೂ ಬೇಧಭಾವ ಮಾಡಲಾರಳು ಎಂದು ಹೇಳಿದ್ದರು. ರಾಹುಲ್ ಗಾಂಧಿಯವರ ಈ ಟ್ವೀಟ್​ಗೆ ಕರ್ನಾಟಕ ಬಿಜೆಪಿ ಪ್ರತಿಕ್ರಿಯೆ ನೀಡಿದೆ. ಶಿಕ್ಷಣ ಪಡೆಯಲು ಹಿಜಾಬ್​ ಅಷ್ಟೊಂದು ಅತ್ಯಗತ್ಯವಾಗಿದ್ದರೆ, ನಿಮ್ಮ ಸರ್ಕಾರವಿದ್ದಾಗ ಯಾಕೆ ಅದನ್ನು ಕಡ್ಡಾಯಗೊಳಿಸಲಿಲ್ಲ ಎಂದು ಪ್ರಶ್ನಿಸಿದೆ. ಅಷ್ಟೇ ಅಲ್ಲ, ರಾಹುಲ್​ ಗಾಂಧಿಯವರು ಈಗ ಶಿಕ್ಷಣದಲ್ಲಿ ಕೋಮುವಾದ ಸೃಷ್ಟಿಸುತ್ತಿದ್ದಾರೆ ಎಂದೂ ಆರೋಪಿಸಿದೆ. 

ರಾಹುಲ್​ ಗಾಂಧಿಯವರ ಟ್ವೀಟ್​ನ್ನು ರೀಶೇರ್​ ಮಾಡಿಕೊಂಡಿರುವ ಕರ್ನಾಟಕ ಬಿಜೆಪಿ, ಕಾಂಗ್ರೆಸ್​ನ ಸಹ ಮಾಲೀಕರಾದ ರಾಹುಲ್​ ಗಾಂಧಿಯವರು ಶಿಕ್ಷಣದಲ್ಲೂ ಕೋಮುವಾದ ಸೃಷ್ಟಿಸುವ ಮೂಲಕ, ತಾವು ಈ ದೇಶದ ಭವಿಷ್ಯಕ್ಕೆ ಅತ್ಯಂತ ಅಪಾಯಕಾರಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಷ್ಟಕ್ಕೂ ಶಿಕ್ಷಣದಲ್ಲಿ ಹಿಜಾಬ್​ ಅಷ್ಟೊಂದು ಮಹತ್ವ ಎಂದಾಗಿದ್ದರೆ, ಕಾಂಗ್ರೆಸ್​ ಆಡಳಿತವಿದ್ದಾಗ ರಾಹುಲ್ ಗಾಂಧಿಯವರೇ ಅದನ್ನು ಕಡ್ಡಾಯಗೊಳಿಸಬಹುದಿತ್ತಲ್ಲ? ಎಂದು ಬಿಜೆಪಿ ಟ್ವೀಟ್​​ನಲ್ಲಿ ಪ್ರಶ್ನಿಸಿದೆ.

ಕರ್ನಾಟಕದಲ್ಲಿ ಈ ಹಿಜಾಬ್​ ವಿವಾದ ದಿನೇದಿನೆ ಹೆಚ್ಚುತ್ತಿದೆ. ರಾಜ್ಯದ ರಾಜಕೀಯ ನಾಯಕರು ಪರ-ವಿರೋಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮಧ್ಯೆ ಶುಕ್ರವಾರ ಬಸವರಾಜ ಬೊಮ್ಮಾಯಿ ಸಭೆ ಕೂಡ ನಡೆಸಿದ್ದಾರೆ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ಶಿಕ್ಷಣ ಪಡೆಯಲು ಸಮವಸ್ತ್ರ ಧರಿಸಿ ಬರಬೇಕು.  ನೀವು ಮನಸೋ ಇಚ್ಛೆ ವರ್ತಿಸುತ್ತೀರಿ ಎಂದಾದರೆ ಅದಕ್ಕಾಗಿ ಮದರಸಾ ಇದೆ. ಎಲ್ಲರೂ ಜಾಬ್​ಗಾಗಿ ಕಾಲೇಜಿಗೆ ಹೋಗುತ್ತೀವಿ ಎಂದರೆ, ಇವರು ಹಿಜಾಬ್​ಗಾಗಿ ಹೋಗ್ತೇವೆ ಎನ್ನುತ್ತಾರೆ ಎಂದು ಕಟು ಮಾತುಗಳನ್ನು ಆಡಿದ್ದಾರೆ. ಅಷ್ಟೇ ಅಲ್ಲ, ನಿಮ್ಮಿಷ್ಟದಂತೆ ನಡೆಯುತ್ತೀರಿ ಎಂದಾದರೆ, ನಾವು 1947ರಲ್ಲಿಯೇ ಒಂದು ಪ್ರತ್ಯೇಕ ರಾಷ್ಟ್ರವನ್ನೇ ನೀಡಿದ್ದೇವೆ ಅಲ್ಲಿಗೆ ಹೋಗಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: 6 ಜನರಿಂದ 700 ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ; ಹಿಜಾಬ್ ವಿವಾದದ ಕುರಿತು ಉಡುಪಿ ಜಿಲ್ಲಾಡಳಿತದ ಮೊರೆಹೋದ ವಿದ್ಯಾರ್ಥಿನಿಯರು

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ