AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರ ಪರಿಹಾರ: 2 ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ಸುಪ್ರೀಂಗೆ ಕೇಂದ್ರ ಸರ್ಕಾರ ಭರವಸೆ

ಕೇಂದ್ರ ಸರ್ಕಾರದಿಂದ ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, "ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?" ಎಂದು ಖಾರವಾಗಿ ಪ್ರಶ್ನಿಸಿತು. ಇದಕ್ಕೆ, "ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ" ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು.

ಬರ ಪರಿಹಾರ: 2 ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ: ಸುಪ್ರೀಂಗೆ ಕೇಂದ್ರ ಸರ್ಕಾರ ಭರವಸೆ
ಸುಪ್ರೀಂಕೋರ್ಟ್​
TV9 Web
| Edited By: |

Updated on:Apr 08, 2024 | 1:36 PM

Share

ನವದೆಹಲಿ/ಬೆಂಗಳೂರು, ಏಪ್ರಿಲ್​ 08: ಕೇಂದ್ರ ಸರ್ಕಾರದಿಂದ (Union Government) ಬರ ಪರಿಹಾರ ಕೊಡಿಸುವಂತೆ ಕರ್ನಾಟಕ ಸರ್ಕಾರ (Karnataka Government) ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, “ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ?” ಎಂದು ಕೇಂದ್ರ ಸರ್ಕಾರಕ್ಕೆ ಖಾರವಾಗಿ ಪ್ರಶ್ನಿಸಿತು. ಇದಕ್ಕೆ, “ಎರಡು ವಾರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಕೇಂದ್ರ ಸರ್ಕಾರ ಪರವಾಗಿ ವಾದ ಮಂಡಿಸಿದ ವಕೀಲ ಎಸ್‌ಜಿ ಮೆಹ್ತಾ ಕೋರ್ಟ್​ ತಿಳಿಸಿದರು.

ಕರ್ನಾಟಕ ಸರ್ಕಾರ ಪರ ಹಿರಿಯ ವಕೀಲ ಕಪಿಲ್ ಸಿಬಲ್​ ವಾದ: ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷ ಡಿಸೆಂಬರ್​ನಲ್ಲೇ ಕರ್ನಾಟಕ ಸರ್ಕಾರ ಮನವಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಿಲ್ಲ. ಹೀಗಾಗಿ ಸುಪ್ರೀಂಕೋರ್ಟ್​ನಲ್ಲಿ ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್​: ಎಲ್ಲ ವಿಚಾರಗಳಿಗೂ ರಾಜ್ಯಗಳು ಸುಪ್ರೀಂಕೋರ್ಟ್​ಗೆ ಬರಬೇಕಾ? ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿತು.

ಕೇಂದ್ರ ಸರ್ಕಾರದ ಪರ ವಕೀಲರ ವಾದ: ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ನ್ಯಾಯ ಪೀಠಕ್ಕೆ ತಿಳಿಸಿದರು.

ನೋಟಿಸ್ ಕೊಡಬೇಡಿ ಅಂತ ಕೂಡ ಕೇಳಿಕೊಂಡಿದ್ದಾರೆ: ಕೃಷ್ಣಭೈರೇಗೌಡ

ವಾದ ಬಗೆಹರಿಸುತ್ತೇವೆ ಎಂದು ಸುಪ್ರೀಂಕೋರ್ಟ್​ನಲ್ಲಿ ಕೇಂದ್ರ ಸರ್ಕಾರ ಹೇಳಿದೆ. ಅಟಾರ್ನಿ ಜನರಲ್‌, ಸಾಲಿಸಿಟರ್ ಜನರಲ್ ಹಾಜರಾಗಿದ್ದರು. ಎರಡು ವಾರದಲ್ಲಿ ಪ್ರತಿಕ್ರಿಯೆ ನೀಡುತ್ತೇವೆ ಎಂದಿದ್ದಾರೆ. ನೋಟಿಸ್ ಕೊಡಬೇಡಿ ಅಂತ ಕೂಡ ಕೇಳಿಕೊಂಡಿದ್ದಾರೆ. ಎಲ್ಲಿ ಕೇಂದ್ರಕ್ಕೆ ಮುಜುಗರ ಆಗುತ್ತೋ ಎಂಬ ಆತಂಕವಿದೆ. ಹಾಗಾಗಿ ನೋಟಿಸ್ ಕೊಡಬೇಡಿ ಎಂದು ಕೇಂದ್ರ ಕೇಳಿದೆ ಎಂದು ದೆಹಲಿಯಲ್ಲಿ ಸಚಿವ ಕೃಷ್ಣಭೈರೇಗೌಡ ಹೇಳಿದರು.

ಇದನ್ನೂ ಓದಿ: 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆ: ಕರ್ನಾಟಕ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಅಮಿತ್ ಶಾ, ನಿರ್ಮಲಾ ಸೀತಾರಾಮನ್​ ಮಹಾನ್ ಸುಳ್ಳುಗಾರರು: ಗುಂಡೂರಾವ್​

ಅಮಿತ್ ಶಾ, ನಿರ್ಮಲಾ ಸೀತಾರಾಮನ್​ ಮಹಾನ್ ಸುಳ್ಳುಗಾರರು. ಕರ್ನಾಟಕ ತಡವಾಗಿ ಅರ್ಜಿ ಸಲ್ಲಿಸಿತು ಅಂತ ಅಮಿತ್ ಶಾ ಹೇಳಿದರು. ಆ ವಾದವನ್ನು ಅಮಿತ್ ಶಾ ಕೋರ್ಟ್ ಮುಂದೆ ಮಂಡಿಸಬೇಕು. ಅಮಿತ್ ಶಾ ರಾಜ್ಯಕ್ಕೆ ಬಂದು ಭಾಷಣ ಮಾಡುವುದಲ್ಲ ಅಫಿಡವಿಟ್ ಸಲ್ಲಿಸಲಿ. ಕೇಂದ್ರ ಸಚಿವ ಅಮಿತ್ ಶಾ ಸತ್ಯ ಒಪ್ಪಿಕೊಂಡರೆ ಜನರು ಕ್ಷಮಿಸುತ್ತಾರೆ. ಇದೊಂದು ಮಲತಾಯಿ ಧೋರಣೆ ಅನ್ನೋದು ಜನರಿಗೆ ಗೊತ್ತಾಗಿದೆ. ಇಕ್ಕಟ್ಟಿನ ಪರಿಸ್ಥಿತಿಯಲ್ಲಿ ಆರ್.ಅಶೋಕ್, ಬಿಜೆಪಿಯವರು ಇದ್ದಾರೆ. ವಿರೋಧ ಪಕ್ಷದ ನಾಯಕ ಅಶೋಕ್​ಗೆ ಜ್ಞಾನದ ಕೊರತೆ ಇದೆ. ಹೀಗೆ ಮಾತನಾಡಿದರೆ ವಿಪಕ್ಷ ಸ್ಥಾನಕ್ಕೂ ಮರ್ಯಾದೆ ಇರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:25 pm, Mon, 8 April 24

Follow Us
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್