AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ಬಗ್ಗೆ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​​ಗೆ ಕರ್ನಾಟಕ ಕೋರ್ಟ್ ಸಮನ್ಸ್

ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸಿದ ಹೇಳಿಕೆಗಳ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ, ರಾಜ್ಯ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ಮಾರ್ಚ್ 4 ರಂದು ಕರ್ನಾಟಕ ಪ್ರತಿನಿಧಿ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಕಳೆದ ವರ್ಷ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಈ ವಿಷಯ ದೊಡ್ಡ ಚರ್ಚೆಯಾಗಿತ್ತು.

ಸನಾತನ ಧರ್ಮ ಬಗ್ಗೆ ಹೇಳಿಕೆ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​​ಗೆ ಕರ್ನಾಟಕ ಕೋರ್ಟ್ ಸಮನ್ಸ್
ಉದಯನಿಧಿ ಸ್ಟಾಲಿನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Feb 02, 2024 | 7:50 PM

Share

ಬೆಂಗಳೂರು ಫೆಬ್ರುವರಿ 02:  ಕಳೆದ ವರ್ಷ ಸನಾತನ ಧರ್ಮದ (Sanatana Remark) ಹೇಳಿಕೆಗಳಿಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ (Tamil Nadu Minister) ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ವಿಚಾರಣೆಗೆ ಹಾಜರಾಗುವಂತೆ ಕರ್ನಾಟಕ ನ್ಯಾಯಾಲಯ ಅವರಿಗೆ ಸಮನ್ಸ್ ನೀಡಿದೆ. ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸಿದ ಹೇಳಿಕೆಗಳ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರೂ ಆಗಿರುವ ರಾಜ್ಯ ಕ್ರೀಡಾ ಸಚಿವರನ್ನು ಮಾರ್ಚ್ 4 ರಂದು ಕರ್ನಾಟಕ ರೆಪ್ರಸೆಂಟೇಟಿವ್ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ಕಳೆದ ವರ್ಷ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೂ ಮುನ್ನ ಈ ವಿಷಯ ದೊಡ್ಡ ಚರ್ಚೆಯಾಗಿತ್ತು.

ಪರಮೇಶ್ ಎಂಬ ವ್ಯಕ್ತಿ ಜೂನಿಯರ್ ಸ್ಟಾಲಿನ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. 46ರ ಹರೆಯದ ಸ್ಟಾಲಿನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು ಕಾನೂನಾತ್ಮಕವಾಗಿ ಸಮಸ್ಯೆಯನ್ನು ಎದುರಿಸುತ್ತಾರೆ ಎಂದು ಹೇಳಿದರು.

“ನಾನು ಮಾತನಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ, ನಾವು ಪ್ರಕರಣವನ್ನು ಕಾನೂನಾತ್ಮಕವಾಗಿ ಎದುರಿಸುತ್ತೇವೆ. ನಾನು ನನ್ನ ನಿಲುವನ್ನು ಬದಲಾಯಿಸುವುದಿಲ್ಲ. ನಾನು ನನ್ನ ಸಿದ್ಧಾಂತದ ಬಗ್ಗೆ ಮಾತ್ರ ಮಾತನಾಡಿದ್ದೇನೆ” ಎಂದು ಅವರು ಕಳೆದ ವರ್ಷ ಸುದ್ದಿಗಾರರಿಗೆ ತಿಳಿಸಿದರು.

ಸೆಪ್ಟೆಂಬರ್ 2023 ರಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದರು.‘ಸನಾತನ ಧರ್ಮ’ವು ಡೆಂಗ್ಯೂ, ಮಲೇರಿಯಾ, ಕೊರೊನಾ ಇದ್ದಂತೆ. ಕೇವಲ ಸನಾತನ ಧರ್ಮವನ್ನು ವಿರೋಧಿಸಿದರೆ ಸಾಲದು ಅದನ್ನು ನಿರ್ಮೂಲನೆ ಮಾಡಬೇಕು. ನಾವು ಡೆಂಗ್ಯೂ, ಮಲೇರಿಯಾ, ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ನಾವು ಅದನ್ನು ತೊಡೆದುಹಾಕಬೇಕು, ಹಾಗೆಯೇ ಸನಾತನ ಧರ್ಮವನ್ನೂ ಕೂಡ ವಿರೋಧಿಸಿ ಅದನ್ನು ನಾಶ ಮಾಡಬೇಕು ಎಂದು ಹೇಳಿದ್ದರು.

ಅರ್ಜಿದಾರ ಪರಮೇಶ್ ಪರ ವಾದ ಮಂಡಿಸಿದ ವಕೀಲ ಧರ್ಮಪಾಲ್, ”ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ವಿರೋಧಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ಡೆಂಗ್ಯೂ, ಮಲೇರಿಯಾದಂತೆ ಓಡಿಸಬೇಕು ಎಂದು ಸನಾತನ ಧರ್ಮದ ಬಗ್ಗೆ ಕಾಮೆಂಟ್ ಮಾಡಿದ್ದಾರೆ. ಎಲ್ಲೆಂದರಲ್ಲಿ ಪ್ರಕಟವಾಗಿದ್ದು, ಬಳಿಕ ನಿಲುವಿಗೆ ಅಂಟಿಕೊಂಡು ಅದೇ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಅದನ್ನು ನ್ಯಾಯಾಲಯದಲ್ಲಿಯೂ ಎದುರಿಸುವುದಾಗಿ ಹೇಳಿದರು.

ಇದನ್ನೂ ಓದಿ:ಸನಾತನ ಧರ್ಮ ವಿರುದ್ಧದ ಹೇಳಿಕೆ, ನನ್ನ ನಿಲುವು ಬದಲಾಗದು ಎಂದ ಉದಯನಿಧಿ ಸ್ಟಾಲಿನ್

ರಾಮಮಂದಿರ ಉದ್ಘಾಟನೆಯೊಂದಿಗೆ ಹಿಂದೂ ಧರ್ಮದ ಬಗ್ಗೆ ಸಾಕಷ್ಟು ಶ್ರದ್ಧೆ, ಜಾಗೃತಿ ಮೂಡಿದೆ.ಇಂತಹ ಸಮಯದಲ್ಲಿ ಈ ರೀತಿಯ ಹೇಳಿಕೆಗಳು ಹಿಂದೂ ಧರ್ಮವನ್ನು ಅನುಸರಿಸುವವರ ಭಾವನೆಗೆ ಧಕ್ಕೆ ತಂದಿದೆ ಎಂದು ಪರಮೇಶ್ ಅವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:31 pm, Fri, 2 February 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!