ಹಿಜಾಬ್ ನಿಷೇಧ: ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋದ ವಿದ್ಯಾರ್ಥಿನಿ

ಶಾಲಾ-ಕಾಲೇಜುಗಳಲ್ಲಿ ಹಿಜಾಬ್  ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ರಜಾಕಾಲದ ಅರ್ಜಿಯನ್ನು ಸಲ್ಲಿಸಲಾಗಿದೆ.

ಹಿಜಾಬ್ ನಿಷೇಧ: ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋದ ವಿದ್ಯಾರ್ಥಿನಿ
ಸುಪ್ರೀಂಕೋರ್ಟ್
Follow us
| Updated By: ರಶ್ಮಿ ಕಲ್ಲಕಟ್ಟ

Updated on:Mar 15, 2022 | 7:27 PM

ದೆಹಲಿ:   ಹಿಜಾಬ್ (Hijab) ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಮತ್ತು ಶಾಲಾ-ಕಾಲೇಜುಗಳಲ್ಲಿ ಹಿಜಾಬ್  ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ (Supreme Court) ವಿಶೇಷ ರಜಾಕಾಲದ ಅರ್ಜಿಯನ್ನು(Special Leave Petition) ಸಲ್ಲಿಸಲಾಗಿದೆ. ನಿಬಾ ನಾಜ್ ಎಂಬ ಮುಸ್ಲಿಂ ವಿದ್ಯಾರ್ಥಿನಿ ಅಡ್ವೊಕೇಟ್ ಆನ್ ರೆಕಾರ್ಡ್ ಅನಸ್ ತನ್ವೀರ್ ಮೂಲಕ ವಿಶೇಷ ರಜಾಕಾಲದ ಅರ್ಜಿ ಸಲ್ಲಿಸಿದ್ದಾರೆ ಎಂದು ಲೈವ್ ಲಾ  ವರದಿ ಮಾಡಿದೆ. ಕರ್ನಾಟಕ ಹೈಕೋರ್ಟ್‌ನ ಪೂರ್ಣ ಪೀಠ ಇಂದು ಬೆಳಿಗ್ಗೆ ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಹೇಳಿದೆ. ರಾಜ್ಯವು ಶಾಲಾ ಸಮವಸ್ತ್ರ ಆರ್ಟಿಕಲ್ 25 ರ ಅಡಿಯಲ್ಲಿ ವಿದ್ಯಾರ್ಥಿಗಳ ಹಕ್ಕುಗಳಿಗೆ ಸಮಂಜಸವಾದ ನಿರ್ಬಂಧವಾಗಿದೆ. ಆದ್ದರಿಂದ ಫೆಬ್ರವರಿ 5 ರಂದು ಕರ್ನಾಟಕ ಸರ್ಕಾರ ಹೊರಡಿಸಿದ ಸರ್ಕಾರಿ ಆದೇಶವು ಅವರ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ ಎಂದು ನ್ಯಾಯಾಲಯವು ಹೇಳಿದೆ. ರಾಜ್ಯವು ಶಾಲಾ ಸಮವಸ್ತ್ರದ ಪ್ರಿಸ್ಕ್ರಿಪ್ಷನ್ ಆರ್ಟಿಕಲ್ 25 ರ ಅಡಿಯಲ್ಲಿ ವಿದ್ಯಾರ್ಥಿಗಳ ಹಕ್ಕುಗಳ ಸಮಂಜಸವಾದ ನಿರ್ಬಂಧವಾಗಿದೆ ಎಂದು ನ್ಯಾಯಾಲಯವು ಹೇಳಿದೆ. ಹಾಗಾಗಿ ಫೆಬ್ರವರಿ 5 ರಂದು ಕರ್ನಾಟಕ ಸರ್ಕಾರ ಹೊರಡಿಸಿದ ಸರ್ಕಾರಿ ಆದೇಶವು ಅವರ ಹಕ್ಕುಗಳ ಉಲ್ಲಂಘನೆಯಾಗಿಲ್ಲ. ಅದರಂತೆ, ಹಿಜಾಬ್ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ ಸರ್ಕಾರಿ ಪಿಯು ಕಾಲೇಜುಗಳ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಉಡುಪಿಯಿಂದ ಶುರುವಾಗಿದ್ದ ಹಿಜಾಬ್ ಗಲಾಟೆ ಇಡೀ ವಿಶ್ವಕ್ಕೆ ವ್ಯಾಪಿಸಿತ್ತು. ಮುಸ್ಲಿಂ ಸಮುದಾಯದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ನಮ್ಮ ಹಕ್ಕು,  ನಾವು ಧರಿಸಿಯೇ ಶಾಲೆ- ಕಾಲೇಜಿಗೆ ಬರುತ್ತೇವೆ ಎಂದು ಪ್ರತಿಭಟನೆ ನಡೆಸಿದ್ದರು. ಜೊತೆಗೆ ಹಿಜಾಬ್ ಧರಿಸುವವರೆಗೆ ಕೇಸರಿ ಶಾಲು ಧರಿಸುತ್ತೇವೆ ಅಂತ ಹಲವು ಹಿಂದೂ ವಿದ್ಯಾರ್ಥಿಗಳು ಪಟ್ಟು ಬಿದ್ದಿದ್ದರು.

ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್​ರವರ ಪೂರ್ಣ ಪೀಠ ತೀರ್ಮಾನ ಕೈಗೊಂಡಿದ್ದು, ಸಮವಸ್ತ್ರ ನಿಗದಿಪಡಿಸುವ ಅಧಿಕಾರ ಶಾಲೆಗಳಿಗಿದೆ. ರಾಜ್ಯ ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ. ಉಡುಪಿ ಕಾಲೇಜಿಗೆ ನಿರ್ದೇಶನ ಹೇರುವ ಅಗತ್ಯವಿಲ್ಲ ಎಂದು ಹೈಕೋರ್ಟ್  ಹೇಳಿತ್ತು.

ಸಿಎಂ ಬೊಮ್ಮಾಯಿ ಹೇಳಿದ್ದೇನು?: ಈಗತಾನೇ ಮಾಧ್ಯಮಗಳಿಂದ ಹೈಕೋರ್ಟ್​ನ ಸಮವಸ್ತ್ರದ ತೀರ್ಪಿನ ಮಾಹಿತಿ ಬಂದಿದೆ. ಸಮವಸ್ತ್ರವನ್ನ ಎತ್ತಿ ಹಿಡಿದಿದೆ. ಮಕ್ಕಳ ಶಿಕ್ಷಣದ ಪ್ರಜ್ಞೆ ಇದೆ. ಮಕ್ಕಳಿಗೆ ಶಿಕ್ಷಣಕ್ಕಿಂತ ಬೇರೆ ಯಾವುದು ಇಲ್ಲ. ಇದನ್ನ ಮಕ್ಕಳು ಪಾಲಿಸಬೇಕು. ಇದನ್ನ ಅನುಷ್ಠಾನಕ್ಕೆ ತರುವ ಸಂದರ್ಭದಲ್ಲಿ ಎಲ್ಲರು ಸಹಕರಿಸಬೇಕು. ಶಾಂತಿ ಸುವ್ಯವಸ್ಥೆ ಬಹಳ ಮುಖ್ಯ. ನಾನು ಎಲ್ಲಾ ಸಮುದಾಯದ ನಾಯಕರಿಗೆ ಶಿಕ್ಷಕರಿಗೆ ಪೋಷಕರಿಗೆ ಮಕ್ಕಳಿಗೆ ಮನವಿ ಮಾಡುತ್ತೇನೆ. ಎಲ್ಲರೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಹಕರಿಸಬೇಕು. ಎಲ್ಲಾ ಪರೀಕ್ಷೆಗಳಿಗೂ ಭಾಗವಹಿಸಬೇಕು. ಶಿಕ್ಷಣ ಬಹಳ ಮುಖ್ಯ. ಕಾನೂನು ಸುವ್ಯವಸ್ಥೆಗೆ ನಿಯೋಜನೆ ಮಾಡಿದ್ದೇವೆ. ಹೈಕೋರ್ಟ್ ತೀರ್ಪನ್ನ ಎಲ್ಲರೂ ಪಾಲಿಸಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ:ಹಿಜಾಬ್ ತೀರ್ಪು: ಭಟ್ಕಳದಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಂ ವರ್ತಕರು

Published On - 5:55 pm, Tue, 15 March 22

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​