AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Today: ತಮಿಳುನಾಡು, ಕೇರಳ, ಅಸ್ಸಾಂ, ಅರುಣಾಚಲ ಪ್ರದೇಶ ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ

Rain Updates: ಭಾರತದ ದಕ್ಷಿಣ ಭಾಗದ ಕಡೆಗೆ ಪೂರ್ವ ಮಾರುತಗಳು ತಮಿಳುನಾಡು ಮತ್ತು ಕೇರಳದ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆಯನ್ನು ತರುವ ನಿರೀಕ್ಷೆಯಿದೆ.

Weather Today: ತಮಿಳುನಾಡು, ಕೇರಳ, ಅಸ್ಸಾಂ, ಅರುಣಾಚಲ ಪ್ರದೇಶ ಸೇರಿ ಹಲವೆಡೆ ಇನ್ನೆರಡು ದಿನ ಭಾರೀ ಮಳೆ
ಮಳೆ
TV9 Web
| Edited By: |

Updated on: Feb 12, 2022 | 6:05 AM

Share

ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಸಂಪೂರ್ಣವಾಗಿ ಮಳೆಗಾಲ (Rainfall) ಮುಗಿದು ಕೆಲವು ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ. ಹಲವೆಡೆ ಸೆಖೆ ಕೂಡ ಆರಂಭವಾಗಿದೆ. ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಮುಂದಿನ 2 ದಿನಗಳ ಕಾಲ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ಅಂಡಮಾನ್ ಮತ್ತು ನಿಕೋಬಾರ್, ಪಶ್ಚಿಮ ಬಂಗಾಳ, ಸಿಕ್ಕಿಂ, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದು ತಮಿಳುನಾಡಿನ ದಕ್ಷಿಣ ಕರಾವಳಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಭಾರತದ ದಕ್ಷಿಣ ಭಾಗದ ಕಡೆಗೆ ಪೂರ್ವ ಮಾರುತಗಳು ತಮಿಳುನಾಡು ಮತ್ತು ಕೇರಳದ ಕರಾವಳಿಯಾದ್ಯಂತ ಗುಡುಗು ಸಹಿತ ಮಳೆಯನ್ನು ತರುವ ನಿರೀಕ್ಷೆಯಿದೆ.

ಫೆ. 13ರಿಂದ 15ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಮಳೆಯಾಗಲಿದೆ. ಮುಂದಿನ 24 ಗಂಟೆಗಳಲ್ಲಿ ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ದಟ್ಟವಾದ ಮಂಜಿನ ಪರಿಸ್ಥಿತಿ ಇರಲಿದೆ. ಫೆಬ್ರವರಿ 13-15ರ ವೇಳೆಗೆ ಉತ್ತರ ಪ್ರದೇಶ, ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿಗಳಲ್ಲಿ ದಟ್ಟವಾದ ಮಂಜು ಹೆಚ್ಚಾಗಲಿದೆ. ಮುಂದಿನ 2 ದಿನಗಳಲ್ಲಿ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಚದುರಿದ ಮಳೆಯಾಗುವ ಮುನ್ಸೂಚನೆಯಿದೆ.

ಮುಂದಿನ ಎರಡು ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇಂದು ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಲಘುವಾಗಿ ಮಳೆಯಾಗುವ ನಿರೀಕ್ಷೆಯಿದೆ. ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಇನ್ನೆರಡು ದಿನ ಅಸ್ಸಾಂ ಮತ್ತು ಮೇಘಾಲಯದಲ್ಲಿ ಆಲಿಕಲ್ಲು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಲ್ಲಿ ಬಲವಾದ ಗಾಳಿ ಕಂಡುಬರುತ್ತದೆ.

ಜಮ್ಮು, ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ್ ಜನವರಿ 13 ಮತ್ತು 14ರಂದು ಚದುರಿದ ಮಳೆ ಅಥವಾ ಹಿಮಪಾತ ಉಂಟಾಗಲಿದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಚದುರಿದಂತೆ ಸಾಕಷ್ಟು ವ್ಯಾಪಕವಾದ ಮಳೆ ಅಥವಾ ಹಿಮಪಾತವಾಗಲಿದೆ. ಫೆಬ್ರವರಿ 17ರಿಂದ 21ರವರೆಗೆ ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ತುಂತುರು ಮಳೆಯಾಗಲಿದೆ.

ಇದನ್ನೂ ಓದಿ: Weather Today: ಕರ್ನಾಟಕದಲ್ಲಿ ಚಳಿ ಕಡಿಮೆಯಾಗಿ ಸೆಖೆ ಶುರು; ಈ ರಾಜ್ಯಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ

Weather Today: ಪಂಜಾಬ್, ದೆಹಲಿ ಸೇರಿ 15 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು