AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದಿ ನಾಡಲ್ಲಿ ಫಳಫಳಿಸುತ್ತಿದೆ ಕನ್ನಡ ಫಲಕ! ಎಲ್ಲಿ?

ಕರ್ನಾಟಕ ಸರ್ಕಾರ 2020-21ನ್ನು ಕನ್ನಡ ಕಾಯಕ ವರ್ಷ ಎಂದು ಘೋಷಿಸಿದೆ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರ ದೆಹಲಿಯಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸಿದೆ. ಇದು ದೆಹಲಿ ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ. ದೆಹಲಿ ಕನ್ನಡ ಹಿರಿಯ ಮಾಧ್ಯಮಿಕ ಶಾಲೆಯ ನಾಮಫಲಕವನ್ನು ಅಳವಡಿಸಲಾಗಿದೆ. ಈ ಮಾಹಿತಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರವು ತನ್ನ ಅಧಿಕೃತ ಫೇಸ್​ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಕನ್ನಡ ಭಾಷೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನವೆಂಬರ್ 1ರಂದು ಕನ್ನಡ ಕಾಯಕ ವರ್ಷವನ್ನಾಗಿ ಘೋಷಿಸಿದ್ದರು. ‘ಕನ್ನಡ ಭಾಷೆಯ ಬಳಕೆ […]

ಹಿಂದಿ ನಾಡಲ್ಲಿ ಫಳಫಳಿಸುತ್ತಿದೆ ಕನ್ನಡ ಫಲಕ! ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on: Nov 10, 2020 | 4:13 PM

ಕರ್ನಾಟಕ ಸರ್ಕಾರ 2020-21ನ್ನು ಕನ್ನಡ ಕಾಯಕ ವರ್ಷ ಎಂದು ಘೋಷಿಸಿದೆ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರ ದೆಹಲಿಯಲ್ಲಿ ಮೊದಲ ಬಾರಿಗೆ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸಿದೆ. ಇದು ದೆಹಲಿ ಕನ್ನಡಿಗರ ಸಂತಸಕ್ಕೆ ಕಾರಣವಾಗಿದೆ.

ದೆಹಲಿ ಕನ್ನಡ ಹಿರಿಯ ಮಾಧ್ಯಮಿಕ ಶಾಲೆಯ ನಾಮಫಲಕವನ್ನು ಅಳವಡಿಸಲಾಗಿದೆ. ಈ ಮಾಹಿತಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರವು ತನ್ನ ಅಧಿಕೃತ ಫೇಸ್​ಬುಕ್ ಪುಟದಲ್ಲಿ ಹಂಚಿಕೊಂಡಿದೆ. ಕನ್ನಡ ಭಾಷೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನವೆಂಬರ್ 1ರಂದು ಕನ್ನಡ ಕಾಯಕ ವರ್ಷವನ್ನಾಗಿ ಘೋಷಿಸಿದ್ದರು.

‘ಕನ್ನಡ ಭಾಷೆಯ ಬಳಕೆ ನವೆಂಬರ್‌ಗಷ್ಟೇ ಸೀಮಿತವಾಗದೆ ವರ್ಷಪೂರ್ತಿ ಆಚರಿಸುವಂತಾಗಬೇಕು. ಬದಲಾದ ಕಾಲಘಟ್ಟದಲ್ಲಿ ಕನ್ನಡವನ್ನು ತಂತ್ರಜ್ಞಾನದ ಭಾಷೆಯನ್ನಾಗಿಸಬೇಕಿದೆ. ಇದಕ್ಕಾಗಿ ಕನ್ನಡ ಕಾಯಕ ವರ್ಷದಲ್ಲಿ ನಾನಾ ಕಾರ್ಯಕ್ರಮ ಆಯೋಜಿಸಲಾಗುವುದು. ಕಾರ್ಯಕ್ರಮದ ರೂಪುರೇಷೆಗಳನ್ನು ಅಂತಿಮಗೊಳಿಸಿ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿರುವುದನ್ನು ಇಲ್ಲಿ ಉಲ್ಲೇಖಿಸಲಬೇಕಿದೆ. ಒಟ್ಟಿನಲ್ಲಿ ಎಲ್ಲೇ ಇರು ಹೇಗೆ ಇರು ಎಂದೆಂದಿಗೂ ನೀ ಕನ್ನಡಿಗನಾಗಿರು ಎಂಬ ಸಾಲುಗಳನ್ನು ಈ ನಾಮಫಲಕ ನೆನಪಿಸುವಂತಿದೆ.

https://www.facebook.com/1436646726611343/posts/2874813136128021/

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ