AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಭದ್ರತೆ ಒದಗಿಸಿದ ಸರ್ಕಾರ

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ತಾತ್ಕಾಲಿಕವಾಗಿ ಬೆಂಗಾವಲು ವಾಹನ ಸೌಲಭ್ಯ ಮತ್ತು ಪೊಲೀಸ್​ ಭದ್ರತೆ ನೀಡಿದೆ.

ಬಿವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಭದ್ರತೆ ಒದಗಿಸಿದ ಸರ್ಕಾರ
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಕಿರಣ್​ ಹನಿಯಡ್ಕ
| Edited By: |

Updated on:Nov 13, 2023 | 1:46 PM

Share

ಬೆಂಗಳೂರು ನ.13: ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಪುತ್ರ, ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ (BY Vijayendra) ಬಿಜೆಪಿ ರಾಜ್ಯ ಬಿಜೆಪಿ (BJP) ಘಟಕದ ಅಧ್ಯಕ್ಷರಾಗಿ ನೇಮಕವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅವರಿಗೆ ತಾತ್ಕಾಲಿಕವಾಗಿ ಬೆಂಗಾವಲು ವಾಹನ ಮತ್ತು ಪೊಲೀಸ್​ ಭದ್ರತೆ ನೀಡಿದೆ. ಪದಗ್ರಹಣದ ಬಳಿಕ ಅಧಿಕೃತವಾಗಿ ಸಿಬ್ಬಂದಿ ಸಹಿತ ಬೆಂಗಾವಲು ವಾಹನವನ್ನು ಸರ್ಕಾರ ಒದಗಿಸಲಿದೆ.

ರಾಜ್ಯಾಧ್ಯಕ್ಷರಾಗಿ ನೇಮಕವಾದ ಮೇಲೆ ಶಾಸಕ ಬಿವೈ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿವೈ ವಿಜಯೇಂದ್ರ ಅವರು ಮೊದಲಿಗೆ ಬೂತ ಮಟ್ಟದ ಅಧ್ಯಕ್ಷರನ್ನು ಭೇಟಿಯಾಗಿ ಸಿಹಿ ತಿನ್ನಿಸಿದರು. ಬಳಕಿ ರವಿವಾರ ತುಮಕೂರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಂತರ ಆದಿಚುಂಚನಗಿರಿ ಶ್ರೀಗಳನ್ನು ಭೇಟಿಯಾಗಿ ಆಶಿರ್ವಾದ ಪಡೆದರು.

ಇದನ್ನೂ ಓದಿ: ಮೊದಲ ಸವಾಲು ಎದುರಿಸಲು ನೂತನ ಅಧ್ಯಕ್ಷ ವಿಜಯೇಂದ್ರ ಮೆಗಾ ಪ್ಲ್ಯಾನ್: ಏನದು?

ಇಂದು (ನ.14) ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್​ ಬೊಮ್ಮಾಯಿ, ಎಸ್​ಎಂ ಕೃಷ್ಣ ಅವರನ್ನು ಭೇಟಿಯಾದರು. ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು.

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ: ಪ್ರಜ್ವಲ್​ ರೇವಣ್ಣ

ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ. ಒಂದೆಡೆ ಜೆಡಿಎಸ್​ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕವಾಗಿದ್ದು, ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕವಾಗಿದ್ದಾರೆ. ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್​​ಡಿ ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Mon, 13 November 23

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?