ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ. ಮೇ 31 ರವರೆಗೂ ಯಾರೂ ಬರಬೇಡಿ: ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು […]

ಗುಜರಾತ್ ಸೇರಿದಂತೆ ಈ 4 ರಾಜ್ಯಗಳಿಂದ ಯಾರೂ ಬರುವಂತಿಲ್ಲ: ಸಿಎಂ ಯಡಿಯೂರಪ್ಪ
ಸಾಧು ಶ್ರೀನಾಥ್​

Updated on: May 18, 2020 | 8:34 PM

ಬೆಂಗಳೂರು: ಕೊರೊನಾ ಕಾಟದಿಂದಾಗಿ ಕೇಂದ್ರದ ಮಾರ್ಗಸೂಚಿಯಂತೆ 4ನೇ ಹಂತದ ಲಾಕ್‌ಡೌನ್‌ ಜಾರಿಗೊಳಿಸುವ ನಿಟ್ಟಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಮುಖವಾಗಿ ಇತರೆ ಕೆಲ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಅದಕ್ಕೆ ಕಡಿವಾಣ ಹಾಕಲು ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಾಗಿ 4 ರಾಜ್ಯಗಳಿಂದ ಯಾರೂ ಕರ್ನಾಟಕದೊಳಕ್ಕೆ ಬರುವುದು ಬೇಡ ಎಂದಿದ್ದಾರೆ. ಅಕಸ್ಮಾತ್ ಬಂದರೂ ತಪ್ಪದೇ ಕ್ವಾರಂಟೈನ್​ಗೆ ಒಳಪಡಲೇಬೇಕು ಎಂದಿದ್ದಾರೆ.

ಮೇ 31 ರವರೆಗೂ ಯಾರೂ ಬರಬೇಡಿ:
ಸೋಂಕು ಜಾಸ್ತಿಯಿರುವ ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದ ಜನ ಬರುವುದು ಬೇಡ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇದು ಲಾಕ್​ಡೌನ್​ 4 ಮುಗಿಯುವವರೆಗೂ ಅಂದ್ರೆ ಮೇ 31 ರವರೆಗೂ ಈ ನಿಯಮ ಜಾರಿಯಲ್ಲಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Published On - 2:35 pm, Mon, 18 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us