AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಕೊರೊನಾ ಸೋಂಕು ದೃಢ

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 2 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ವರದಿ ಆಗಿದೆ. ಈ ಮಧ್ಯೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಗೂ ಕೊರೊನಾ ಪಾಸಿಟಿವ್ ಆಗಿದೆ.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಕೊರೊನಾ ಸೋಂಕು ದೃಢ
ರಣದೀಪ್ ಸುರ್ಜೇವಾಲಾ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 04, 2022 | 8:17 PM

Share

ದೆಹಲಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಗೆ ಕೊರೊನಾ ಸೋಂಕು ದೃಢವಾಗಿದೆ. ಕರ್ನಾಟಕ ಅಷ್ಟೇ ಅಲ್ಲದೆ ದೇಶದ ವಿವಿಧ ರಾಜ್ಯಗಳಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದೆ. ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ಶಾಲಾ ಕಾಲೇಜು ಕುರಿತು, 50:50 ನಿಯಮ ಅನ್ವಯಿಸುವ ಬಗ್ಗೆ ನೂತನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ 2 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ವರದಿ ಆಗಿದೆ. ಈ ಮಧ್ಯೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಗೂ ಕೊರೊನಾ ಪಾಸಿಟಿವ್ ಆಗಿದೆ.

ಒಂದೆಡೆ ಕರ್ನಾಟಕ ಕಾಂಗ್ರೆಸ್ ಮೇಕೆದಾಟು ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಪಾದಯಾತ್ರೆ ನಡೆಸಲು ಮುಂದಾಗಿದೆ. ಈ ಬಗ್ಗೆ ಇಂದು (ಜನವರಿ 4) ಕಾಂಗ್ರೆಸ್ ಸಭೆ ಕೂಡ ನಡೆಸಿದೆ. ಸಭೆ ಬಳಿಕ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಏನೇ ಆದರೂ ಮೇಕೆದಾಟು ಪಾದಯಾತ್ರೆ ನಡೆಸಿಯೇ ತೀರುತ್ತೇವೆ ಎಂಬ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ಏನೇ ಮಾಡಿದ್ರೂ ಪಾದಯಾತ್ರೆ ನಿಲ್ಲಿಸಲ್ಲ. ಕೇಸ್ ಆದ್ರೂ ದಾಖಲಿಸಲಿ, ಅರೆಸ್ಟ್ ಬೇಕಾದ್ರೂ ಮಾಡಲಿ. ಮೇಕೆದಾಟು ಜಾರಿಗಾಗಿ ಪಾದಯಾತ್ರೆ ನಡೆದೇ ನಡೆಯುತ್ತೆ. ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಬಹುದು. ನಾವು ನೀರಿಗಾಗಿ ಪಾದಯಾತ್ರೆ ಮಾಡಬಾರದಾ? ಎಂದು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ.

ರೆಡ್​ ಅಲರ್ಟ್ ಅಡಿ ಬಂದಿರುವ ಬೆಂಗಳೂರು ಮಹಾನಗರ ಬೆಂಗಳೂರಿನಲ್ಲಿ ದಿನೇದಿನೆ ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಬೆಂಗಳೂರು ಮಹಾನಗರ ರೆಡ್​ ಅಲರ್ಟ್ ಅಡಿ ಬಂದಿದೆ. ಕರ್ನಾಟಕ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳ ಆಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಬೆಂಗಳೂರಿನ ಪಾಸಿಟಿವಿಟಿ ರೇಟ್, ಜಿಲ್ಲೆಗಳ ಪಾಸಿಟಿವಿಟಿ ರೇಟ್​ ಬಗ್ಗೆ ಪವರ್ ಪಾಯಿಂಟ್ ಪ್ರೆಸೆಂಟೇಷನ್​ ಮೂಲಕ ಸಿಎಂಗೆ ವಿವರಣೆ ನೀಡಲಾಗಿದೆ. ಬೆಂಗಳೂರಿನ ವಲಯವಾರು ಪಾಸಿಟಿವಿಟಿ ರೇಟ್​ ಬಗ್ಗೆ ವಿವರಣೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಕರ್ನಾಟಕ ರಾಜ್ಯದಲ್ಲಿ ಬೆಡ್ ಸ್ಟೇಟಸ್ ಬಗ್ಗೆ ಮಾಹಿತಿ ಪಡೆಯಲಾಗಿದೆ. ಎಷ್ಟು ಬೆಡ್ ವ್ಯವಸ್ಥೆ ಇದೆ‌‌. ಹೆಚ್ಚುವರಿಯಾಗಿ ಎಷ್ಟು ಬೆಡ್ ಹೆಚ್ಚಿಸಬೇಕು. ಬೆಡ್ ಗಳನ್ನ ಹೆಚ್ಚಳ ಮಾಡಿಕೊಳ್ಳ ಬೇಕು ಎಂದು ತಜ್ಞರಿಂದ ಮಾಹಿತಿ ಲಭ್ಯವಾಗಿದೆ. ಆಕ್ಸಿಜನ್ ಬೆಡ್​ಗಳ ಲಭ್ಯತೆ ಸದ್ಯಕ್ಕೆ ಕೊರತೆ ಇಲ್ಲ. ಕೊವಿಡ್ ಕೇರ್ ಸೆಂಟರ್ ಗಳನ್ನೂ ಪ್ರಾರಂಭಿಸಬೇಕು. ಈಗ ನಿಧಾನವಾಗಿ ಆಸ್ಪತ್ರೆ ಬೆಡ್​ಗಳು ಭರ್ತಿ ಆಗುತ್ತಿವೆ. ಇದುವರೆಗೆ ಸರಾಸರಿ ಶೇಕಡಾ 5ರಷ್ಟು ಆಸ್ಪತ್ರೆ ಬೆಡ್ ಭರ್ತಿ ಆಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 2,479 ಜನರಿಗೆ ಕೊರೊನಾ ದೃಢ; 4 ಮಂದಿ ಸಾವು

ಇದನ್ನೂ ಓದಿ: ಬೆಂಗಳೂರಿನಲ್ಲಿ 2 ಸಾವಿರ ಗಡಿ ದಾಟಿದ ಕೊರೊನಾ ಕೇಸ್​; 24 ಗಂಟೆಯಲ್ಲಿ ಕೊವಿಡ್ ಪ್ರಕರಣಗಳು​ ದ್ವಿಗುಣ

Published On - 8:15 pm, Tue, 4 January 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!