AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon 2021: ದೆಹಲಿಗೆ ಇಂದು ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಇಂದಿನಿಂದ ತೀವ್ರಗೊಳ್ಳಲಿದೆ ಮಳೆ

Karnataka Weather : ಕರ್ನಾಟಕದ ಕರಾವಳಿ ಪ್ರದೇಶದಲ್ಲೂ ಕೂಡ ಶನಿವಾರವೇ ರೆಡ್​ ಅಲರ್ಟ್​ ಜಾರಿಯಾಗಿದೆ. ಉಳಿದಂತೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

Monsoon 2021: ದೆಹಲಿಗೆ ಇಂದು ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಇಂದಿನಿಂದ ತೀವ್ರಗೊಳ್ಳಲಿದೆ ಮಳೆ
ಮಳೆ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jul 11, 2021 | 11:15 AM

Share

ರಾಷ್ಟ್ರರಾಜಧಾನಿ ದೆಹಲಿ ಸೇರಿ, ದೇಶದ ವಾಯುವ್ಯ ಭಾಗದ ಪ್ರದೇಶಗಳಿಗೆ ಇಂದು ಮಾನ್ಸೂನ್ (Monsoon 2021) ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದೆಹಲಿಗೆ ಸಾಮಾನ್ಯವಾಗಿ ಜೂ.29ರ ಹೊತ್ತಿಗೆಲ್ಲ ಮುಂಗಾರು ಪ್ರವೇಶ ಆಗುತ್ತದೆ. ಆದರೆ ಈ ಬಾರಿ ವಿಳಂಬ ಆಗಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೆಚ್ಚಿನ ಶಾಖ, ಇಬ್ಬನಿಯ ವಾತಾವರಣ ಇತ್ತು. ಶುಕ್ರವಾರ ದೆಹಲಿಯಲ್ಲಿ ಮುಂಗಾರು ಪೂರ್ವ ಮಳೆಯಾಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಮಳೆಯಾಗಲಿಲ್ಲ.

ಇಂದು ದೆಹಲಿಯನ್ನು ಪ್ರವೇಶಿಸುವ ನೈಋತ್ಯ ಮಾನ್ಸೂನ್​ ಜು.13ರೊಳಗೆ ದೆಹಲಿ, ಹರ್ಯಾಣ, ಪಂಜಾಬ್​​ನ ಭಾಗಗಳಲ್ಲಿ ತೀವ್ರಗೊಳ್ಳಲಿದ್ದು, ಹೆಚ್ಚಿನ ಮಳೆ ತರಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಈ ಮಧ್ಯೆ ದೆಹಲಿ ಗರಿಷ್ಠ ತಾಪಮಾನ ಶನಿವಾರ 39.8 ಡಿಗ್ರಿ ಸೆಲ್ಸಿಯಸ್​​ನಷ್ಟಿತ್ತು. ದೆಹಲಿಯಲ್ಲಿ ಕಳೆದ 15ವರ್ಷಗಳಲ್ಲಿ ಇದೇ ತುಂಬ ವಿಳಂಬಿತ ಮಾನ್ಸೂನ್​. ಇಷ್ಟು ದಿನಗಳ ಕಾಲ ಮುಂದೂಡಲ್ಪಟ್ಟಿರಲಿಲ್ಲ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲದೀಪ್​ ಶ್ರೀವತ್ಸ ತಿಳಿಸಿದ್ದಾರೆ. ಈ ಮಧ್ಯೆ ಕೇರಳದಲ್ಲಿ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಇಂದು ರೆಡ್​ಅಲರ್ಟ್​ ಘೋಷಣೆಯಾಗಿದೆ.

ಕರ್ನಾಟಕ ಹವಾಮಾನ (Karnataka Weather) ಕರ್ನಾಟಕದ ಕರಾವಳಿ ಪ್ರದೇಶದಲ್ಲೂ ಕೂಡ ಶನಿವಾರವೇ ರೆಡ್​ ಅಲರ್ಟ್​ ಜಾರಿಯಾಗಿದೆ. ಉಳಿದಂತೆ ನಾಲ್ಕು ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. ರಾಜ್ಯ ಹಲವು ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು-ಮಿಂಚು ಸಹಿತ ಸಿಕ್ಕಾಪಟೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕರ್ನಾಟಕದ ಕರಾವಳಿ ತೀರಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡಗಳಲ್ಲಿ ರೆಡ್​ ಅಲರ್ಟ್​, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್​ ಜಾರಿಯಾಗಿದೆ. ಇನ್ನುಳಿದ ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೀದರ್​, ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇದೆ. ಇನ್ನೂ 24ಗಂಟೆಗಳ ಕಾಲ ಇದು ಮುಂದುವರಿಯಲಿದೆ.

ಜುಲೈ 11ರ ಹೊತ್ತಿಗೆ ಅರೇಬಿಯನ್ ಸಮುದ್ರದಲ್ಲಿ ಮಾನ್ಸೂನ್​ ಬಲಗೊಳ್ಳಲಿದ್ದು, ಬಂಗಾಳಕೊಲ್ಲಿಯ ಪಶ್ಚಿಮ, ಮಧ್ಯ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಕಡಿಮೆ ಒತ್ತಡ ಪ್ರದೇಶ ರಚನೆಯಾಗಲಿದೆ. ಈ ಕಾರಣಕ್ಕೆ ಕರ್ನಾಟಕದಲ್ಲಿ ಇಂದಿನಿಂದ ಮಾನ್ಸೂನ್​ ತೀವ್ರಗೊಂಡು, ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Petrol Price Today: ಶತಕ ಬಾರಿಸಿ ಮುನ್ನುಗ್ಗುತ್ತಲೇ ಇದೆ ಇಂಧನ ದರ; ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಪರಿಶೀಲಿಸಿ

Karnataka Weather IMD issues red alert in coastal districts Of Karnataka

Published On - 9:52 am, Sun, 11 July 21

ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಸ್ಯಾಂಡಲ್​ವುಡ್​ ನಟಿ, ಉದ್ಯಮಿ ನಂಟಿನ ಕೇಸ್​ಗೆ ಬಿಗ್​​ ಟ್ವಿಸ್ಟ್
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ